ಬ್ರೇಕಿಂಗ್ ನ್ಯೂಸ್
18-01-22 08:12 pm HK Desk news ಕರ್ನಾಟಕ
ಮಂಡ್ಯ, ಜ.18 : ಬಾಬರಿ ಮಸೀದಿ ರೀತಿಯಲ್ಲೇ ಶ್ರೀರಂಗಪಟ್ಟಣದ ಜಾಮೀಯಾ ಮಸೀದಿಯನ್ನು ಆದಷ್ಟು ಬೇಗ ಒಡೆದು ಹಾಕಬೇಕು. ಇಲ್ಲಿ ಹನುಮಾನ್ ದೇವಸ್ಥಾನವನ್ನು ಮಸೀದಿ ಮಾಡಲಾಗಿದೆ. ಇದನ್ನು ಒಡೆದು ಹಾಕಿ, ಮತ್ತೆ ದೇವಸ್ಥಾನ ನಿರ್ಮಾಣ ಮಾಡಬೇಕು ಎಂದು ಕಾಳಿಕಾ ಮಠದ ಋಷಿಕುಮಾರ ಸ್ವಾಮೀಜಿ ಹೇಳಿದ್ದಾರೆ.
ಈ ಬಗ್ಗೆ ಸ್ವಾಮೀಜಿ ಸ್ವತಃ ಅದೇ ಮಸೀದಿ ಎದುರಲ್ಲಿ ನಿಂತು ವಿಡಿಯೋ ಮಾಡಿದ್ದು ತಮ್ಮ ಕಾಳಿಕಾ ಮಠದ ಫೇಸ್ಬುಕ್ ಜಾಲತಾಣದಲ್ಲಿ ಅಪ್ಲೋಡ್ ಮಾಡಿ, ವಿವಾದ ಮೈಗೆ ಎಳೆದುಕೊಂಡಿದ್ದಾರೆ. ಕೆಲವು ತಿಂಗಳ ಹಿಂದೆ ಹಿಂದು ಸಂಘಟನೆಗಳು ಪ್ರತಿಭಟನಾ ಜಾಥಾ ನಡೆದಿದ್ದಾಗ ಮಸೀದಿ ಒಡೆಯುವ ಹುನ್ನಾರೆ ಇದೆ ಎಂದು ಮುಸ್ಲಿಂ ಮುಖಂಡರು ಆರೋಪಿಸಿದ್ದರು. ಇದರ ಬೆನ್ನಲ್ಲೇ ಇದೀಗ ಉರಿಯುವ ಬೆಂಕಿಗೆ ತುಪ್ಪ ಸುರಿವ ಕೆಲಸವನ್ನು ಸ್ವಾಮೀಜಿ ಮಾಡಿದ್ದಾರೆ.



ಜಾಮೀಯಾ ಮಸೀದಿಯಲ್ಲಿ ಅದ್ಬುತವಾದ ಶಿಲೆಗಳಿವೆ. ಇಲ್ಲಿನ ಶಿಲೆಗಳು ದೇವಸ್ಥಾನದ ಕಟ್ಟಡವಾಗಿರುವುದರ ಕುರುಹು. ಶ್ರೀರಂಗಪಟ್ಟಣದ ದೇವಾಸ್ಥಾನವನ್ನು ಮಸೀದಿ ಮಾಡಿಕೊಂಡಿದ್ದಾರೆ. ಹಿಂದುಗಳು ಜಾಗರೂಕರಾಗಿ ಆದಷ್ಟು ಬೇಗ ಇದನ್ಬು ಒಡೆಯಬೇಕು ಎಂದು ಹೇಳಿ ವಿಡಿಯೋ ಮಾಡಿದ್ದರು. ಬಳಿಕ ವಿವಾದಾತ್ಮಕ ಹೇಳಿಕೆ ವೈರಲ್ ಆಗುತ್ತಲೇ ಶ್ರೀರಂಗಪಟ್ಟಣ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



ದೇವನೂರಿನ ಕಾಳಿ ಮಠದಲ್ಲಿ ಬಂಧನ
ಹಿಂದುಗಳೇ ಮಸೀದಿಯನ್ನು ಒಡೆಯಿರಿ ಎಂದು ಕರೆ ನೀಡುವ ಮೂಲಕ ಕಾಳಿ ಸ್ವಾಮೀಜಿ ಪ್ರಚೋದನೆ ನೀಡಿದ್ದಾಗಿ ಮಂಡ್ಯ ಪೊಲೀಸರು ಕೇಸು ದಾಖಲಿಸಿದ್ದು ಚಿಕ್ಕಮಗಳೂರಿನಲ್ಲಿ ಬಂಧಿಸಲಾಗಿದೆ. ಕಡೂರು ತಾಲೂಕಿನ ದೇವನೂರಿನ ಕಾಳಿ ಮಠದಲ್ಲಿದ್ದ ಋಷಿಕುಮಾರ ಸ್ವಾಮೀಜಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಸೀದಿ ಮುಂದೆ ನಿಂತು ಮಾಡಿದ್ದ ವಿಡಿಯೋ ವೈರಲ್ ಆಗಿತ್ತು.
Rishi kumar swamiji arrested by chikmagalur Police for derogatory video on Mosques in Mandya. A video on his Facebook went viral where he was stating that Mosques should be destroyed.
13-01-26 03:04 pm
Bangalore Correspondent
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm