ಬ್ರೇಕಿಂಗ್ ನ್ಯೂಸ್
18-01-22 08:12 pm HK Desk news ಕರ್ನಾಟಕ
ಮಂಡ್ಯ, ಜ.18 : ಬಾಬರಿ ಮಸೀದಿ ರೀತಿಯಲ್ಲೇ ಶ್ರೀರಂಗಪಟ್ಟಣದ ಜಾಮೀಯಾ ಮಸೀದಿಯನ್ನು ಆದಷ್ಟು ಬೇಗ ಒಡೆದು ಹಾಕಬೇಕು. ಇಲ್ಲಿ ಹನುಮಾನ್ ದೇವಸ್ಥಾನವನ್ನು ಮಸೀದಿ ಮಾಡಲಾಗಿದೆ. ಇದನ್ನು ಒಡೆದು ಹಾಕಿ, ಮತ್ತೆ ದೇವಸ್ಥಾನ ನಿರ್ಮಾಣ ಮಾಡಬೇಕು ಎಂದು ಕಾಳಿಕಾ ಮಠದ ಋಷಿಕುಮಾರ ಸ್ವಾಮೀಜಿ ಹೇಳಿದ್ದಾರೆ.
ಈ ಬಗ್ಗೆ ಸ್ವಾಮೀಜಿ ಸ್ವತಃ ಅದೇ ಮಸೀದಿ ಎದುರಲ್ಲಿ ನಿಂತು ವಿಡಿಯೋ ಮಾಡಿದ್ದು ತಮ್ಮ ಕಾಳಿಕಾ ಮಠದ ಫೇಸ್ಬುಕ್ ಜಾಲತಾಣದಲ್ಲಿ ಅಪ್ಲೋಡ್ ಮಾಡಿ, ವಿವಾದ ಮೈಗೆ ಎಳೆದುಕೊಂಡಿದ್ದಾರೆ. ಕೆಲವು ತಿಂಗಳ ಹಿಂದೆ ಹಿಂದು ಸಂಘಟನೆಗಳು ಪ್ರತಿಭಟನಾ ಜಾಥಾ ನಡೆದಿದ್ದಾಗ ಮಸೀದಿ ಒಡೆಯುವ ಹುನ್ನಾರೆ ಇದೆ ಎಂದು ಮುಸ್ಲಿಂ ಮುಖಂಡರು ಆರೋಪಿಸಿದ್ದರು. ಇದರ ಬೆನ್ನಲ್ಲೇ ಇದೀಗ ಉರಿಯುವ ಬೆಂಕಿಗೆ ತುಪ್ಪ ಸುರಿವ ಕೆಲಸವನ್ನು ಸ್ವಾಮೀಜಿ ಮಾಡಿದ್ದಾರೆ.



ಜಾಮೀಯಾ ಮಸೀದಿಯಲ್ಲಿ ಅದ್ಬುತವಾದ ಶಿಲೆಗಳಿವೆ. ಇಲ್ಲಿನ ಶಿಲೆಗಳು ದೇವಸ್ಥಾನದ ಕಟ್ಟಡವಾಗಿರುವುದರ ಕುರುಹು. ಶ್ರೀರಂಗಪಟ್ಟಣದ ದೇವಾಸ್ಥಾನವನ್ನು ಮಸೀದಿ ಮಾಡಿಕೊಂಡಿದ್ದಾರೆ. ಹಿಂದುಗಳು ಜಾಗರೂಕರಾಗಿ ಆದಷ್ಟು ಬೇಗ ಇದನ್ಬು ಒಡೆಯಬೇಕು ಎಂದು ಹೇಳಿ ವಿಡಿಯೋ ಮಾಡಿದ್ದರು. ಬಳಿಕ ವಿವಾದಾತ್ಮಕ ಹೇಳಿಕೆ ವೈರಲ್ ಆಗುತ್ತಲೇ ಶ್ರೀರಂಗಪಟ್ಟಣ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



ದೇವನೂರಿನ ಕಾಳಿ ಮಠದಲ್ಲಿ ಬಂಧನ
ಹಿಂದುಗಳೇ ಮಸೀದಿಯನ್ನು ಒಡೆಯಿರಿ ಎಂದು ಕರೆ ನೀಡುವ ಮೂಲಕ ಕಾಳಿ ಸ್ವಾಮೀಜಿ ಪ್ರಚೋದನೆ ನೀಡಿದ್ದಾಗಿ ಮಂಡ್ಯ ಪೊಲೀಸರು ಕೇಸು ದಾಖಲಿಸಿದ್ದು ಚಿಕ್ಕಮಗಳೂರಿನಲ್ಲಿ ಬಂಧಿಸಲಾಗಿದೆ. ಕಡೂರು ತಾಲೂಕಿನ ದೇವನೂರಿನ ಕಾಳಿ ಮಠದಲ್ಲಿದ್ದ ಋಷಿಕುಮಾರ ಸ್ವಾಮೀಜಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಸೀದಿ ಮುಂದೆ ನಿಂತು ಮಾಡಿದ್ದ ವಿಡಿಯೋ ವೈರಲ್ ಆಗಿತ್ತು.
Rishi kumar swamiji arrested by chikmagalur Police for derogatory video on Mosques in Mandya. A video on his Facebook went viral where he was stating that Mosques should be destroyed.
12-08-26 06:57 pm
HK News Staffer
ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಉತ್ಪನ್ನಗಳಿಗೆ ನಿ...
12-08-26 06:06 pm
13 ಸಚಿವರಿಗೆ ಖಾತೆ ಹಂಚಿಕೆ; ಮುನಿಯಪ್ಪ ಸಮಾಜ ಕಲ್ಯಾಣ...
12-08-26 02:58 pm
ಜೈಲಿನಲ್ಲಿ ವಿಐಪಿ ಖೈದಿಗಳ ಬ್ಯಾರಕ್ ಗೆ ಸಿಸಿಬಿ ದಾಳ...
12-08-26 11:37 am
ಹೋಟೆಲ್ ಅಡುಗೆ ಮನೆಯಲ್ಲೂ ಕ್ಯಾಮೆರಾ ಕಡ್ಡಾಯ ; ಹೊಸ ಕ...
10-08-26 07:54 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
12-08-26 11:18 pm
HK News Staffer
Panambur Robbery, Update, Mangalore: ಪಣಂಬೂರು...
12-08-26 07:47 pm
ಉಡುಪಿಯಲ್ಲಿ ಶಿಕ್ಷಕಿಯ ಮನೆಯ ಟೆರೇಸ್ ಬಾಗಿಲು ಮುರಿದ...
11-08-26 05:34 pm
ಫೇಸ್ಬುಕ್ ಜಾಹೀರಾತು ನಂಬಿ ಷೇರು ಮಾರ್ಕೆಟ್ ಹೂಡಿಕೆ...
11-08-26 05:28 pm
ಸುರತ್ಕಲ್ ನಲ್ಲಿ ಹೈಟೆನ್ಷನ್ ತಂತಿಗೆ ಕಬ್ಬಿಣದ ರಾಡ್...
11-08-26 01:04 pm