ಬ್ರೇಕಿಂಗ್ ನ್ಯೂಸ್
30-12-21 11:08 pm HK Desk news ಕರ್ನಾಟಕ
ಬೆಂಗಳೂರು, ಡಿ.30 : ಕಳೆದ ಮೂರು ವರ್ಷಗಳಲ್ಲಿ ರಾಜ್ಯದ 11 ಸಂಸದರು ಪ್ರಧಾನಿ ಮೋದಿ ಕನಸಿನ ‘ಸಂಸದರ ಆದರ್ಶ ಗ್ರಾಮ’ ಯೋಜನೆಗೆ ಎಳ್ಳುನೀರು ಬಿಟ್ಟಿದ್ದಾರೆ. 2019 ರಿಂದ ಈ ಯೋಜನೆಯಡಿ ಸಂಸದರು ತಮ್ಮ ಗ್ರಾಮಗಳನ್ನು ಆಯ್ಕೆ ಮಾಡಿಲ್ಲ.
ಪ್ರಧಾನಿ ನರೇಂದ್ರ ಮೋದಿ 2014ರ ಅ.11ರಂದು ಈ ಮಹತ್ವಾಕಾಂಕ್ಷೆಯ ಯೋಜನೆ ಜಾರಿಗೆ ತಂದಿದ್ದರು. ಗ್ರಾಮಗಳ ಸಮಗ್ರ ಅಭಿವೃದ್ಧಿಯ ಜತೆಗೆ ಸಂಸದರ ನಾಯಕತ್ವ ಮತ್ತು ಸಾಮರ್ಥ್ಯ ತೋರುವುದು ಯೋಜನೆಯ ಉದ್ದೇಶವಾಗಿತ್ತು. ತುಮಕೂರು ಸಂಸದ ಜಿ.ಎಸ್. ಬಸವರಾಜು ಮಾತ್ರ 2019–20 ಮತ್ತು 2020–21ರಲ್ಲಿ ಗ್ರಾಮಗಳನ್ನು ಆಯ್ಕೆ ಮಾಡಿದ್ದಾರೆ. ಉಳಿದ ಸಂಸದರು ಒಂದು ವರ್ಷ ಆಯ್ಕೆ ಮಾಡಿದ್ದರೆ ಆನಂತರ ಯೋಜನೆಯಿಂದ ದೂರ ಉಳಿದಿದ್ದಾರೆ.
ಚಿತ್ರದುರ್ಗ, ಧಾರವಾಡ, ಉತ್ತರ ಕನ್ನಡ, ಹಾಸನ, ಚಾಮರಾಜನಗರ, ದಕ್ಷಿಣ ಕನ್ನಡ, ಬೀದರ್, ಬೆಂಗಳೂರು ದಕ್ಷಿಣ, ಬೆಂಗಳೂರು ಸೆಂಟ್ರಲ್, ಹಾವೇರಿ, ಶಿವಮೊಗ್ಗ ಕ್ಷೇತ್ರದ ಸಂಸದರು ಕಳೆದ ಮೂರು ವರ್ಷಗಳಿಂದ ಆದರ್ಶ ಗ್ರಾಮ ಯೋಜನೆಯಡಿ ಗ್ರಾಮಗಳ ಆಯ್ಕೆಯನ್ನೇ ಮಾಡಿಲ್ಲ.
ಹಾಸನ ಹೊರತುಪಡಿಸಿ ರಾಜ್ಯದ ಉಳಿದೆಲ್ಲ ಕ್ಷೇತ್ರಗಳಲ್ಲಿ ಬಿಜೆಪಿ ಸಂಸದರೇ ಇದ್ದಾರೆ. ಕೇಂದ್ರ ಸಚಿವರಾದ ಎ. ನಾರಾಯಣಸ್ವಾಮಿ, ಪ್ರಲ್ಹಾದ ಜೋಶಿ, ಭಗವಂತ ಖೂಬಾ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಕ್ಷೇತ್ರಗಳಲ್ಲಿಯೇ ಪ್ರಧಾನಿ ಮೋದಿ ಅವರ ಕನಸಿನ ಯೋಜನೆಗೆ ಎಳ್ಳುನೀರು ಬಿಡಲಾಗಿದೆ.
2019–20ನೇ ಸಾಲಿನಲ್ಲಿ ಬೆಳಗಾವಿ, ಬೆಂಗಳೂರು ಉತ್ತರ, ಚಿಕ್ಕೋಡಿ, ಕೊಪ್ಪಳ, ಕಲಬುರಗಿ, ತುಮಕೂರು, ದಾವಣಗೆರೆ, ಬಳ್ಳಾರಿ ಸಂಸದರು ಮಾತ್ರ ಗ್ರಾಮಗಳನ್ನು ಆಯ್ಕೆ ಮಾಡಿದ್ದಾರೆ. ಉಳಿದ 20 ಸಂಸದರ ಕ್ಷೇತ್ರಗಳಲ್ಲಿ ಆಯ್ಕೆ ನಡೆದಿಲ್ಲ. 2020–21ನೇ ಸಾಲಿನಲ್ಲಿ ಮಂಡ್ಯ, ಬಾಗಲಕೋಟೆ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ, ರಾಯಚೂರು, ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದರು ಗ್ರಾಮಗಳನ್ನು ಆಯ್ಕೆ ಮಾಡಿದ್ದಾರೆ. ಉಳಿದ 21 ಸಂಸದರು ಯೋಜನೆಯನ್ನು ಕೈಚೆಲ್ಲಿದ್ದಾರೆ.
2021–22ನೇ ಸಾಲಿನಲ್ಲಿ ಮಂಡ್ಯ, ಬೆಳಗಾವಿ, ವಿಜಯಪುರ, ಉಡುಪಿ–ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಕೋಲಾರ, ಮೈಸೂರು ಸಂಸದರು ಗ್ರಾಮಗಳನ್ನು ಆಯ್ಕೆ ಮಾಡಿದ್ದಾರೆ. ಉಳಿದ 21 ಸಂಸದರ ಕ್ಷೇತ್ರಗಳಲ್ಲಿ ಆಯ್ಕೆ ನಡೆದಿಲ್ಲ. ಈ ಮೂರು ವರ್ಷಗಳಲ್ಲಿ ಲೋಕಸಭೆ ಮತ್ತು ರಾಜ್ಯಸಭಾ ಸದಸ್ಯರು ಒಟ್ಟು 25 ಗ್ರಾಮಗಳನ್ನು ಮಾತ್ರ ಯೋಜನೆಯಡಿ ಆಯ್ಕೆ ಮಾಡಿದ್ದಾರೆ.
MPs in Karnataka neglect sansad adarsh gram yojana even after selection of villages.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 10:33 am
HK News Staffer
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm
ಕಾರವಾರದ ಕಡ್ಲೆ ಬೀಚ್ನಲ್ಲಿ ರೀಲ್ಸ್ ಮಾಡುಲು ಹೋಗಿ ಅ...
15-06-26 04:54 pm
ಸೋಲಾಪುರದಲ್ಲಿ ಭೀಕರ ದುರಂತ! ನಿಯಂತ್ರಣ ತಪ್ಪಿ ನಾಲೆಗ...
15-06-26 11:50 am