ಬ್ರೇಕಿಂಗ್ ನ್ಯೂಸ್
11-01-22 02:31 pm HK Desk news ಕರ್ನಾಟಕ
ಬೆಂಗಳೂರು, ಜ 11: ಮೇಕೆದಾಟು ಪಾದಯಾತ್ರೆಯಿಂದ ಕಾಂಗ್ರೆಸ್ ಅವರು ಗಳಿಸಿಕೊಂಡಿದ್ದಕ್ಕಿಂತ ಹೆಚ್ಚು ಕಳೆದುಕೊಂಡಿದ್ದಾರೆ. ಇವರು ಜನರ ಶಾಪಕ್ಕೆ ಕಾಂಗ್ರೆಸ್ ಅವರು ಒಳಗಾಗುತ್ತಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.
ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಅವರು, ಪಾದಯಾತ್ರೆ ಸಕ್ಸಸ್ ಆಗಿದೆ ಎಂದು ಕಾಂಗ್ರೆಸ್ ಅಂದುಕೊಂಡಿದೆ. ಆದರೆ ಇವರ ಪಾದಯಾತ್ರೆ ಸಾಮಾನ್ಯ ಜನರಿಗೆ ಆತಂಕವನ್ನು ತಂದಿದೆ. ಇವರಿಂದಾಗಿ ಕೇಸ್ ಉಲ್ಬಣವಾಗಿ ಲಾಕ್ಡೌನ್ ಆದರೆ ಏನು ಮಾಡಬೇಕು ಎಂಬ ಚಿಂತೆಯಲ್ಲಿದ್ದಾರೆ ಎಂದರು.
ಕಾಂಗ್ರೆಸ್ ಅವರ ಪಾದಯಾತ್ರೆಗೆ ಜನ ಉಗಿಯುತ್ತಿದ್ದಾರೆ. ಜನರ ಸಹಾನುಭೂತಿ ಅವರಿಗೆ ಸಿಗಲ್ಲ. ನಿನ್ನೆ 43ಕ್ಕೂ ಅಧಿಕ ಜನರ ಮೇಲೆ ಮೇಲೆ ಪುನ: ಎಫ್ಐಆರ್ ದಾಖಲಾಗಿದೆ. ಕೇಸ್ ದಾಖಲಾಗಿದೆ, ಕಾನೂನು ಕ್ರಮ ಆಗುತ್ತದೆ. ಕಾನೂನು ಕ್ರಮದಿಂದ ಅವರು ತಪ್ಪಿಸಿಕೊಳ್ಳಲು ಆಗುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

ರಾಜಕೀಯ ಪಕ್ಷವಾಗಿ ಈಗ ಪಾದಯಾತ್ರೆ ಮಾಡಬಾರದಿತ್ತು. ಕಾಂಗ್ರೆಸ್ಗೆ ಖಂಡಿತಾ ಒಳ್ಳೆಯದಾಗಲ್ಲ, ಜನ ಇವರಿಗೆ ಬುದ್ಧಿ ಕಲಿಸುತ್ತಾರೆ. ರಾಮನಗರದಲ್ಲಿ ಕೋವಿಡ್ ಟೆಸ್ಟಿಂಗ್ ಹೆಚ್ಚಳಕ್ಕೆ ಸೂಚಿಸಿದ್ದೇವೆ. ಪಾದಯಾತ್ರೆಯಿಂದ ಜನರ ಜೀವನದ ಜೊತೆ ಚೆಲ್ಲಾಟ ಆಡುತ್ತಿದ್ದಾರೆ ಎಂದು ಕಿಡಿ ಕಾರಿದರು.
ರೇಣುಕಾಚಾರ್ಯ, ಸುಭಾಷ್ ಗುತ್ತೇದಾರರಿಂದ ಕೋವಿಡ್ ನಿಯಮ ಉಲ್ಲಂಘನೆ ವಿಚಾರವಾಗಿ ಮಾತನಾಡಿದ ಅವರು, ಅವರಿಬ್ಬರೂ ಮಾಡಿದ್ದು ಖಂಡಿತಾ ತಪ್ಪು. ರೇಣುಕಾಚಾರ್ಯ ಕ್ಷಮೆ ಕೇಳಿದ್ದಾರೆ. ಸುಭಾಷ್ ಗುತ್ತೇದಾರ್ ಅವರಿಗೂ ಹೀಗೆಲ್ಲ ಮಾಡದಂತೆ ಸೂಚಿಸಿದ್ದೇವೆ ಎಂದರು.

ಪಾದಯಾತ್ರೆಯಲ್ಲಿ ಸಿದ್ದರಾಮಯ್ಯ, ಡಿಕೆಶಿ ಮಧ್ಯೆ ಸ್ಪರ್ಧೆ ಇದೆ. ಇಬ್ಬರ ಮಧ್ಯೆ ನಡಿಗೆ ಸ್ಪರ್ಧೆ ನಡಿಯುತ್ತಿದೆ. ನಮ್ಮ ಬೊಮ್ಮಾಯಿ ಸದ್ಯಕ್ಕೆ ಇದರ ಅಂಪೈರ್ ಆಗಿದ್ದಾರೆ. ಜನ, ಅಂಪೈರ್ ಇಬ್ಬರು ಸೇರಿ ಖಂಡಿತಾ ಇದರ ಬಗ್ಗೆ ತೀರ್ಮಾನ ತಗೆದುಕೊಳ್ಳುತ್ತಾರೆ ಎಂದು ವ್ಯಂಗ್ಯವಾಡಿದ ಅವರು, ಡಿಕೆಶಿ ಶಾಲಾ ಮಕ್ಕಳ ಜೊತೆ ಮಾಸ್ಕ್ ಇಲ್ಲದೇ ಬೆರೆತಿದ್ದಾರೆ. ಇದು ಅಮಾನವೀಯ ಘಟನೆಯಾಗಿದೆ. ಡಿಕೆಶಿಗೆ ಟೆಸ್ಟ್ ಮಾಡಲು ಅಧಿಕಾರಿಗಳನ್ನು ಕಳಿಸಿದರೆ ಗದರಿಸಿ ಕಳುಹಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಲಾಕ್ಡೌನ್ ಜಾರಿ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ತಜ್ಞರ ಅಭಿಪ್ರಾಯಗಳನ್ನು ಸರ್ಕಾರ ಎದುರು ನೋಡುತ್ತಿದೆ. ಬಹಳ ಟಫ್ ರೂಲ್ಸ್ ತರಲು ತಜ್ಞರ ಅಭಿಪ್ರಾಯವನ್ನೂ ಪರಿಗಣಿಸುತ್ತೇವೆ. ನಾಳೆ ಲಾಕ್ಡೌನ್ ಆಗುವ ಪರಿಸ್ಥಿತಿ ಬಂದರೆ ಕಾಂಗ್ರೆಸ್ ಅವರೇ ಅದರ ಹೊಣೆಯನ್ನು ಹೊರಬೇಕು. ಕೇಸ್ ಹೆಚ್ಚಾದರೆ ಕಾಂಗ್ರೆಸ್ಸಿಗರೇ ಕಾರಣ ಎಂದು ತಿಳಿಸಿದರು.
Mekedatu padayatra, If Karnataka goes under lockdown congress is responsible says Home Minister. Their curse will fall upon Congress leaders he added.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm