ಬ್ರೇಕಿಂಗ್ ನ್ಯೂಸ್
09-01-22 08:51 pm HK Desk news ಕರ್ನಾಟಕ
ಬೆಂಗಳೂರು, ಜ.9 : ವಿದ್ಯಾರ್ಥಿಗಳಿಂದ ಶುಲ್ಕದ ರೂಪದಲ್ಲಿ ಸಂಗ್ರಹಿಸಿದ್ದ 107 ಕೋಟಿ ರೂಪಾಯಿಯನ್ನು ವಂಚಿಸಿದ ಆರೋಪದಲ್ಲಿ ಬೆಂಗಳೂರಿನ ಅಲಯನ್ಸ್ ಯುನಿವರ್ಸಿಟಿಯ ಮಾಜಿ ಕುಲಪತಿಯನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದಾರೆ.
ಮಾಜಿ ಕುಲಪತಿ ಮಧುಕರ್ ಜಿ. ಅಂಗೂರ್ ಬಂಧಿತ ಆರೋಪಿ. ಇವರನ್ನು ಶನಿವಾರ ಅಧಿಕಾರಿಗಳು ಬಂಧಿಸಿದ್ದು ಭಾನುವಾರ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ವಿಶೇಷ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಏಳು ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಮಧುಕರ್ ಜಿ. ಅಂಗೂರ್ ಸೇರಿದಂತೆ ಅವರ ಕುಟುಂಬದ ನಾಲ್ವರ ವಿರುದ್ಧ ನಾಲ್ಕು ಪ್ರತ್ಯೇಕ ಎಫ್ಐಆರ್ ದಾಖಲಾಗಿತ್ತು. ಅಂಗೂರ್ ಕುಲಪತಿಯಾಗಿದ್ದಾಗ 2016-17ರಲ್ಲಿ ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಶುಲ್ಕವನ್ನು ವಿಶ್ವವಿದ್ಯಾನಿಲಯದ ಖಾತೆಯ ಬದಲಿಗೆ ಶ್ರೀವಾರಿ ಎಜುಕೇಶನಲ್ ಸರ್ವಿಸಸ್ ಹೆಸರಿನಲ್ಲಿದ್ದ ಟ್ರಸ್ಟಿಗೆ ಹಾಕುವಂತೆ ಸೂಚಿಸಲಾಗಿತ್ತು. ಇದರಂತೆ, 4500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಲಕ್ಷಾಂತರ ರೂಪಾಯಿ ಹಣವನ್ನು ತುಂಬಿದ್ದರು. ಬೋಧನಾ ಶುಲ್ಕ, ಹಾಸ್ಟೆಲ್ ಶುಲ್ಕ ಇತ್ಯಾದಿ ಹೆಸರಲ್ಲಿ ವಿದ್ಯಾರ್ಥಿಗಳು ಹಣ ಜಮೆ ಮಾಡಿದ್ದರು.
ಈ ಬಗ್ಗೆ ಅಲಯನ್ಸ್ ವಿವಿಯಿಂದ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಪೊಲೀಸರು ಕಳೆದ ಸೆಪ್ಟಂಬರ್ ತಿಂಗಳಲ್ಲಿ ಮಧುಕರ್ ಜಿ. ಅಂಗುರ್, ಕುಟುಂಬ ಸದಸ್ಯರಾದ ಪ್ರಿಯಾಂಕ ಅಂಗೂರ್, ರವಿಕುಮಾರ್, ಶ್ರುತಿ, ಪಾವನಾ ದಿಬ್ಬೂರ್ ಹೆಸರಿನಲ್ಲಿದ್ದ 19 ಕೋಟಿ ಆಸ್ತಿಯನ್ನು ಜಪ್ತಿ ಮಾಡಲಾಗಿತ್ತು. ಬೆಂಗಳೂರು ಪೊಲೀಸರು ಮತ್ತು ಇತರ ತನಿಖಾ ಸಂಸ್ಥೆಗಳು ನಾಲ್ಕು ಎಫ್ಐಆರ್ ದಾಖಲಿಸಿತ್ತು. ಆನಂತರ ಜಾರಿ ನಿರ್ದೇಶನಾಲಯವು ತನಿಖೆ ಕೈಗೆತ್ತಿಕೊಂಡಿದ್ದು ಕ್ರಿಮಿನಲ್ ಮೊಕದ್ದಮೆ ದಾಖಲಿಸಿತ್ತು.
The ED initiated an investigation based on four FIRs registered against Angur, Priyanka BS and Ravi Kumar. Amounts to the tune of Rs 107 crore was allegedly swindled by the accused in the name of tuition fees, hostel fees and so on.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm