ಬ್ರೇಕಿಂಗ್ ನ್ಯೂಸ್
30-12-21 11:08 pm HK Desk news ಕರ್ನಾಟಕ
ಬೆಂಗಳೂರು, ಡಿ.30 : ಕಳೆದ ಮೂರು ವರ್ಷಗಳಲ್ಲಿ ರಾಜ್ಯದ 11 ಸಂಸದರು ಪ್ರಧಾನಿ ಮೋದಿ ಕನಸಿನ ‘ಸಂಸದರ ಆದರ್ಶ ಗ್ರಾಮ’ ಯೋಜನೆಗೆ ಎಳ್ಳುನೀರು ಬಿಟ್ಟಿದ್ದಾರೆ. 2019 ರಿಂದ ಈ ಯೋಜನೆಯಡಿ ಸಂಸದರು ತಮ್ಮ ಗ್ರಾಮಗಳನ್ನು ಆಯ್ಕೆ ಮಾಡಿಲ್ಲ.
ಪ್ರಧಾನಿ ನರೇಂದ್ರ ಮೋದಿ 2014ರ ಅ.11ರಂದು ಈ ಮಹತ್ವಾಕಾಂಕ್ಷೆಯ ಯೋಜನೆ ಜಾರಿಗೆ ತಂದಿದ್ದರು. ಗ್ರಾಮಗಳ ಸಮಗ್ರ ಅಭಿವೃದ್ಧಿಯ ಜತೆಗೆ ಸಂಸದರ ನಾಯಕತ್ವ ಮತ್ತು ಸಾಮರ್ಥ್ಯ ತೋರುವುದು ಯೋಜನೆಯ ಉದ್ದೇಶವಾಗಿತ್ತು. ತುಮಕೂರು ಸಂಸದ ಜಿ.ಎಸ್. ಬಸವರಾಜು ಮಾತ್ರ 2019–20 ಮತ್ತು 2020–21ರಲ್ಲಿ ಗ್ರಾಮಗಳನ್ನು ಆಯ್ಕೆ ಮಾಡಿದ್ದಾರೆ. ಉಳಿದ ಸಂಸದರು ಒಂದು ವರ್ಷ ಆಯ್ಕೆ ಮಾಡಿದ್ದರೆ ಆನಂತರ ಯೋಜನೆಯಿಂದ ದೂರ ಉಳಿದಿದ್ದಾರೆ.
ಚಿತ್ರದುರ್ಗ, ಧಾರವಾಡ, ಉತ್ತರ ಕನ್ನಡ, ಹಾಸನ, ಚಾಮರಾಜನಗರ, ದಕ್ಷಿಣ ಕನ್ನಡ, ಬೀದರ್, ಬೆಂಗಳೂರು ದಕ್ಷಿಣ, ಬೆಂಗಳೂರು ಸೆಂಟ್ರಲ್, ಹಾವೇರಿ, ಶಿವಮೊಗ್ಗ ಕ್ಷೇತ್ರದ ಸಂಸದರು ಕಳೆದ ಮೂರು ವರ್ಷಗಳಿಂದ ಆದರ್ಶ ಗ್ರಾಮ ಯೋಜನೆಯಡಿ ಗ್ರಾಮಗಳ ಆಯ್ಕೆಯನ್ನೇ ಮಾಡಿಲ್ಲ.
ಹಾಸನ ಹೊರತುಪಡಿಸಿ ರಾಜ್ಯದ ಉಳಿದೆಲ್ಲ ಕ್ಷೇತ್ರಗಳಲ್ಲಿ ಬಿಜೆಪಿ ಸಂಸದರೇ ಇದ್ದಾರೆ. ಕೇಂದ್ರ ಸಚಿವರಾದ ಎ. ನಾರಾಯಣಸ್ವಾಮಿ, ಪ್ರಲ್ಹಾದ ಜೋಶಿ, ಭಗವಂತ ಖೂಬಾ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಕ್ಷೇತ್ರಗಳಲ್ಲಿಯೇ ಪ್ರಧಾನಿ ಮೋದಿ ಅವರ ಕನಸಿನ ಯೋಜನೆಗೆ ಎಳ್ಳುನೀರು ಬಿಡಲಾಗಿದೆ.
2019–20ನೇ ಸಾಲಿನಲ್ಲಿ ಬೆಳಗಾವಿ, ಬೆಂಗಳೂರು ಉತ್ತರ, ಚಿಕ್ಕೋಡಿ, ಕೊಪ್ಪಳ, ಕಲಬುರಗಿ, ತುಮಕೂರು, ದಾವಣಗೆರೆ, ಬಳ್ಳಾರಿ ಸಂಸದರು ಮಾತ್ರ ಗ್ರಾಮಗಳನ್ನು ಆಯ್ಕೆ ಮಾಡಿದ್ದಾರೆ. ಉಳಿದ 20 ಸಂಸದರ ಕ್ಷೇತ್ರಗಳಲ್ಲಿ ಆಯ್ಕೆ ನಡೆದಿಲ್ಲ. 2020–21ನೇ ಸಾಲಿನಲ್ಲಿ ಮಂಡ್ಯ, ಬಾಗಲಕೋಟೆ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ, ರಾಯಚೂರು, ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದರು ಗ್ರಾಮಗಳನ್ನು ಆಯ್ಕೆ ಮಾಡಿದ್ದಾರೆ. ಉಳಿದ 21 ಸಂಸದರು ಯೋಜನೆಯನ್ನು ಕೈಚೆಲ್ಲಿದ್ದಾರೆ.
2021–22ನೇ ಸಾಲಿನಲ್ಲಿ ಮಂಡ್ಯ, ಬೆಳಗಾವಿ, ವಿಜಯಪುರ, ಉಡುಪಿ–ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಕೋಲಾರ, ಮೈಸೂರು ಸಂಸದರು ಗ್ರಾಮಗಳನ್ನು ಆಯ್ಕೆ ಮಾಡಿದ್ದಾರೆ. ಉಳಿದ 21 ಸಂಸದರ ಕ್ಷೇತ್ರಗಳಲ್ಲಿ ಆಯ್ಕೆ ನಡೆದಿಲ್ಲ. ಈ ಮೂರು ವರ್ಷಗಳಲ್ಲಿ ಲೋಕಸಭೆ ಮತ್ತು ರಾಜ್ಯಸಭಾ ಸದಸ್ಯರು ಒಟ್ಟು 25 ಗ್ರಾಮಗಳನ್ನು ಮಾತ್ರ ಯೋಜನೆಯಡಿ ಆಯ್ಕೆ ಮಾಡಿದ್ದಾರೆ.
MPs in Karnataka neglect sansad adarsh gram yojana even after selection of villages.
18-12-25 12:37 pm
HK News Desk
ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು ; ಸದನಕ್ಕ...
17-12-25 10:30 pm
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
18-12-25 10:52 am
Mangalore Correspondent
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm