ಬ್ರೇಕಿಂಗ್ ನ್ಯೂಸ್
12-01-22 03:02 pm HK Desk news ಕರ್ನಾಟಕ
ಬೆಂಗಳೂರು, ಜ.12 : ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ ಬುಧವಾರ 4ನೇ ದಿನಕ್ಕೆ ಕಾಲಿಡುತ್ತಿದ್ದಂತೆ ಪಾದಯಾತ್ರೆ ವಿರುದ್ಧ ಹೂಡಿದ್ದ ಕೇಸು ಹೈಕೋರ್ಟ್ ಅಂಗಳಕ್ಕೆ ತಲುಪಿದೆ.
ತುರ್ತು ವಿಚಾರಣೆ ನಡೆಸಿದ ಹೈಕೋರ್ಟ್ ರಾಜ್ಯದಲ್ಲಿ ಕೋವಿಡ್ ಸೋಂಕು ದಿನೇ ದಿನೇ ಹೆಚ್ಚುತ್ತಿರುವುದರ ಮಧ್ಯೆ ಪಾದಯಾತ್ರೆ ನಡೆಸುವ ಅಗತ್ಯವೇನಿದೆ ಎಂದು ಛೀಮಾರಿ ಹಾಕಿದೆ. ಇದಕ್ಕೆ ಸಂಬಂಧಿಸಿದಂತೆ ಸರ್ಕಾರಕ್ಕೆ, ರಾಮನಗರ ಜಿಲ್ಲಾಡಳಿತ, ಬಿಬಿಎಂಪಿ ಹಾಗೂ ಕೆಪಿಸಿಸಿಗೂ ನೋಟಿಸ್ ನೀಡಿದೆ. ಪಾದಯಾತ್ರೆ ವಿರುದ್ಧ ಸಾಮಾಜಿಕ ಕಾರ್ಯಕರ್ತ ನಾಗೇಂದ್ರ ಪ್ರಸಾದ್ ಸಾರ್ವಜನಿಕ ಹಿತಾಸಕ್ತಿ ಅರ್ಜಿ(PIL) ಸಲ್ಲಿಸಿದ್ದರು.
ಕೊರೋನಾ ಕೇಸ್ ಹೆಚ್ಚುತ್ತಿರುವ ಹೊತ್ತಲ್ಲಿ ಪಾದಯಾತ್ರೆ ಬೇಕಿತ್ತಾ ಎಂದು PIL ನಲ್ಲಿ ಪ್ರಶ್ನೆ ಮಾಡಲಾಗಿತ್ತು. ವಿಚಾರಣೆ ಬಳಿಕ ಹೈಕೋರ್ಟ್, ಕಾಂಗ್ರೆಸ್ ಪಾದಯಾತ್ರೆ ಸಾರ್ವಜನಿಕ ಹಿತಾಸಕ್ತಿಗೆ ವಿರುದ್ಧವಾಗಿದ್ದರೂ ರಾಜ್ಯ ಸರಕಾರ ಏಕೆ ಕ್ರಮ ಕೈಗೊಂಡಿಲ್ಲ. ಜನವರಿ 14ರಂದು ನಮಗೆ ಉತ್ತರ ಕೊಡಿ ಎಂದು ಸರ್ಕಾರಕ್ಕೆ ನೋಟಿಸ್ ನೀಡಿದ್ದು ವಿಚಾರಣೆಯನ್ನು ಆ ದಿನಾಂಕಕ್ಕೆ ಮುಂದೂಡಿದೆ.
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಮೂರನೇ ಅಲೆ ನಿಯಂತ್ರಿಸಲು ಕರ್ನಾಟಕ ಸರ್ಕಾರ ಕಠಿಣ ನಿಯಮಗಳನ್ನ ಜಾರಿಗೆ ತಂದಿದೆ. ಆದರೆ ಕಾಂಗ್ರೆಸ್ ನಾಯಕರು ಕೊರೊನಾ ನಿಮಯಗಳನ್ನ ಗಾಳಿಗೆ ತೂರಿ ಮೇಕೆದಾಟು ಯೋಜನೆ ಆಗ್ರಹಿಸಿ ಪಾದಯಾತ್ರೆ ನಡೆಸುತ್ತಿದ್ದಾರೆ. ಹೀಗಾಗಿ ಕಾಂಗ್ರೆಸ್ ಪಾದಯಾತ್ರೆ ನಿಲ್ಲಿಸಬೇಕೆಂದು ಹೈಕೋರ್ಟ್ ಗೆ ವಕೀಲ ಶ್ರೀಧರ್ ಪ್ರಭು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿ ತುರ್ತು ವಿಚಾರಣೆ ನಡೆಸುವಂತೆ ಮನವಿ ಮಾಡಿದ್ದರು.
ಮೇಕೆದಾಟು ಯೋಜನೆಗೆ ಕಾಂಗ್ರೆಸ್ ಪಕ್ಷಕ್ಕೆ ಪಾದಯಾತ್ರೆ ನಡೆಸಲು ಅನುಮತಿ ನೀಡಿಲ್ಲ ಎಂದಾದ ಮೇಲೆ ಪಾದಯಾತ್ರೆ ತಡೆಯಲು ಹಿಂಜರಿಕೆ ಏಕೆ ? ಸರ್ಕಾರ ಅಷ್ಟೊಂದು ಅಸಮರ್ಥವಾಗಿದೆಯಾ? ನ್ಯಾಯಾಲಯ ನೆರವಿಗೆ ಬರಬೇಕು ಎಂದು ಸರ್ಕಾರ ನಿರೀಕ್ಷಿಸುತ್ತಿದೆಯಾ? ಎಂದು ಹೈಕೋರ್ಟ್ ರಾಜ್ಯ ಸರ್ಕಾರವನ್ನು ಪ್ರಶ್ನಿಸಿದೆ.
ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಭಾರಿ ಪ್ರಮಾಣದಲ್ಲಿ ಏರಿಕೆಯಾಗುತ್ತಿರುವ ಈ ಅಪಾಯಕಾರಿ ಸಂದರ್ಭದಲ್ಲಿ ಜನ ಸೇರುವ ರ್ಯಾಲಿ, ಧರಣಿ, ಪ್ರದರ್ಶನ, ಮೆರವಣಿಗೆಗಳಿಗೆ ನಿರ್ಬಂಧ ಹೇರಿದ್ದರೂ, ಅವುಗಳಿಗೆ ಅವಕಾಶ ನೀಡುತ್ತಿರುವುದು ಹೇಗೆ? ವಿಶೇಷವಾಗಿ ಕಾಂಗ್ರೆಸ್ ಪಕ್ಷ ಪಾದಯಾತ್ರೆ ಹೇಗೆ ಮುಂದುವರಿಸಿದೆ, ಅದನ್ನು ತಡೆಯಲು ಕ್ರಮ ಕೈಗೊಂಡಿಲ್ಲವೇಕೆ ಎಂಬ ಬಗ್ಗೆ ಸ್ಪಷ್ಟನೆ ನೀಡುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ.
The court was hearing a public interest litigation (PIL) filed by activist Nagendra Prasad A V against the Karnataka government, state officials and the Karnataka Pradesh Congress Committee over the ‘padyatra’ which began Sunday. The BJP government in Karnataka Wednesday sought a day’s time to respond to a petition filed in the High Court questioning the legality of a 100-km ‘Walk For Water’ march by the Congress despite restrictions imposed on public gatherings and protests amid rising Covid-19 cases in the state.
28-02-25 09:33 pm
HK News Desk
B Y Vijayendra, D K Shivakumar: ರಾಜ್ಯದಲ್ಲಿ ಕ್...
28-02-25 06:17 pm
ಕೆಂಪೇಗೌಡ ಏರ್ಪೋರ್ಟ್ ನಲ್ಲಿ ಸಿಐಎಸ್ಎಫ್ ಭದ್ರತಾ ಸಿಬ...
28-02-25 05:52 pm
Mangalore Shiradi Ghat: ಶಿರಾಡಿ ಘಾಟ್ ಹೆದ್ದಾರಿಯ...
28-02-25 11:51 am
Honnavara Fire: ಹೊನ್ನಾವರದಲ್ಲಿ ಗುಜರಿ ಗೋಡೌನ್ಗೆ...
27-02-25 05:50 pm
01-03-25 10:39 pm
HK News Desk
Trump Vs Zelenskyy, Talk fight: ಶ್ವೇತ ಭವನದಲ್ಲ...
01-03-25 05:35 pm
Pope Francis: ಪೋಪ್ ಫ್ರಾನ್ಸಿಸ್ ಆರೋಗ್ಯ ಸ್ಥಿತಿ ಗ...
01-03-25 01:20 pm
ಟ್ರಂಪ್ ಸುಂಕ ಬರೆಗೆ ನಲುಗಿದ ಷೇರುಪೇಟೆ ; NIFTY ಇತಿ...
28-02-25 08:11 pm
ಪಾಕಿಸ್ತಾನ ಮದ್ರಸಾದಲ್ಲಿ ಆತ್ಮಾಹುತಿ ಬಾಂಬ್ ದಾಳಿ ;...
28-02-25 07:46 pm
01-03-25 10:00 pm
Mangalore Correspondent
Wakf, Mangalore, Amendment: ವಕ್ಫ್ ತಿದ್ದುಪಡಿ ಮ...
01-03-25 08:49 pm
Farangipete Protest, Diganth, Missing, Mangal...
01-03-25 01:47 pm
Mangalore, Nantoor-KPT road, Highway: ಅಧಿಕಾರಿ...
28-02-25 10:15 pm
Sharan Pumpwell, student missing, Farangipete...
28-02-25 06:13 pm
01-03-25 05:54 pm
HK News Desk
Bike Robbery, Mangalore Police, Crime, TD Nag...
01-03-25 02:40 pm
5 ವರ್ಷದ ಹೆಣ್ಣು ಮಗುವಿಗೆ ಕ್ರೂರ ಹಿಂಸೆ ನೀಡಿ ಅತ್ಯಾ...
28-02-25 02:37 pm
Bidar Murder, Crime: ಬೀದರ್ ; ಕುಡಿದು ಬಂದು ಕಿರು...
26-02-25 10:48 pm
Sirsi Crime, stabbing: ಶಿವರಾತ್ರಿ ಹಬ್ಬಕ್ಕೆ ಮನೆ...
26-02-25 01:27 pm