ಬ್ರೇಕಿಂಗ್ ನ್ಯೂಸ್
04-01-22 10:41 pm HK Desk news ಕರ್ನಾಟಕ
ಬೆಂಗಳೂರು, ಜ.4 : ಓಮಿಕ್ರಾನ್ ಮತ್ತು ಕೊರೊನಾ ವೈರಸ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಟಫ್ ರೂಲ್ಸ್ ಜಾರಿಗೆ ತರಲಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಶಾಲೆ, ಕಾಲೇಜುಗಳಲ್ಲಿ ಭೌತಿಕ ತರಗತಿ ರದ್ದುಪಡಿಸಲಾಗಿದ್ದು, 10, 12ನೇ ತರಗತಿಗೆ ಮಾತ್ರ ತರಗತಿ ಇರಲಿದೆ. ಅಲ್ಲದೆ, ರಾಜ್ಯದಾದ್ಯಂತ ಶನಿವಾರ ಮತ್ತು ಭಾನುವಾರ ಎರಡು ದಿನ ಕಾಲ ವೀಕೆಂಡ್ ಕರ್ಫ್ಯೂ ಹೇರಲಾಗಿದೆ.
ಕೊರೊನಾ ವೈರಸ್ ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ತಜ್ಞರ ಜೊತೆಗೆ ಮಂಗಳವಾರ ಸಂಜೆ ತುರ್ತು ಸಭೆ ನಡೆಸಲಾಗಿದೆ. ಸಭೆಯಲ್ಲಿ ಈ ಬಗ್ಗೆ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಸಭೆಯ ಬಳಿಕ ಆರೋಗ್ಯ ಸಚಿವ ಸುಧಾಕರ್ ಮತ್ತು ಸಚಿವ ಆರ್.ಅಶೋಕ್ ಮಾಧ್ಯಮಕ್ಕೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ.
ಮುಂದಿನ ಎರಡು ವಾರ ಟಫ್ ರೂಲ್ಸ್ ರಾಜ್ಯದಲ್ಲಿ ಜಾರಿಯಲ್ಲಿರುತ್ತದೆ. ಬುಧವಾರ ರಾತ್ರಿ 10ರಿಂದಲೇ ಹೊಸ ರೂಲ್ಸ್ ಜಾರಿಗೆ ಬರಲಿದೆ. ರಾಜ್ಯದಲ್ಲಿ ಎಲ್ಲ ರೀತಿಯ ಸಭೆ, ಸಮಾರಂಭಗಳಿಗೆ ಬ್ರೇಕ್ ಹಾಕಲಾಗಿದೆ. ರಾಜಕೀಯ ರ್ಯಾಲಿ ನಡೆಸುವಂತಿಲ್ಲ. ಪೂಜೆ, ಪುನಸ್ಕಾರ ಯಥಾಪ್ರಕಾರ ಇರುತ್ತದೆ. ಪ್ರತಿಭಟನೆ ನಡೆಸಲು ಅವಕಾಶ ಇರುವುದಿಲ್ಲ.
ಹೊರಾಂಗಣ ಮದುವೆಗಳಿಗೆ 200 ಜನರಿಗೆ ಅವಕಾಶ ಇರಲಿದೆ. ಒಳಾಂಗಣ ಮದುವೆಗಳಿಗೆ 100 ಜನರಿಗೆ ಮಾತ್ರ ಅವಕಾಶ ಇರುತ್ತದೆ. ಶಾಲೆ, ಕಾಲೇಜುಗಳು ಬೆಂಗಳೂರಿನಲ್ಲಿ ಎರಡು ವಾರ ಕ್ಲೋಸ್ ಆಗಲಿದ್ದು, ಆನ್ಲೈನ್ ಕ್ಲಾಸ್ ನಡೆಸಲು ಸೂಚನೆ ನೀಡಲಾಗಿದೆ. 10 ಮತ್ತು 12ನೇ ತರಗತಿ ಯಥಾಸ್ಥಿತಿ ಇರಲಿದ್ದು, ಉಳಿದಂತೆ ಮೆಡಿಕಲ್, ಪ್ಯಾರಾ ಮೆಡಿಕಲ್, ಇಂಜಿನಿಯರಿಂಗ್ ಕಾಲೇಜುಗಳಿಗೆ ಅವಕಾಶ ಇರುತ್ತದೆ. ಬಾರ್, ಪಬ್, ಥಿಯೇಟರ್ ಗಳಲ್ಲಿ 50 ಶೇಕಡಾ ಪ್ರವೇಶಕ್ಕೆ ಅನುಮತಿ ಇರುತ್ತದೆ.
ಶುಕ್ರವಾರ ರಾತ್ರಿ 10ರಿಂದ ಸೋಮವಾರ ಬೆಳಗ್ಗೆ 5ರ ವರೆಗೆ ರಾಜ್ಯಾದ್ಯಂತ ವೀಕೆಂಡ್ ಲಾಕ್ಡೌನ್ ಇರಲಿದ್ದು, ಜನರು ಮನೆಯಿಂದ ಹೊರ ಬರುವಂತಿಲ್ಲ. ಅಗತ್ಯ ವಸ್ತುಗಳ ಖರೀದಿಗೂ ಅವಕಾಶ ಇರುವುದಿಲ್ಲ ಎಂದು ಸಚಿವರು ತಿಳಿಸಿದ್ದಾರೆ. ವೀಕೆಂಡ್ ಕರ್ಫ್ಯೂ ಅವಧಿಯಲ್ಲಿ ಹೊಟೇಲ್ ಪಾರ್ಸೆಲ್ ಅವಕಾಶ ಇರುತ್ತದೆ. ಔಷಧಿ, ಮೆಡಿಕಲ್, ಆಸ್ಪತ್ರೆಗೆ ಅವಕಾಶ ಇರುತ್ತದೆ. ಉಳಿದಂತೆ ಎರಡು ದಿನಗಳ ಕಾಲ ಸಂಪೂರ್ಣ ಬಂದ್ ಇರಲಿದೆ ಎಂದು ಸಚಿವ ಅಶೋಕ್ ತಿಳಿಸಿದ್ದಾರೆ.
Bengaluru: Karanataka will impose a weekend curfew - starting this Friday - to check the spread of coronavirus cases which are yet again on a rise. While the weekend curfew will be imposed, essential commodities and hotels will function without any interruption, the state government has said. R Ashok, Revenue Minister, at a press briefing today, told reporters, " Omicron is increasing five-fold... 147 new cases of the variant have been reported today. Coronavirus cases in the state are rising twice as faster compared to earlier."
16-09-25 11:00 pm
Bangalore Correspondent
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
16-09-25 07:48 pm
Mangalore Correspondent
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
16-09-25 10:40 pm
HK News Desk
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am