ಬ್ರೇಕಿಂಗ್ ನ್ಯೂಸ್
12-01-22 12:54 pm HK Desk news ಕರ್ನಾಟಕ
ರಾಮನಗರ, ಜ.12 : ಮೇಕೆದಾಟು ಯೋಜನೆ ಆಗ್ರಹಿಸಿ ಮೂರನೇ ದಿನದ ಪಾದಯಾತ್ರೆಯಲ್ಲಿ ಪಾಲ್ಗೊಂಡ ಕಾಂಗ್ರೆಸ್ ನಾಯಕರ ವಿರುದ್ಧ ಪ್ರತ್ಯೇಕ ಎಫ್ಐಆರ್ ದಾಖಲಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಸೇರಿದಂತೆ 64 ಮಂದಿ ಕಾಂಗ್ರೆಸ್ ನಾಯಕರ ವಿರುದ್ಧ ಕನಕಪುರ ತಹಸೀಲ್ದಾರ್ ದೂರಿನಂತೆ ಕೇಸು ದಾಖಲಾಗಿದೆ.
ಮೊದಲ ಎರಡು ದಿನದ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದ 30ಕ್ಕೂ ಹೆಚ್ಚು ಕಾಂಗ್ರೆಸ್ ನಾಯಕರ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಮೂರನೇ ದಿನ ಮಂಗಳವಾರ ಬೆಳಗ್ಗೆ 11ರಿಂದ ಕನಕಪುರ ನಗರದ ಚನ್ನಬಸಪ್ಪ ವೃತ್ತದಿಂದ ಕನಕಪುರ ಕಸಬಾ ಹೋಬಳಿ, ಚಕ್ಕೇನಹಳ್ಳಿ ಗ್ರಾಮದ ವರೆಗೆ ರಾತ್ರಿ 9ರ ವರೆಗೆ ಜನರು ಗುಂಪುಕೂಡಿ ಕೋವಿಡ್ ಮಾರ್ಗಸೂಚಿ ಪಾಲಿಸದೇ ಸರಕಾರದ ನಿಮಯ ಉಲ್ಲಂಘಿಸಿದ್ದಾರೆ. ಸಾಮಾಜಿಕ ಅಂತರ ಪಾಲಿಸದೇ ಸಾರ್ವಜನಿಕರ ಆರೋಗ್ಯ, ಜೀವಕ್ಕೆ ಅಪಾಯವಾಗುವ ರೀತಿ ನಡೆದುಕೊಂಡಿದ್ದಾರೆ ಎಂದು ಕನಕಪುರ ತಹಸೀಲ್ದಾರ್ ವಿಶ್ವನಾಥ್, ಕನಕಪುರ ನಗರ ಠಾಣೆಯಲ್ಲಿ ದೂರು ನೀಡಿದ್ದಾರೆ.





ಅದರಂತೆ, ಐಪಿಸಿ ಕಲಂ 141, 143, 290, 336, 149 ಅಡಿ ಪ್ರಕರಣ ದಾಖಲಾಗಿದೆ. ಡಿಕೆ ಶಿವಕುಮಾರ್, ಡಿಕೆ ಸುರೇಶ್, ಸಿದ್ದರಾಮಯ್ಯ, ರವಿ ಎಸ್., ಧ್ರುವನಾರಾಯಣ, ಪ್ರಿಯಾಂಕ್ ಖರ್ಗೆ, ಈಶ್ವರ ಖಂಡ್ರೆ, ತನ್ವೀರ್ ಸೇಠ್, ಅನಿಲ್ ಚಿಕ್ಕಮಾಧು, ಮಂಜುನಾಥ ಹುಣಸೂರು, ಸಲೀಂ ಅಹ್ಮದ್, ಡಾ.ಎಚ್.ಸಿ.ಮಹದೇವಪ್ಪ, ಲಕ್ಷ್ಮೀನಾರಾಯಣ, ಯತೀಂದ್ರ ಸಿದ್ದರಾಮಯ್ಯ, ನಲಪಾಡ್ ಹ್ಯಾರಿಸ್, ಕೋನಪ್ಪ ರೆಡ್ಡಿ, ಎಚ್.ಡಿ.ರಂಗನಾಥ್, ಬಿ.ಕೆ.ಸೋಮಶೇಖರ್, ಮುಖ್ಯಮಂತ್ರಿ ಚಂದ್ರು, ಅಂಜನ್ ಮೂರ್ತಿ, ಕೆ.ಬಿ.ಕೋಳಿವಾಡ, ಐವಾನ್ ಡಿಸೋಜ, ವಿನಯ ಕುಲಕರ್ಣಿ ಸೇರಿದಂತೆ 64 ಮಂದಿ ಕಾಂಗ್ರೆಸ್ ನಾಯಕರ ವಿರುದ್ಧ ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿದ ವಿರುದ್ಧ ಪ್ರಕರಣ ದಾಖಲಾಗಿದೆ.
Bengaluru, As the Karnataka Congress continued its ‘padayatra’ (march) demanding implementation of the Mekedatu project across the Cauvery river, for the third consecutive day on Tuesday, police registered second FIR against state party chief DK Shivakumar and several other leaders for violating Covid-19 curbs.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm