ಬ್ರೇಕಿಂಗ್ ನ್ಯೂಸ್
10-01-22 04:13 pm HK Desk news ಕರ್ನಾಟಕ
ಹಾಸನ, ಜನವರಿ 10: ಹಾಸನ ನಗರದ ಹರ್ಷಮಹಲ್ ರಸ್ತೆಯಲ್ಲಿರುವ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜಿನ ಒಟ್ಟು 21 ವಿದ್ಯಾರ್ಥಿನಿಯರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ.
ಕಾಲೇಜಿನ ಎಲ್ಲಾ ವಿದ್ಯಾರ್ಥಿನಿಯರಿಗೆ ಆರೋಗ್ಯ ಇಲಾಖೆ ರ್ಯಾಂಡಮ್ ಟೆಸ್ಟ್ ಮಾಡಿದ್ದು, ಈ ವೇಳೆ 21 ವಿದ್ಯಾರ್ಥಿನಿಯರಿಗೆ ಪಾಸಿಟಿವ್ ದೃಢಪಟ್ಟಿದೆ. ಸೋಂಕಿತರ ಪ್ರಾಥಮಿಕ ಸಂಪರ್ಕದಲ್ಲಿರುವವರಿಗೂ ಟೆಸ್ಟ್ ಮಾಡಲು ಹಾಸನ ಜಿಲ್ಲಾ ಆರೋಗ್ಯ ಇಲಾಖೆ ಸಿಬ್ಬಂದಿ ಮುಂದಾಗಿದ್ದಾರೆ.

23 ಪೊಲೀಸರಿಗೆ ಕೊರೊನಾ ಸೋಂಕು ದೃಢ ಕೊರೊನಾ ಸೋಂಕು ದಿನೇ ದಿನೇ ಹೆಚ್ಚಾಗುತ್ತಿದ್ದು, ಹಾಸನ ಜಿಲ್ಲೆಯಲ್ಲಿ 23 ಪೊಲೀಸರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಓರ್ವ ಇನ್ಸ್ಪೆಕ್ಟರ್, ಓರ್ವ ಸಬ್ ಇನ್ಸ್ಪೆಕ್ಟರ್, 21 ಕಾನ್ಸ್ಟೆಬಲ್ಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಹಾಸನ ನಗರದಲ್ಲಿಯೇ ಅತಿ ಹೆಚ್ಚು ಪೊಲೀಸರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಟ್ರಾಫಿಕ್ ಹಾಗೂ ಗ್ರಾಮಾಂತರ ಠಾಣೆ ಪೊಲೀಸರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಶುಕ್ರವಾರ ಜಿಲ್ಲೆಯ ಎಲ್ಲಾ ಪೊಲೀಸರಿಗೂ ಕೊರೊನಾ ಟೆಸ್ಟ್ ಮಾಡಲಾಗಿತ್ತು. Random ಟೆಸ್ಟ್ ವೇಳೆ 23 ಪೊಲೀಸರಿಗೆ ಕೊರೊನಾ ಇರುವುದು ಪತ್ತೆಯಾಗಿದೆ.

ಜನವರಿ 7 ಮತ್ತು 8, 9ರಂದು ಒಟ್ಟು 23 ಪೊಲೀಸರಿಗೆ ಕೊರೋನಾ ದೃಢಪಟ್ಟಿದೆ. ಸದ್ಯ ಎಲ್ಲರನ್ನೂ ಹೋಂ ಕ್ವಾರಂಟೈನ್ ಮಾಡಿದ್ದು, ಪೊಲೀಸ್ ಇಲಾಖೆ ಚಿಕಿತ್ಸೆ ಕೊಡಿಸುತ್ತಿದೆ. ಪ್ರಾಥಮಿಕ ಸಂಪರ್ಕದಲ್ಲಿರುವವರಿಗೂ ಇಂದು ಕೊವಿಡ್ ಟೆಸ್ಟ್ ಮಾಡಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಹಾಸನ ಜಿಲ್ಲೆಯಲ್ಲಿ ಕೊರೊನಾ ವೈರಸ್ ಸೋಂಕು ಸ್ಫೋಟವಾಗುತ್ತಿದ್ದು, ಪ್ರತಿದಿನ ಕೊರೊನಾ ಸೋಂಕಿತರ ಸಂಖ್ಯೆ 100ರ ಗಡಿ ದಾಟಿದೆ. 23 ಪೊಲೀಸರಿಗೆ ಕೊರೊನಾ ಸೋಂಕು ಧೃಡಪಟ್ಟಿದ್ದು, ಹಾಸನ ಜಿಲ್ಲಾ ಜನರು ಆಂತಕಕ್ಕೀಡಾಗಿದ್ದಾರೆ.
ಹಾಸನ ಹಾಗೂ ಬೇಲೂರು, ಹೊಳೆನರಸೀಪುರ ತಾಲೂಕಿನಲ್ಲಿ ಕೊರೊನಾ ಸ್ಫೋಟಗೊಂಡಿದ್ದು, ಹಾಸನ ತಾಲೂಕಿನಲ್ಲಿ 106 ಹಾಗೂ ಬೇಲೂರು 16, ಹೊಳೆನರಸೀಪುರ ತಾಲೂಕಿನಲ್ಲಿ 15 ಪ್ರಕರಣ ಪತ್ತೆಯಾಗಿವೆ. ಜಿಲ್ಲೆಯ ಗ್ರಾಮೀಣ ಮಟ್ಟದಲ್ಲೇ ಸೋಂಕು ಹೆಚ್ಚಾಗುತ್ತಿರುವುದು ಗ್ರಾಮೀಣ ಭಾಗದ ಜನರನ್ನು ಮತ್ತಷ್ಟು ಕಂಗೆಡಿಸಿದೆ. ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಸಾರ್ವಜನಿಕಲ್ಲಿ ಕೊರೊನಾ ಆತಂಕ ಮತ್ತೆ ಶುರುವಾಗಿದೆ.
Covid spikes in Hassan, 21 police and 21 students tested positive for corona.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 10:33 am
HK News Staffer
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm
ಕಾರವಾರದ ಕಡ್ಲೆ ಬೀಚ್ನಲ್ಲಿ ರೀಲ್ಸ್ ಮಾಡುಲು ಹೋಗಿ ಅ...
15-06-26 04:54 pm
ಸೋಲಾಪುರದಲ್ಲಿ ಭೀಕರ ದುರಂತ! ನಿಯಂತ್ರಣ ತಪ್ಪಿ ನಾಲೆಗ...
15-06-26 11:50 am