ಬ್ರೇಕಿಂಗ್ ನ್ಯೂಸ್
08-01-22 08:42 pm HK Desk news ಕರ್ನಾಟಕ
ರಾಮನಗರ, ಜ.8 : ಸರಕಾರ ನಮ್ಮನ್ನು ಜೈಲಿಗೆ ಹಾಕಿದರೂ ಮೇಕೆದಾಟು ವಿಚಾರದಲ್ಲಿ ಹಮ್ಮಿಕೊಂಡ ಪಾದಯಾತ್ರೆ ನಿಲ್ಲಿಸುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗುಡುಗಿದ್ದಾರೆ.
ಕನಕಪುರದ ಡಿಕೆ ಶಿವಕುಮಾರ್ ಮನೆಯಲ್ಲಿ ಶಾಸಕಾಂಗ ಸಭೆ ನಡೆಸಿದ್ದು, ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಮುಂಚೂಣಿ ನಾಯಕರು ಪಾಲ್ಗೊಂಡಿದ್ದಾರೆ. ಸಭೆಗೂ ಮುನ್ನ ಸುದ್ದಿಗಾರರ ಜೊತೆ ಮಾತನಾಡಿದ ಡಿಕೆಶಿ, ಯಾವುದೇ ಕಾರಣಕ್ಕೂ ಪಾದಯಾತ್ರೆ ಹಿಂಪಡೆಯುವುದಿಲ್ಲ. ಸರಕಾರ ಈಗಾಗಲೇ ನಮಗೆ ನೋಟೀಸ್ ನೀಡಿದೆ. ಜಿಲ್ಲೆಯ ಅಧಿಕಾರಿಗಳು ಸರಕಾರದ ಅಣತಿಯಂತೆ ನಡೆಯುತ್ತಿದ್ದಾರೆ. ನನ್ನನ್ನು ಬಂಧಿಸಿ, ಶರ್ಟ್ ಪ್ಯಾಂಟ್ ಬಿಚ್ಚಿಸಿ ಜೈಲಿಗೆ ಹಾಕಿದರೂ ಪರವಾಗಿಲ್ಲ. ನಾವು ಪಾದಯಾತ್ರೆ ಮಾಡೇ ಮಾಡುತ್ತೀವಿ ಎಂದು ಹೇಳಿದ್ದಾರೆ. ಕೋವಿಡ್ ಇದೆಯೆಂದು ಕರ್ಫ್ಯೂ ಹಾಕಿದ್ದಾರೆ. ಕೊರೊನಾದಿಂದಾಗಿ ರಾಜ್ಯದ ಎಲ್ಲೇ ಆಗಲಿ, ಯಾರಾದ್ರೂ ಐಸಿಯುನಲ್ಲಿ ಮಲಗಿದ್ದಾರೆಯೇ ಎಂದು ಪ್ರಶ್ನೆ ಮಾಡಿದರು.
ಇದೇ ವೇಳೆ ಮಾತನಾಡಿದ ಸಿದ್ದರಾಮಯ್ಯ, ಸರಕಾರದವರು ರಾಮನಗರ ವ್ಯಾಪ್ತಿಗೆ ನಿಷೇಧಾಜ್ಞೆ ಹಾಕಿದ್ದಾರೆ. ನಮ್ಮ ಪಾದಯಾತ್ರೆಯನ್ನು ಹತ್ತಿಕ್ಕಬೇಕು ಎನ್ನುವ ಉದ್ದೇಶದಿಂದಲೇ ಈ ರೀತಿ ವರ್ತಿಸಿದ್ದಾರೆ. ಗುಂಪಾಗಿ ಪಾದಯಾತ್ರೆ ಮಾಡಬಾರದು ಅಂದರೆ ನಾವು ನಾಲ್ಕು ನಾಲ್ಕು ಜನರಷ್ಟೇ ಹೋಗುತ್ತೇವೆ. ನಾವು ನಡೆದುಕೊಂಡು ಹೋಗಬಾರದು ಅಂದ್ರೆ ಅದನ್ನು ಒಪ್ಪುವುದು ಹೇಗೆ.. ಕಾವೇರಿ ನೀರು ನಮ್ಮ ಹಕ್ಕು. ಅದನ್ನು ಈಡೇರಿಸಿಕೊಳ್ಳಲು ನಾವು ಪಾದಯಾತ್ರೆ ಮಾಡುತ್ತೇವೆ ಎಂದು ಹೇಳಿದ್ದಾರೆ.
ಇದಕ್ಕೂ ಮುನ್ನ ರಾಮನಗರ ಎಸ್ಪಿ ಗಿರೀಶ್, ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಜೊತೆಗೆ ರಹಸ್ಯವಾಗಿ ಮಾತುಕತೆ ನಡೆಸಿದರು. ಇದರ ಬಳಿಕ ಮಾತನಾಡಿದ ಎಸ್ಪಿ ಗಿರೀಶ್, ತಾಲೂಕು ಆಡಳಿತ ಈಗಾಗಲೇ ನೋಟೀಸನ್ನು ನೀಡಿದೆ. ಪಾದಯಾತ್ರೆ ಮಾಡಬಾರದು ಎಂದು ಮನವಿ ಮಾಡಿದ್ದೇವೆ. ಸರಕಾರದ ಸೂಚನೆ ಪಾಲಿಸದೇ ಇದ್ದರೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.
ಮೇಕೆದಾಟು ಅಣೆಕಟ್ಟು ಯೋಜನೆ ಆರಂಭಿಸಬೇಕೆಂದು ಜನವರಿ 9ರಿಂದ ಪಾದಯಾತ್ರೆ ನಡೆಸುವುದಾಗಿ ಕಾಂಗ್ರೆಸ್ ಡಿಸೆಂಬರ್ ಕೊನೆಯಲ್ಲಿ ಘೋಷಣೆ ಮಾಡಿತ್ತು. ಆದರೆ ರಾಜ್ಯ ಸರಕಾರ ಕೋವಿಡ್ ನೆಪದಲ್ಲಿ ರಾತ್ರಿ ಕರ್ಫ್ಯೂ, ವೀಕೆಂಡ್ ಕರ್ಫ್ಯೂ ವಿಧಿಸಿ ಪಾದಯಾತ್ರೆ ನಡೆಸದಂತೆ ನಿಯಂತ್ರಣ ಹೇರುವ ಯತ್ನ ಮಾಡಿದೆ.
The Congress will hold a rally (Congress Mekedatu Padayatra) from tomorrow (Jan 9) demanding implementation of the Mekedatu Yojana (Mekedatu Project) and has already made all preparations. However, Ramanagara Superintendent of Police Girish has issued a khadak warning to KPC president DK Sivakumar.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am