ಬ್ರೇಕಿಂಗ್ ನ್ಯೂಸ್
11-01-22 02:31 pm HK Desk news ಕರ್ನಾಟಕ
ಬೆಂಗಳೂರು, ಜ 11: ಮೇಕೆದಾಟು ಪಾದಯಾತ್ರೆಯಿಂದ ಕಾಂಗ್ರೆಸ್ ಅವರು ಗಳಿಸಿಕೊಂಡಿದ್ದಕ್ಕಿಂತ ಹೆಚ್ಚು ಕಳೆದುಕೊಂಡಿದ್ದಾರೆ. ಇವರು ಜನರ ಶಾಪಕ್ಕೆ ಕಾಂಗ್ರೆಸ್ ಅವರು ಒಳಗಾಗುತ್ತಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.
ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಅವರು, ಪಾದಯಾತ್ರೆ ಸಕ್ಸಸ್ ಆಗಿದೆ ಎಂದು ಕಾಂಗ್ರೆಸ್ ಅಂದುಕೊಂಡಿದೆ. ಆದರೆ ಇವರ ಪಾದಯಾತ್ರೆ ಸಾಮಾನ್ಯ ಜನರಿಗೆ ಆತಂಕವನ್ನು ತಂದಿದೆ. ಇವರಿಂದಾಗಿ ಕೇಸ್ ಉಲ್ಬಣವಾಗಿ ಲಾಕ್ಡೌನ್ ಆದರೆ ಏನು ಮಾಡಬೇಕು ಎಂಬ ಚಿಂತೆಯಲ್ಲಿದ್ದಾರೆ ಎಂದರು.
ಕಾಂಗ್ರೆಸ್ ಅವರ ಪಾದಯಾತ್ರೆಗೆ ಜನ ಉಗಿಯುತ್ತಿದ್ದಾರೆ. ಜನರ ಸಹಾನುಭೂತಿ ಅವರಿಗೆ ಸಿಗಲ್ಲ. ನಿನ್ನೆ 43ಕ್ಕೂ ಅಧಿಕ ಜನರ ಮೇಲೆ ಮೇಲೆ ಪುನ: ಎಫ್ಐಆರ್ ದಾಖಲಾಗಿದೆ. ಕೇಸ್ ದಾಖಲಾಗಿದೆ, ಕಾನೂನು ಕ್ರಮ ಆಗುತ್ತದೆ. ಕಾನೂನು ಕ್ರಮದಿಂದ ಅವರು ತಪ್ಪಿಸಿಕೊಳ್ಳಲು ಆಗುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

ರಾಜಕೀಯ ಪಕ್ಷವಾಗಿ ಈಗ ಪಾದಯಾತ್ರೆ ಮಾಡಬಾರದಿತ್ತು. ಕಾಂಗ್ರೆಸ್ಗೆ ಖಂಡಿತಾ ಒಳ್ಳೆಯದಾಗಲ್ಲ, ಜನ ಇವರಿಗೆ ಬುದ್ಧಿ ಕಲಿಸುತ್ತಾರೆ. ರಾಮನಗರದಲ್ಲಿ ಕೋವಿಡ್ ಟೆಸ್ಟಿಂಗ್ ಹೆಚ್ಚಳಕ್ಕೆ ಸೂಚಿಸಿದ್ದೇವೆ. ಪಾದಯಾತ್ರೆಯಿಂದ ಜನರ ಜೀವನದ ಜೊತೆ ಚೆಲ್ಲಾಟ ಆಡುತ್ತಿದ್ದಾರೆ ಎಂದು ಕಿಡಿ ಕಾರಿದರು.
ರೇಣುಕಾಚಾರ್ಯ, ಸುಭಾಷ್ ಗುತ್ತೇದಾರರಿಂದ ಕೋವಿಡ್ ನಿಯಮ ಉಲ್ಲಂಘನೆ ವಿಚಾರವಾಗಿ ಮಾತನಾಡಿದ ಅವರು, ಅವರಿಬ್ಬರೂ ಮಾಡಿದ್ದು ಖಂಡಿತಾ ತಪ್ಪು. ರೇಣುಕಾಚಾರ್ಯ ಕ್ಷಮೆ ಕೇಳಿದ್ದಾರೆ. ಸುಭಾಷ್ ಗುತ್ತೇದಾರ್ ಅವರಿಗೂ ಹೀಗೆಲ್ಲ ಮಾಡದಂತೆ ಸೂಚಿಸಿದ್ದೇವೆ ಎಂದರು.

ಪಾದಯಾತ್ರೆಯಲ್ಲಿ ಸಿದ್ದರಾಮಯ್ಯ, ಡಿಕೆಶಿ ಮಧ್ಯೆ ಸ್ಪರ್ಧೆ ಇದೆ. ಇಬ್ಬರ ಮಧ್ಯೆ ನಡಿಗೆ ಸ್ಪರ್ಧೆ ನಡಿಯುತ್ತಿದೆ. ನಮ್ಮ ಬೊಮ್ಮಾಯಿ ಸದ್ಯಕ್ಕೆ ಇದರ ಅಂಪೈರ್ ಆಗಿದ್ದಾರೆ. ಜನ, ಅಂಪೈರ್ ಇಬ್ಬರು ಸೇರಿ ಖಂಡಿತಾ ಇದರ ಬಗ್ಗೆ ತೀರ್ಮಾನ ತಗೆದುಕೊಳ್ಳುತ್ತಾರೆ ಎಂದು ವ್ಯಂಗ್ಯವಾಡಿದ ಅವರು, ಡಿಕೆಶಿ ಶಾಲಾ ಮಕ್ಕಳ ಜೊತೆ ಮಾಸ್ಕ್ ಇಲ್ಲದೇ ಬೆರೆತಿದ್ದಾರೆ. ಇದು ಅಮಾನವೀಯ ಘಟನೆಯಾಗಿದೆ. ಡಿಕೆಶಿಗೆ ಟೆಸ್ಟ್ ಮಾಡಲು ಅಧಿಕಾರಿಗಳನ್ನು ಕಳಿಸಿದರೆ ಗದರಿಸಿ ಕಳುಹಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಲಾಕ್ಡೌನ್ ಜಾರಿ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ತಜ್ಞರ ಅಭಿಪ್ರಾಯಗಳನ್ನು ಸರ್ಕಾರ ಎದುರು ನೋಡುತ್ತಿದೆ. ಬಹಳ ಟಫ್ ರೂಲ್ಸ್ ತರಲು ತಜ್ಞರ ಅಭಿಪ್ರಾಯವನ್ನೂ ಪರಿಗಣಿಸುತ್ತೇವೆ. ನಾಳೆ ಲಾಕ್ಡೌನ್ ಆಗುವ ಪರಿಸ್ಥಿತಿ ಬಂದರೆ ಕಾಂಗ್ರೆಸ್ ಅವರೇ ಅದರ ಹೊಣೆಯನ್ನು ಹೊರಬೇಕು. ಕೇಸ್ ಹೆಚ್ಚಾದರೆ ಕಾಂಗ್ರೆಸ್ಸಿಗರೇ ಕಾರಣ ಎಂದು ತಿಳಿಸಿದರು.
Mekedatu padayatra, If Karnataka goes under lockdown congress is responsible says Home Minister. Their curse will fall upon Congress leaders he added.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am