ಬ್ರೇಕಿಂಗ್ ನ್ಯೂಸ್
07-01-22 04:25 pm HK Desk news ಕರ್ನಾಟಕ
ಬೆಂಗಳೂರು, ಜ.7 : ಲಾಕ್ಡೌನ್ ಅನ್ನುವುದು ಮುಗಿದ ಅಧ್ಯಾಯ. ಕೋವಿಡ್ ನಿಯಂತ್ರಣಕ್ಕೆ ಲಾಕ್ಡೌನ್ ಪರಿಹಾರವಲ್ಲ. ಭವಿಷ್ಯದಲ್ಲಿ ಯಾವತ್ತೂ ಲಾಕ್ಡೌನ್ ಮಾಡುವುದಿಲ್ಲ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.
ಶುಕ್ರವಾರ ಸುದ್ದಿಗಾರರ ಜೊತೆ ಮಾತನಾಡಿದ ಸುಧಾಕರ್, ಲಾಕ್ಡೌನ್ ಕಳೆದು ಹೋಗಿರುವ ನೀತಿ. ಆರಂಭದಲ್ಲಿ ಕೋವಿಡ್ ಬಗ್ಗೆ ಹೆಚ್ಚೇನೂ ತಿಳಿದಿರದ ಕಾರಣ ಲಾಕ್ಡೌನ್ ಮಾಡಲಾಗಿತ್ತು. ವೈರಸ್ ಬಗ್ಗೆ, ಅದರ ಚಿಕಿತ್ಸೆ ಬಗ್ಗೆ ತಿಳಿಯದ ಕಾರಣ ಲಾಕ್ಡೌನ್ ಜಾರಿಗೊಳಿಸಲಾಗಿತ್ತು. ಮುಂದೆ ಯಾವತ್ತೂ ಆ ರೀತಿಯ ಕ್ರಮಕ್ಕೆ ಮುಂದಾಗಲ್ಲ ಎಂದು ಹೇಳಿದ್ದಾರೆ.
ಎರಡು ವರ್ಷಗಳ ಅನುಭವದಿಂದ ಕೋವಿಡ್ ಚಿಕಿತ್ಸೆ, ನಿಯಂತ್ರಣದ ಬಗ್ಗೆ ಅರಿತುಕೊಂಡಿದ್ದೇವೆ. ಲಾಕ್ಡೌನ್ ಮಾಡುವುದರಿಂದ ವೈರಸ್ ತಡೆಗಟ್ಟುವುದು ಸಾಧ್ಯವಿಲ್ಲ. ಲಸಿಕೆ ಮತ್ತು ಮುನ್ನೆಚ್ಚರಿಕೆಯಿಂದ ಮಾತ್ರ ಕೋವಿಡ್ ಎದುರಿಸಲು ಸಾಧ್ಯ. ಓಮಿಕ್ರಾನ್ ವೈರಸ್ ಹರಡುವುದನ್ನು ತಡೆಯುವುದು ಅಸಾಧ್ಯ. ಸಹಜವಾಗಿಯೇ ಪ್ರಕರಣಗಳ ಸಂಖ್ಯೆ ಹೆಚ್ಚಾಗಲಿದೆ. ಇದರಿಂದ ಗಂಭೀರ ಅಪಾಯ ಎದುರಾಗುವುದಿಲ್ಲ. ಜನರು ಮುನ್ನೆಚ್ಚರಿಕೆಯಿಂದ ಇರಬೇಕು ಅಷ್ಟೇ ಎಂದು ಹೇಳಿದರು.
ರಾಜ್ಯದಲ್ಲಿ ಕೋವಿಡ್ ಪಾಸಿಟಿವ್ ರೇಟ್ ಹೆಚ್ಚುತ್ತಿದೆ. ಸದ್ಯಕ್ಕೆ 3.95 ಇದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಹೆಚ್ಚಲಿದೆ. ಇದರ ಬಗ್ಗೆ ರಾಜ್ಯ ಮಟ್ಟದ ಅಧಿಕಾರಿಗಳ ಸಭೆ ನಡೆಸಲಾಗುವುದು. ಕೋವಿಡ್ ನಿಯಂತ್ರಣಕ್ಕೆ ವೈಜ್ಞಾನಿಕ ಕ್ರಮ, ಮುನ್ನೆಚ್ಚರಿಕೆ ವಹಿಸಲಾಗುವುದು ಎಂದು ಡಾ.ಸುಧಾಕರ್ ಹೇಳಿದರು. ಲಸಿಕೆ ಪಡೆಯುವುದರಿಂದ ಕೋವಿಡ್ ಸಮಸ್ಯೆ ಎದುರಾಗುವುದಿಲ್ಲ. ಇದರಿಂದ ಅಪಾಯ ತಡೆಗಟ್ಟಲು ಸಾಧ್ಯ ಎಂದು ಹೇಳಿದರು.
Lockdown is not a remedy for COVID-19 as a shutdown is a policy of the past and there is no consideration of it in Karnataka, said State Health Minister Dr K Sudhakar said on Friday. Referring to the Omicron variant of COVID-19 that is spreading fast, he said the infections are spreading rapidly in six districts of Bengaluru Urban, Bengaluru Rural, Mandya, Mysuru, Udupi, and Kolar, which have a high positivity rate. We are in touch with the district administration.
18-07-25 08:01 pm
HK News Desk
ಸಿಎಂ ಸಿದ್ದರಾಮಯ್ಯ ನಿಧನ ; ಫೇಸ್ಬುಕ್ ಅವಾಂತರಕ್ಕೆ...
18-07-25 07:11 pm
Dharmasthala Case, SIT, CM Siddaramaiah: ಧರ್ಮ...
18-07-25 04:48 pm
Mangalore South ACP Vijayakranti: ಮಂಗಳೂರು ದಕ್...
18-07-25 03:38 pm
Minister Dinesh Gundu Rao, Dharmasthala: ಧರ್ಮ...
17-07-25 07:45 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
18-07-25 03:19 pm
Mangalore Correspondent
Mangalore Rain, Thokottu: ಧಾರಕಾರ ಮಳೆ ; ತೊಕ್ಕೊ...
18-07-25 02:36 pm
"Celebrating Excellence: 37 Achievers Felicit...
17-07-25 06:30 pm
Wild Elephant Attack, Dharmasthala: ಧರ್ಮಸ್ಥಳ...
17-07-25 04:14 pm
Minister Priyank Kharge, Drug Trafficking: ಡ್...
17-07-25 01:51 pm
18-07-25 12:40 pm
Mangalore Correspondent
Mangalore Fraud, WhatsApp, crime: ಕಂಪನಿಯ ಎಂಡಿ...
18-07-25 12:01 pm
Mangalore Kadri Police, Crime, Snake; ಹೆಬ್ಬಾವ...
18-07-25 11:36 am
Crore Fraud, Roshan Saldanha Arrest, Mangalor...
17-07-25 10:42 pm
Uppinangady Murder: ಕೌಟುಂಬಿಕ ಕಲಹ ; ಮಾತಿಗೆ ಮಾತ...
17-07-25 02:30 pm