ಬ್ರೇಕಿಂಗ್ ನ್ಯೂಸ್
08-01-22 07:31 pm HK Desk news ಕರ್ನಾಟಕ
ಬೆಂಗಳೂರು, ಜ.8 : ಅತಿಥಿ ಉಪನ್ಯಾಸಕರ ಬಗ್ಗೆ ರಾಜ್ಯ ಸರಕಾರ ಅಸಡ್ಡೆ ತೋರುತ್ತಿರುವುದು ಸರಿಯಲ್ಲ. ಅವರಿಗೆ ನೀಡುತ್ತಿರುವ ವೇತನ ಸರಕಾರ ನಿಗದಿ ಪಡಿಸಿದ ಮೂಲ ವೇತನಕ್ಕಿಂತ ಕಡಿಮೆಯಿದೆ. ದೇಶ ವಿಶ್ವಗುರು ಆಗಬೇಕು ಅನ್ನುವವರು ಉಪನ್ಯಾಸಕರನ್ನು ಕನಿಷ್ಠ ಸಂಬಳಕ್ಕೆ ದುಡಿಸಿಕೊಳ್ಳುವುದೇ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ರಾಜ್ಯದಲ್ಲಿ ಕೆಲಸ ಮಾಡುತ್ತಿರುವ 14500 ಅತಿಥಿ ಉಪನ್ಯಾಸಕರ ಬಗ್ಗೆ ರಾಜ್ಯ ಸರಕಾರ ಅಸಡ್ಡೆ ತೋರುತ್ತಿರುವುದು ಸರಿಯಲ್ಲ. ಅವರಿಗೆ ಮಾಸಿಕ 11 ಸಾವಿರದಿಂದ 13 ಸಾವಿರ ಗೌರವ ಧನ ನೀಡಲಾಗುತ್ತದೆ. ಇದು ಸರಕಾರವೇ ನಿಗದಿ ಮಾಡಿರುವ ಮೂಲ ವೇತನಕ್ಕಿಂತ ಕಡಿಮೆಯಿದೆ ಎಂದಿದ್ದಾರೆ.
ಸರಕಾರ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಮಾಡುತ್ತಿದೆ. ಭಾರತ ವಿಶ್ವಗುರು ಆಗಬೇಕು ಎಂದು ಉನ್ನತ ಶಿಕ್ಷಣ ಸಚಿವರು ಹೇಳುತ್ತಾರೆ. ಪ್ರಧಾನಿ ಮೋದಿಯವರು ಕೂಡ ಇದೇ ಮಾತನ್ನು ಹೇಳುತ್ತಾರೆ. ಭಾರತ ವಿಶ್ವಗುರು ಆಗೋದು ಅಂದರೆ ಉಪನ್ಯಾಸಕರನ್ನು ಅತ್ಯಂತ ಕನಿಷ್ಠ ಸಂಬಳಕ್ಕೆ ದುಡಿಸಿಕೊಳ್ಳುವುದೇ ಎಂದು ಪ್ರಶ್ನೆ ಮಾಡಿದ್ದಾರೆ.
ಕಳೆದ ಡಿಸೆಂಬರ್ 10ರಿಂದ ಅತಿಥಿ ಉಪನ್ಯಾಸಕರು ತರಗತಿಗಳನ್ನು ಬಹಿಷ್ಕರಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಮುಖ್ಯಮಂತ್ರಿ ಮತ್ತು ಉನ್ನತ ಶಿಕ್ಷಣ ಸಚಿವರು ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಸಲು ಮುಂದಾಗಬೇಕು ಎಂದು ಆಗ್ರಹಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಎಚ್ಡಿಕೆ ಟ್ವೀಟ್ ಮಾಡಿದ್ದಾರೆ.
ರಾಜ್ಯದಲ್ಲಿ ಕೆಲಸ ಮಾಡುತ್ತಿರುವ 14500 ಅತಿಥಿ ಉಪನ್ಯಾಸಕರ ಬಗ್ಗೆ ರಾಜ್ಯ ಸರಕಾರ ಅಸಡ್ಡೆ ತೋರುತ್ತಿರುವುದು ಸರಿಯಲ್ಲ. ಅವರಿಗೆ ಮಾಸಿಕ 11000 ರಿಂದ 13000 ಗೌರವ ಧನ ನೀಡಲಾಗುತ್ತಿದೆ. ಇದು ಸರಕಾರವೇ ನಿಗದಿ ಮಾಡಿರುವ ಮೂಲ ವೇತನಕ್ಕಿಂತ ಕಡಿಮೆ. 1/3
— H D Kumaraswamy (@hd_kumaraswamy) January 8, 2022
ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಮಾಡುತ್ತಿದೆ ಸರಕಾರ. ಭಾರತ ವಿಶ್ವಗುರು ಆಗಬೇಕು ಎನ್ನುತ್ತಾರೆ ಉನ್ನತ ಶಿಕ್ಷಣ ಸಚಿವರು. ಸ್ವತಃ ಪ್ರಧಾನಿಯವರು ಇದೇ ಮಾತು ಹೇಳುತ್ತಿದ್ದಾರೆ. ವಿಶ್ವಗುರು ಆಗಬೇಕು ಎಂದರೆ ಅತ್ಯಂತ ಕನಿಷ್ಠ ಸಂಬಳಕ್ಕೆ ಉಪನ್ಯಾಸಕರನ್ನು ದುಡಿಸಿಕೊಳ್ಳುವುದೇ? 2/3
— H D Kumaraswamy (@hd_kumaraswamy) January 8, 2022
ಕಳೆದ ಡಿಸೆಂಬರ್ 10ರಿಂದ ಅತಿಥಿ ಉಪನ್ಯಾಸಕರು ತರಗತಿಗಳನ್ನು ಬಹಿಷ್ಕರಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಮುಖ್ಯಮಂತ್ರಿಗಳು ಮತ್ತು ಉನ್ನತ ಶಿಕ್ಷಣ ಸಚಿವರು ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಕೆಗೆ ಮುಂದಾಗಬೇಕು ಎಂದು ಆಗ್ರಹ ಮಾಡುತ್ತೇನೆ. 3/3
— H D Kumaraswamy (@hd_kumaraswamy) January 8, 2022
The government is implementing the national education policy. The minister of higher education says that India should become a world guru.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am