ಬ್ರೇಕಿಂಗ್ ನ್ಯೂಸ್
14-01-22 10:50 pm HK Desk news ಕರ್ನಾಟಕ
ಬೆಂಗಳೂರು, ಜ.14 : ಅಕ್ರಮ ಮರಳು ದಂಧೆ ಪ್ರಕರಣವನ್ನು ಮುಚ್ಚಿ ಹಾಕಲು ಲಂಚ ಪಡೆದ ಆರೋಪಕ್ಕೆ ಸಂಬಂಧಿಸಿ ಪೊಲೀಸ್ ವರಿಷ್ಠಾಧಿಕಾರಿ ರವಿ ಡಿ.ಚನ್ನಣ್ಣನವರ್ ಅವರನ್ನು ಅಮಾನತು ಮಾಡಿ, ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಆಮ್ ಆದ್ಮಿ ಪಾರ್ಟಿಯ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ. ಸದಂ ಆಗ್ರಹಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಜಗದೀಶ್ ವಿ ಸದಂ, ಕ್ರಷರ್ ಉದ್ಯಮಿ ಸೇರಿ ಹಲವರಿಂದ 3.96 ಕೋಟಿ ಮೊತ್ತ ವಂಚನೆಯಾಗಿದೆ ಎಂದು ಸಲ್ಲಿಕೆಯಾಗಿದ್ದ ದೂರನ್ನು ಆಧರಿಸಿ ಆರೋಪಿಗಳ ವಿರುದ್ಧ ರವಿ ಡಿ.ಚನ್ನಣ್ಣನವರ್ ಹಾಗೂ ಇತರೆ ಪೊಲೀಸ್ ಅಧಿಕಾರಿಗಳು ತನಿಖೆ ನಡೆಸಬೇಕಾಗಿತ್ತು. ಆದರೆ ಬೇಲಿಯೇ ಎದ್ದು ಹೊಲ ಮೇಯ್ತು ಎಂಬ ಗಾದೆಯಂತೆ, ಪೊಲೀಸ್ ಅಧಿಕಾರಿಗಳೇ ಆರೋಪಿಗಳಿಂದ 50 ಲಕ್ಷ ರೂ. ಲಂಚ ಪಡೆದಿರುವ ಆರೋಪ ಕೇಳಿಬಂದಿದೆ. ಇಂತಹ ಗಂಭೀರ ಆರೋಪ ಹೊತ್ತಿರುವ ರವಿ ಡಿ.ಚನ್ನಣ್ಣನವರ್ ಸಿಐಡಿ ಎಸ್ಪಿ ಹುದ್ದೆಯಲ್ಲಿ ಮುಂದುವರಿಯುವುದು ಸರಿಯಲ್ಲ. ತಕ್ಷಣವೇ ಅಮಾನತು ಮಾಡಿ ಸಮಗ್ರ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.
ಪ್ರಕರಣ ಸಂಬಂಧ ಮಂಜುನಾಥ್ ಎಂಬುವವರು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ. ರವಿ ಚನ್ನಣ್ಣನವರ್ 25 ಲಕ್ಷ, ಡಿವೈಎಸ್ಪಿ 15 ಲಕ್ಷ ಹಾಗೂ ಮತ್ತೊಬ್ಬ ಅಧಿಕಾರಿ 10 ಲಕ್ಷ ರೂಪಾಯಿ ಸ್ವೀಕರಿಸಿರುವ ಕುರಿತು ದೂರಿನಲ್ಲಿ ಸ್ಪಷ್ವವಾಗಿ ಉಲ್ಲೇಖಿಸಿದ್ದಾರೆ. ಪ್ರಭಾವಿಗಳ ವಿರುದ್ಧ ಎಫ್ಐಆರ್ ದಾಖಲಿಸಲು ಕೂಡ ಪೊಲೀಸ್ ಅಧಿಕಾರಿಗಳು ಲಕ್ಷಗಟ್ಟಲೆ ಲಂಚ ಕೇಳಿರುವ ಮಾಹಿತಿ ದೂರಿನಲ್ಲಿದೆ. ಆರೋಪಗಳಿಗೆ ಸಂಬಂಧಿಸಿ ಧ್ವನಿ ಮುದ್ರಣ, ವಾಟ್ಸಪ್ ಸಂದೇಶ ಮುಂತಾದ ಸಾಕ್ಷಿಗಳಿವೆ ಎಂದು ಮಂಜುನಾಥ್ ಹೇಳಿದ್ದಾರೆ. ಅವೆಲ್ಲದರ ಆಧಾರದಲ್ಲಿ ತನಿಖೆ ನಡೆಸಿ, ನೈಸರ್ಗಿಕ ಸಂಪತ್ತನ್ನು ಕೊಳ್ಳೆ ಹೊಡೆದವರಿಗೆ ಹಾಗೂ ಅವರನ್ನು ರಕ್ಷಣೆ ಮಾಡಿದವರಿಗೆ ಕಠಿಣ ಶಿಕ್ಷೆ ನೀಡಬೇಕು ಒತ್ತಾಯಿಸಿದ್ದಾರೆ.
CID SP Ravi D Channannavar and 3 other police officers alleged for taking bribe of 50 lakhs from accused. A complaint has been given to the police chief of Karnataka.
12-03-25 03:51 pm
HK News Desk
Mangalore Chakravarti Sulibele, Prakash Raj:...
11-03-25 06:19 pm
ರಾಜ್ಯದ ಕಿರು ಫೈನಾನ್ಸ್ ಸಂಸ್ಥೆಗಳಲ್ಲಿ 40 ಸಾವಿರ ಕೋ...
11-03-25 03:41 pm
Ranya Rao gold smuggling case: ರನ್ಯಾ ರಾವ್ ಚಿನ...
11-03-25 02:27 pm
Ranya Rao Latest News: ವಿಧಾನಸಭೆಯಲ್ಲಿ ರನ್ಯಾ ಪ್...
10-03-25 09:51 pm
12-03-25 11:41 am
HK News Desk
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
Cricket Win India, Trophy 2025: ರೋಚಕ ಹಣಾಹಣಿಯಲ...
09-03-25 10:49 pm
Dubai, Kerala, Death Sentence: ದುಬೈನಲ್ಲಿ ಇಬ್ಬ...
08-03-25 04:03 pm
12-03-25 11:10 pm
Mangalore Correspondent
Diganth Missing case, Reunite with family: 17...
12-03-25 10:16 pm
Mangalore, SDPI, Diganth: ಸೌಹಾರ್ದ ಕೆಡಿಸಲು ಯತ್...
12-03-25 09:54 pm
ಗರುಡ ಗ್ಯಾಂಗ್ ಸದಸ್ಯ ಇಸಾಕ್ ಮೇಲೆ ಹಿರಿಯಡ್ಕದಲ್ಲಿ ಶ...
12-03-25 09:17 pm
Mangalore Rain, Heat, weather: ಸುಳ್ಯ, ಕಡಬದಲ್ಲ...
12-03-25 06:25 pm
11-03-25 07:34 pm
Bangalore Correspondent
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm
Bangalore Suicide, Bank Staff, Crime; ಹಿರಿಯ ಅ...
09-03-25 03:06 pm
Koppal Rape, Crime, Arrest: ಪೆಟ್ರೋಲ್ ದುಡ್ಡು ಕ...
08-03-25 10:44 pm