ಬ್ರೇಕಿಂಗ್ ನ್ಯೂಸ್
14-01-22 10:50 pm HK Desk news ಕರ್ನಾಟಕ
ಬೆಂಗಳೂರು, ಜ.14 : ಅಕ್ರಮ ಮರಳು ದಂಧೆ ಪ್ರಕರಣವನ್ನು ಮುಚ್ಚಿ ಹಾಕಲು ಲಂಚ ಪಡೆದ ಆರೋಪಕ್ಕೆ ಸಂಬಂಧಿಸಿ ಪೊಲೀಸ್ ವರಿಷ್ಠಾಧಿಕಾರಿ ರವಿ ಡಿ.ಚನ್ನಣ್ಣನವರ್ ಅವರನ್ನು ಅಮಾನತು ಮಾಡಿ, ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಆಮ್ ಆದ್ಮಿ ಪಾರ್ಟಿಯ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ. ಸದಂ ಆಗ್ರಹಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಜಗದೀಶ್ ವಿ ಸದಂ, ಕ್ರಷರ್ ಉದ್ಯಮಿ ಸೇರಿ ಹಲವರಿಂದ 3.96 ಕೋಟಿ ಮೊತ್ತ ವಂಚನೆಯಾಗಿದೆ ಎಂದು ಸಲ್ಲಿಕೆಯಾಗಿದ್ದ ದೂರನ್ನು ಆಧರಿಸಿ ಆರೋಪಿಗಳ ವಿರುದ್ಧ ರವಿ ಡಿ.ಚನ್ನಣ್ಣನವರ್ ಹಾಗೂ ಇತರೆ ಪೊಲೀಸ್ ಅಧಿಕಾರಿಗಳು ತನಿಖೆ ನಡೆಸಬೇಕಾಗಿತ್ತು. ಆದರೆ ಬೇಲಿಯೇ ಎದ್ದು ಹೊಲ ಮೇಯ್ತು ಎಂಬ ಗಾದೆಯಂತೆ, ಪೊಲೀಸ್ ಅಧಿಕಾರಿಗಳೇ ಆರೋಪಿಗಳಿಂದ 50 ಲಕ್ಷ ರೂ. ಲಂಚ ಪಡೆದಿರುವ ಆರೋಪ ಕೇಳಿಬಂದಿದೆ. ಇಂತಹ ಗಂಭೀರ ಆರೋಪ ಹೊತ್ತಿರುವ ರವಿ ಡಿ.ಚನ್ನಣ್ಣನವರ್ ಸಿಐಡಿ ಎಸ್ಪಿ ಹುದ್ದೆಯಲ್ಲಿ ಮುಂದುವರಿಯುವುದು ಸರಿಯಲ್ಲ. ತಕ್ಷಣವೇ ಅಮಾನತು ಮಾಡಿ ಸಮಗ್ರ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.
ಪ್ರಕರಣ ಸಂಬಂಧ ಮಂಜುನಾಥ್ ಎಂಬುವವರು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ. ರವಿ ಚನ್ನಣ್ಣನವರ್ 25 ಲಕ್ಷ, ಡಿವೈಎಸ್ಪಿ 15 ಲಕ್ಷ ಹಾಗೂ ಮತ್ತೊಬ್ಬ ಅಧಿಕಾರಿ 10 ಲಕ್ಷ ರೂಪಾಯಿ ಸ್ವೀಕರಿಸಿರುವ ಕುರಿತು ದೂರಿನಲ್ಲಿ ಸ್ಪಷ್ವವಾಗಿ ಉಲ್ಲೇಖಿಸಿದ್ದಾರೆ. ಪ್ರಭಾವಿಗಳ ವಿರುದ್ಧ ಎಫ್ಐಆರ್ ದಾಖಲಿಸಲು ಕೂಡ ಪೊಲೀಸ್ ಅಧಿಕಾರಿಗಳು ಲಕ್ಷಗಟ್ಟಲೆ ಲಂಚ ಕೇಳಿರುವ ಮಾಹಿತಿ ದೂರಿನಲ್ಲಿದೆ. ಆರೋಪಗಳಿಗೆ ಸಂಬಂಧಿಸಿ ಧ್ವನಿ ಮುದ್ರಣ, ವಾಟ್ಸಪ್ ಸಂದೇಶ ಮುಂತಾದ ಸಾಕ್ಷಿಗಳಿವೆ ಎಂದು ಮಂಜುನಾಥ್ ಹೇಳಿದ್ದಾರೆ. ಅವೆಲ್ಲದರ ಆಧಾರದಲ್ಲಿ ತನಿಖೆ ನಡೆಸಿ, ನೈಸರ್ಗಿಕ ಸಂಪತ್ತನ್ನು ಕೊಳ್ಳೆ ಹೊಡೆದವರಿಗೆ ಹಾಗೂ ಅವರನ್ನು ರಕ್ಷಣೆ ಮಾಡಿದವರಿಗೆ ಕಠಿಣ ಶಿಕ್ಷೆ ನೀಡಬೇಕು ಒತ್ತಾಯಿಸಿದ್ದಾರೆ.
CID SP Ravi D Channannavar and 3 other police officers alleged for taking bribe of 50 lakhs from accused. A complaint has been given to the police chief of Karnataka.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm