ಬ್ರೇಕಿಂಗ್ ನ್ಯೂಸ್
12-01-22 12:54 pm HK Desk news ಕರ್ನಾಟಕ
ರಾಮನಗರ, ಜ.12 : ಮೇಕೆದಾಟು ಯೋಜನೆ ಆಗ್ರಹಿಸಿ ಮೂರನೇ ದಿನದ ಪಾದಯಾತ್ರೆಯಲ್ಲಿ ಪಾಲ್ಗೊಂಡ ಕಾಂಗ್ರೆಸ್ ನಾಯಕರ ವಿರುದ್ಧ ಪ್ರತ್ಯೇಕ ಎಫ್ಐಆರ್ ದಾಖಲಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಸೇರಿದಂತೆ 64 ಮಂದಿ ಕಾಂಗ್ರೆಸ್ ನಾಯಕರ ವಿರುದ್ಧ ಕನಕಪುರ ತಹಸೀಲ್ದಾರ್ ದೂರಿನಂತೆ ಕೇಸು ದಾಖಲಾಗಿದೆ.
ಮೊದಲ ಎರಡು ದಿನದ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದ 30ಕ್ಕೂ ಹೆಚ್ಚು ಕಾಂಗ್ರೆಸ್ ನಾಯಕರ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಮೂರನೇ ದಿನ ಮಂಗಳವಾರ ಬೆಳಗ್ಗೆ 11ರಿಂದ ಕನಕಪುರ ನಗರದ ಚನ್ನಬಸಪ್ಪ ವೃತ್ತದಿಂದ ಕನಕಪುರ ಕಸಬಾ ಹೋಬಳಿ, ಚಕ್ಕೇನಹಳ್ಳಿ ಗ್ರಾಮದ ವರೆಗೆ ರಾತ್ರಿ 9ರ ವರೆಗೆ ಜನರು ಗುಂಪುಕೂಡಿ ಕೋವಿಡ್ ಮಾರ್ಗಸೂಚಿ ಪಾಲಿಸದೇ ಸರಕಾರದ ನಿಮಯ ಉಲ್ಲಂಘಿಸಿದ್ದಾರೆ. ಸಾಮಾಜಿಕ ಅಂತರ ಪಾಲಿಸದೇ ಸಾರ್ವಜನಿಕರ ಆರೋಗ್ಯ, ಜೀವಕ್ಕೆ ಅಪಾಯವಾಗುವ ರೀತಿ ನಡೆದುಕೊಂಡಿದ್ದಾರೆ ಎಂದು ಕನಕಪುರ ತಹಸೀಲ್ದಾರ್ ವಿಶ್ವನಾಥ್, ಕನಕಪುರ ನಗರ ಠಾಣೆಯಲ್ಲಿ ದೂರು ನೀಡಿದ್ದಾರೆ.





ಅದರಂತೆ, ಐಪಿಸಿ ಕಲಂ 141, 143, 290, 336, 149 ಅಡಿ ಪ್ರಕರಣ ದಾಖಲಾಗಿದೆ. ಡಿಕೆ ಶಿವಕುಮಾರ್, ಡಿಕೆ ಸುರೇಶ್, ಸಿದ್ದರಾಮಯ್ಯ, ರವಿ ಎಸ್., ಧ್ರುವನಾರಾಯಣ, ಪ್ರಿಯಾಂಕ್ ಖರ್ಗೆ, ಈಶ್ವರ ಖಂಡ್ರೆ, ತನ್ವೀರ್ ಸೇಠ್, ಅನಿಲ್ ಚಿಕ್ಕಮಾಧು, ಮಂಜುನಾಥ ಹುಣಸೂರು, ಸಲೀಂ ಅಹ್ಮದ್, ಡಾ.ಎಚ್.ಸಿ.ಮಹದೇವಪ್ಪ, ಲಕ್ಷ್ಮೀನಾರಾಯಣ, ಯತೀಂದ್ರ ಸಿದ್ದರಾಮಯ್ಯ, ನಲಪಾಡ್ ಹ್ಯಾರಿಸ್, ಕೋನಪ್ಪ ರೆಡ್ಡಿ, ಎಚ್.ಡಿ.ರಂಗನಾಥ್, ಬಿ.ಕೆ.ಸೋಮಶೇಖರ್, ಮುಖ್ಯಮಂತ್ರಿ ಚಂದ್ರು, ಅಂಜನ್ ಮೂರ್ತಿ, ಕೆ.ಬಿ.ಕೋಳಿವಾಡ, ಐವಾನ್ ಡಿಸೋಜ, ವಿನಯ ಕುಲಕರ್ಣಿ ಸೇರಿದಂತೆ 64 ಮಂದಿ ಕಾಂಗ್ರೆಸ್ ನಾಯಕರ ವಿರುದ್ಧ ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿದ ವಿರುದ್ಧ ಪ್ರಕರಣ ದಾಖಲಾಗಿದೆ.
Bengaluru, As the Karnataka Congress continued its ‘padayatra’ (march) demanding implementation of the Mekedatu project across the Cauvery river, for the third consecutive day on Tuesday, police registered second FIR against state party chief DK Shivakumar and several other leaders for violating Covid-19 curbs.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am