ಬ್ರೇಕಿಂಗ್ ನ್ಯೂಸ್
18-01-22 09:38 pm HK Desk news ಕರ್ನಾಟಕ
ಬೆಂಗಳೂರು, ಜ.18 : ಬಿಜೆಪಿ ಸರ್ಕಾರ ರಾಜ್ಯದಲ್ಲಿರುವ ಕೇವಲ 24,821 ಮಂದಿ ಸಂಸ್ಕೃತ ಭಾಷಿಗರ ಮೇಲೆ ತೋರಿಸುತ್ತಿರುವ ಅಗಾಧ ಪ್ರೀತಿಯನ್ನು ನಮ್ಮ ರಾಜ್ಯದಲ್ಲಿ ಮೂಲೆ ಗುಂಪಾಗಿರುವ ತುಳು ಮತ್ತು ಕೊಡವ ಭಾಷೆಗಳ ಮೇಲೂ ತೋರಿಸಲಿ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ವಿಧಾನಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಆಗ್ರಹಿಸಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿರುವ ಅವರು, 2011ರ ಜನಗಣತಿಯ ಪ್ರಕಾರ ರಾಜ್ಯದಲ್ಲಿರುವ ಒಟ್ಟು ತುಳುವರ ಸಂಖ್ಯೆ 18,46,427. ಹಾಗೆಯೇ ಕೊಡವ ಭಾಷೆಯನ್ನಾಡುವವರ ಸಂಖ್ಯೆ 1,13,857. ಆದರೆ, ಸಂಸ್ಕೃತ ಭಾಷೆಯನ್ನು ತಮ್ಮ ಮಾತೃಭಾಷೆಯೆಂದು ದಾಖಲಿಸಿದವರ ಸಂಖ್ಯೆ 24,821 ಮಾತ್ರ. ಇಷ್ಟು ಕಡಿಮೆ ಜನಸಂಖ್ಯೆಯ ಮೇಲೆ ಬಿಜೆಪಿ ಸರ್ಕಾರ ತನ್ನ ಅಗಾಧ ಪ್ರೀತಿಯನ್ನು ತೋರಿಸುತ್ತಾ ಬಂದಿದೆ. ಈಗಾಗಲೇ ರಾಜ್ಯದಲ್ಲಿ ಸಂಸ್ಕೃತ ವಿಶ್ವವಿದ್ಯಾಲಯವಿದೆ. ಅದಕ್ಕೆ ಬೇಕಾದಂತಹ ಎಲ್ಲಾ ಸೌಕರ್ಯಗಳನ್ನು ನೀಡಲಾಗಿದೆ. ಆದರೆ, ನಮ್ಮ ರಾಜ್ಯದಲ್ಲಿ ಚಾಲ್ತಿಯಲ್ಲಿರುವ ತುಳು ಮತ್ತು ಕೊಡವ ಭಾಷೆಗಳ ಅಭಿವೃದ್ದಿಯತ್ತ ಮಾತ್ರ ದಿವ್ಯ ನಿರ್ಲಕ್ಷವನ್ನು ತೋರಿಸುತ್ತಿದೆ ಎಂದು ಹೇಳಿದ್ದಾರೆ.
ಭಾಷಾವಾರು ಪ್ರಾಂತ್ಯಗಳ ರಚನೆಯಾದಾಗ ಪ್ರಭಾವಿ ಪ್ರಾದೇಶಿಕ ಭಾಷೆಗಳಿಗೆ ಮಹತ್ವ ಬಂದವು. ಆದರೆ ಈ ಹಂತದಲ್ಲಿ ಪ್ರಾದೇಶಿಕ ಭಾಷೆಗಳ ಆಶ್ರಯದಲ್ಲಿರುವ, ಆದರೆ ಯಾವುದೇ ರಾಜ್ಯದ ಅಧಿಕೃತ ಭಾಷೆಗಳಲ್ಲದ ಸಣ್ಣ ಭಾಷೆಗಳು ತೀವ್ರ ಉಪೇಕ್ಷೆಗೆ ಒಳಗಾಗಿವೆ. ದೇಶದಲ್ಲಿ ಹಲವಾರು ರಾಜ್ಯಗಳು ತಮ್ಮ ಒಂದಕ್ಕೂ ಹೆಚ್ಚು ಭಾಷೆಗಳನ್ನು ಅಧಿಕೃತವಾಗಿ ಘೋಷಿಸಿಕೊಂಡಿವೆ. ಆದರೆ ಕರ್ನಾಟಕ ರಾಜ್ಯ ಕನ್ನಡವನ್ನು ಹೊರತುಪಡಿಸಿ ಬೇರೆ ಭಾಷೆಗಳಿಗೆ ಅಧಿಕೃತ ಸ್ಥಾನ ನೀಡಿಲ್ಲ. ಬಹುಜನರು ದಿನನಿತ್ಯ ಉಪಯೋಗಿಸುವ ಕೊಡವ, ತುಳು ಭಾಷೆಗಳನ್ನು ಕರ್ನಾಟಕದ ಅಧಿಕೃತ ಭಾಷೆಗಳೆಂದು ಮಾನ್ಯ ಮಾಡಬಹುದಾಗಿದೆ. ಮಾನ್ಯ ಮಾಡದೇ ಇರುವುದರಿಂದ ಕೇಂದ್ರ ಸರ್ಕಾರ ಸುಲಭವಾಗಿ ನುಣುಚಿಕೊಳ್ಳುತ್ತಿದೆ. ಸಾವಿರಾರು ವರ್ಷಗಳ ಇತಿಹಾಸವನ್ನು ಹೊಂದಿರುವ ಭಾಷೆಗಳಾದ ತುಳು ಮತ್ತು ಕೊಡವ ಭಾಷೆಗಳನ್ನು ರಾಜ್ಯ ಸರ್ಕಾರ ಮೊದಲು ತನ್ನ ಅಧಿಕೃತ ಭಾಷೆಗಳೆಂದು ಘೋಷಿಸಬೇಕು ಎಂದು ಆಗ್ರಹಿಸಿದ್ದಾರೆ.
ಸಂಸ್ಕೃತಕ್ಕೆ ನೀಡುತ್ತಿರುವಷ್ಟೇ ಮಹತ್ವವನ್ನು ನಮ್ಮ ಕನ್ನಡ, ತುಳು ಹಾಗೂ ಕೊಡವ ಭಾಷೆಗೂ ನೀಡುವ ಮೂಲಕ ಒಂದು ಕಣ್ಣಿಗೆ ಸುಣ್ಣ, ಒಂದು ಕಣ್ಣಿಗೆ ಬೆಣ್ಣೆ ಎನ್ನುವ ನೀತಿಯನ್ನು ಬಿಡಬೇಕು. ಹಾಗೆಯೇ ನಮ್ಮ ಭಾಷೆಗಳ ಅಭಿವೃದ್ದಿಗೆ ಪ್ರೋತ್ಸಾಹ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
MLC B K Hariprasad slams government says show some love for Tulu other than Sanskrit.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm