ಬ್ರೇಕಿಂಗ್ ನ್ಯೂಸ್
08-01-22 03:18 pm HK Desk news ಕರ್ನಾಟಕ
ಬೆಂಗಳೂರು, ಜ.8 : ಬನ್ನೇರುಘಟ್ಟ- ತುಮಕೂರು ನೈಸ್ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ ಭೀಕರ ಅಪಘಾತ ನಡೆದಿದ್ದು, ಇಬ್ಬರು ಯುವತಿಯರು ಸೇರಿದಂತೆ ನಾಲ್ವರು ಸಾಫ್ಟ್ ವೇರ್ ಟೆಕ್ಕಿಗಳು ಸ್ಥಳದಲ್ಲೇ ಸಾವು ಕಂಡಿದ್ದಾರೆ.
ಸಾಫ್ಟ್ ವೇರ್ ಉದ್ಯೋಗಿಗಳಿದ್ದ ಕಾರಿಗೆ ಹಿಂದಿನಿಂದ ವೇಗವಾಗಿ ಬಂದ ಟ್ರಕ್ ಡಿಕ್ಕಿಯಾಗಿದ್ದು, ಇದರ ರಭಸಕ್ಕೆ ಕಾರು ಮುಂದಿದ್ದ ಹಲವಾರು ವಾಹನಗಳಿಗೆ ಡಿಕ್ಕಿಯಾಗಿ ಮಗುಚಿ ಬಿದ್ದಿದೆ. ಸರಣಿ ಅಪಘಾತದಲ್ಲಿ ಮೂರು ಟ್ರಕ್ ಮತ್ತು ನಾಲ್ಕು ಕಾರು ಬಡಿದಾಡಿದ್ದು ಸ್ಥಳದಲ್ಲಿ ಭೀಕರ ಸ್ಥಿತಿ ನಿರ್ಮಾಣವಾಗಿತ್ತು. ವ್ಯಾಗನರ್ ಕಾರಿನ ಹಿಂಭಾಗದಲ್ಲಿ ಕುಳಿತಿದ್ದ ನಾಲ್ಕು ಮಂದಿ ಮೃತಪಟ್ಟಿದ್ದಾರೆ. ಇತರ ವಾಹನಗಳಲ್ಲಿದ್ದ ಆರು ಮಂದಿ ತೀವ್ರ ಗಾಯಗೊಂಡಿದ್ದಾರೆ. ಮೃತ ನಾಲ್ವರು ಕೇರಳದ ನಿವಾಸಿಗಳಾಗಿದ್ದು, ಬೊಮ್ಮನಹಳ್ಳಿಯ ಸಾಫ್ಟ್ ವೇರ್ ಕಂಪನಿಯಲ್ಲಿ ಕೆಲಸದಲ್ಲಿದ್ದರು.
ಕುಮಾರಸ್ವಾಮಿ ಸಂಚಾರ ವಿಭಾಗದ ಪೊಲೀಸರು ಸ್ಥಳಕ್ಕಾಗಮಿಸಿ, ಚೆಲ್ಲಾಪಿಲ್ಲಿ ಬಿದ್ದಿದ್ದ ವಾಹನಗಳು, ಗಾಯಾಳುಗಳನ್ನು ತೆರವು ಮಾಡಿ, ಆಸ್ಪತ್ರೆಗೆ ದಾಖಲಿಸಿದ್ದಾರೆ. ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು ಭೀಕರವಾಗಿತ್ತು. ಟ್ರಕ್ ಚಾಲಕನ ಅತಿ ವೇಗದ ಮತ್ತು ಅಜಾಗ್ರತೆಯ ಚಾಲನೆಯಿಂದಲೇ ಭೀಕರ ಅಪಘಾತ ಸಂಭವಿಸಿದೆ ಎನ್ನಲಾಗುತ್ತಿದ್ದು, ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಪೂರ್ವಾಂಕರ ಅಪಾರ್ಟ್ಮೆಂಟ್ ಬಳಿ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
At least four persons, including two women died in a ghastly serial accident that occurred late night on Friday January 7 on Bannerghatta-Tumakuru NICE Road. The collision occured between a car and a truck under the limits of Kumaraswamy layout traffic police station, leading up to a pile up of other vehicles.
16-09-25 11:00 pm
Bangalore Correspondent
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
16-09-25 07:48 pm
Mangalore Correspondent
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
16-09-25 10:40 pm
HK News Desk
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am