ಬ್ರೇಕಿಂಗ್ ನ್ಯೂಸ್
14-01-22 10:50 pm HK Desk news ಕರ್ನಾಟಕ
ಬೆಂಗಳೂರು, ಜ.14 : ಅಕ್ರಮ ಮರಳು ದಂಧೆ ಪ್ರಕರಣವನ್ನು ಮುಚ್ಚಿ ಹಾಕಲು ಲಂಚ ಪಡೆದ ಆರೋಪಕ್ಕೆ ಸಂಬಂಧಿಸಿ ಪೊಲೀಸ್ ವರಿಷ್ಠಾಧಿಕಾರಿ ರವಿ ಡಿ.ಚನ್ನಣ್ಣನವರ್ ಅವರನ್ನು ಅಮಾನತು ಮಾಡಿ, ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಆಮ್ ಆದ್ಮಿ ಪಾರ್ಟಿಯ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ. ಸದಂ ಆಗ್ರಹಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಜಗದೀಶ್ ವಿ ಸದಂ, ಕ್ರಷರ್ ಉದ್ಯಮಿ ಸೇರಿ ಹಲವರಿಂದ 3.96 ಕೋಟಿ ಮೊತ್ತ ವಂಚನೆಯಾಗಿದೆ ಎಂದು ಸಲ್ಲಿಕೆಯಾಗಿದ್ದ ದೂರನ್ನು ಆಧರಿಸಿ ಆರೋಪಿಗಳ ವಿರುದ್ಧ ರವಿ ಡಿ.ಚನ್ನಣ್ಣನವರ್ ಹಾಗೂ ಇತರೆ ಪೊಲೀಸ್ ಅಧಿಕಾರಿಗಳು ತನಿಖೆ ನಡೆಸಬೇಕಾಗಿತ್ತು. ಆದರೆ ಬೇಲಿಯೇ ಎದ್ದು ಹೊಲ ಮೇಯ್ತು ಎಂಬ ಗಾದೆಯಂತೆ, ಪೊಲೀಸ್ ಅಧಿಕಾರಿಗಳೇ ಆರೋಪಿಗಳಿಂದ 50 ಲಕ್ಷ ರೂ. ಲಂಚ ಪಡೆದಿರುವ ಆರೋಪ ಕೇಳಿಬಂದಿದೆ. ಇಂತಹ ಗಂಭೀರ ಆರೋಪ ಹೊತ್ತಿರುವ ರವಿ ಡಿ.ಚನ್ನಣ್ಣನವರ್ ಸಿಐಡಿ ಎಸ್ಪಿ ಹುದ್ದೆಯಲ್ಲಿ ಮುಂದುವರಿಯುವುದು ಸರಿಯಲ್ಲ. ತಕ್ಷಣವೇ ಅಮಾನತು ಮಾಡಿ ಸಮಗ್ರ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.
ಪ್ರಕರಣ ಸಂಬಂಧ ಮಂಜುನಾಥ್ ಎಂಬುವವರು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ. ರವಿ ಚನ್ನಣ್ಣನವರ್ 25 ಲಕ್ಷ, ಡಿವೈಎಸ್ಪಿ 15 ಲಕ್ಷ ಹಾಗೂ ಮತ್ತೊಬ್ಬ ಅಧಿಕಾರಿ 10 ಲಕ್ಷ ರೂಪಾಯಿ ಸ್ವೀಕರಿಸಿರುವ ಕುರಿತು ದೂರಿನಲ್ಲಿ ಸ್ಪಷ್ವವಾಗಿ ಉಲ್ಲೇಖಿಸಿದ್ದಾರೆ. ಪ್ರಭಾವಿಗಳ ವಿರುದ್ಧ ಎಫ್ಐಆರ್ ದಾಖಲಿಸಲು ಕೂಡ ಪೊಲೀಸ್ ಅಧಿಕಾರಿಗಳು ಲಕ್ಷಗಟ್ಟಲೆ ಲಂಚ ಕೇಳಿರುವ ಮಾಹಿತಿ ದೂರಿನಲ್ಲಿದೆ. ಆರೋಪಗಳಿಗೆ ಸಂಬಂಧಿಸಿ ಧ್ವನಿ ಮುದ್ರಣ, ವಾಟ್ಸಪ್ ಸಂದೇಶ ಮುಂತಾದ ಸಾಕ್ಷಿಗಳಿವೆ ಎಂದು ಮಂಜುನಾಥ್ ಹೇಳಿದ್ದಾರೆ. ಅವೆಲ್ಲದರ ಆಧಾರದಲ್ಲಿ ತನಿಖೆ ನಡೆಸಿ, ನೈಸರ್ಗಿಕ ಸಂಪತ್ತನ್ನು ಕೊಳ್ಳೆ ಹೊಡೆದವರಿಗೆ ಹಾಗೂ ಅವರನ್ನು ರಕ್ಷಣೆ ಮಾಡಿದವರಿಗೆ ಕಠಿಣ ಶಿಕ್ಷೆ ನೀಡಬೇಕು ಒತ್ತಾಯಿಸಿದ್ದಾರೆ.
CID SP Ravi D Channannavar and 3 other police officers alleged for taking bribe of 50 lakhs from accused. A complaint has been given to the police chief of Karnataka.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm