ಬ್ರೇಕಿಂಗ್ ನ್ಯೂಸ್
16-09-20 11:02 pm Headline Karnataka News Network ಕರ್ನಾಟಕ
ಕಲಬುರಗಿ, ಸೆಪ್ಟಂಬರ್ 16: ಉತ್ತರ ಕರ್ನಾಟಕದಲ್ಲಿ ಮಳೆಯ ಅಬ್ಬರ ಹೆಚ್ಚಾಗಿದ್ದು ನದಿ ನಾಲೆಗಳು ತುಂಬಿ ಹರಿಯುತ್ತಿವೆ. ಈ ನಡುವೆ ಮಳೆ ಹಾನಿ ಪರಿಶೀಲನೆಗೆ ತೆರಳಿದ್ದ ತಹಶೀಲ್ದಾರ್ ಒಬ್ಬರು ಅಪಾಯದಲ್ಲಿ ಸಿಲುಕಿರುವ ಘಟನೆ ಬೆಳಕಿಗೆ ಬಂದಿದೆ. ಸೇತುವೆ ಮೇಲೆ ಹರಿಯುತ್ತಿದ್ದ ನದಿ ನೀರಿನಲ್ಲಿ ಕಾರು ಚಲಾಯಿಸಲೆತ್ನಿಸಿದ ತಹಶೀಲ್ದಾರ್ ಪಂಡಿತ್ ಬಿರಾದಾರ್ ಕಾರು ಕೊಚ್ಚಿ ಹೋಗಿದ್ದು ಆಪತ್ತಿಗೆ ಸಿಲುಕಿದ ತಹಸೀಲ್ದಾರ್ ಮರ ಹತ್ತಿ ಕುಳಿತಿದ್ದಾರೆ.
ಕಲಬುರಗಿ ಜಿಲ್ಲೆ ಚಿಂಚೋಳಿ ತಾಲ್ಲೂಕಿನ ಗಣಾಪುರ ಗ್ರಾಮದ ಬಳಿ ಘಟನೆ ನಡೆದಿದೆ. ಕಾರಿನಲ್ಲಿ ಹಿಂತಿರುಗುತ್ತಿದ್ದಾಗ ಸೇತುವೆ ದಾಟುತ್ತಿದ್ದ ವೇಳೆ ನೀರು ಹೆಚ್ಚಿದ್ದು ಅಪಾಯ ಎದುರಾಗಿತ್ತು. ಕಾರು ನೀರಿನಲ್ಲಿ ಮುಂದೆ ಚಲಿಸಲ್ಲ ಎಂದು ತಿಳಿದ ತಹಸೀಲ್ದಾರ್ ಮತ್ತು ಚಾಲಕ ಕಾರಿನಿಂದ ಇಳಿದು ನಡೆದುಕೊಂಡು ಹೋಗಿದ್ದಾರೆ. ಆದರೆ ಪ್ರವಾಹದ ನೀರಿನಲ್ಲಿ ಹೋಗಲು ಸಾಧ್ಯವಾಗದೆ ರಕ್ಷಣೆಗಾಗಿ ಅಲ್ಲಿಯೇ ಇದ್ದ ಮರ ಹತ್ತಿದ್ದಾರೆ. ಅಲ್ಲದೆ, ಮರದಿಂದಲೇ ರಕ್ಷಣೆಗಾಗಿ ಗೋಗರೆದಿದ್ದಾರೆ. ಪೋನ್ ಮುಖಾಂತರ ಇತರ ಅಧಿಕಾರಿಗಳನ್ನು ಸಂಪರ್ಕಿಸಿದ ಅವರು ‘ನಾನು ಪ್ರವಾಹದಲ್ಲಿ ಸಿಲುಕಿದ್ದೇನೆ. ಮರದ ಮೇಲಿದ್ದೇನೆ’ ಎಂದು ಹೇಳಿದ್ದಾರೆ.
ಅಪಾಯದಲ್ಲಿ ಸಿಲುಕಿರುವ ಅಧಿಕಾರಿಯ ರಕ್ಷಣೆಗೆ ಕೂಡಲೇ ಪೊಲೀಸರ ತಂಡ ಧಾವಿಸಿದೆ. ತಹಶೀಲ್ದಾರ್ ಅರುಣಕುಮಾರ ಕುಲಕರ್ಣಿ ಹಾಗೂ ಡಿವೈಎಸ್ಪಿ ವೀರಭದ್ರಯ್ಯ ಮತ್ತು ಸರ್ಕಲ್ ಇನಸ್ಪೆಕ್ಟರ್ ಮಹಾಂತೇಶ ಪಾಟೀಲ, ಮಿರಿಯಾಣ ಠಾಣೆಯ ಸಬ್ ಇನಸ್ಪೆಕ್ಟರ್ ಸಂತೋಷ ರಾಠೋಡ್ ಹಾಗೂ ಅಗ್ನಿಶಾಮಕ ದಳದ ಅಧಿಕಾರಿಗಳು ರಕ್ಷಣೆಗೆ ಧಾವಿಸಿದ್ದಾರೆ. ಕೊನೆಗೆ ಪ್ರವಾಹದ ನೀರಿನ ಮಧ್ಯೆ ಕಾರ್ಯಾಚರಣೆ ಯಶಸ್ವಿಯಾಗಿದ್ದು ಸಿಕ್ಕಿಬಿದ್ದ ತಹಸೀಲ್ದಾರ್ ಅವರನ್ನು ರಕ್ಷಣಾ ಸುರಕ್ಷಿತವಾಗಿ ಪಾರು ಮಾಡಿದೆ. ಮೂರು ಗಂಟೆಗಳ ಕಾರ್ಯಾಚರಣೆಯಲ್ಲಿ ಅಧಿಕಾರಿಯನ್ನು ರಕ್ಷಿಸಿ ಕರೆತಂದಿದ್ದು , ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.
10-04-25 04:40 pm
Bangalore Correspondent
Lokayukta Shivamogga arrest: ಶಿವಮೊಗ್ಗ ಸ್ಮಾರ್ಟ...
09-04-25 09:31 pm
Vijayapura accident, Death: ಯಮನಂತೆ ಬಂದ ಲಾರಿ ;...
09-04-25 09:21 pm
ಸಿಎಂ ಸಿದ್ದರಾಮಯ್ಯ ವಿರುದ್ಧ ಮತ್ತೊಂದು ಗಂಭೀರ ಆರೋಪ...
09-04-25 06:21 pm
Kukke Subrahmanya, New Train Service, Ministe...
09-04-25 04:05 pm
10-04-25 09:10 pm
HK News Desk
ಪಂಬನ್ ಸೇತುವೆ ಬೆನ್ನಲ್ಲೇ ಲಂಕಾ- ಭಾರತ ರೈಲ್ವೇ ಯಾನ...
10-04-25 01:25 pm
ಪಿಯುಸಿ ಹುಡುಗನ ವರಿಸಿದ ಮೂರು ಮಕ್ಕಳ ತಾಯಿ ; ಇಸ್ಲಾಂ...
10-04-25 11:30 am
Tahawwur Rana, India: ಮುಂಬೈ ದಾಳಿಯ ಮಾಸ್ಟರ್ ಮೈಂ...
09-04-25 04:07 pm
ಡೊನಾಲ್ಡ್ ಟ್ರಂಪ್ ಸುಂಕ ಬರೆಗೆ ಜಗತ್ತು ತಲ್ಲಣ ; ಕೋವ...
07-04-25 10:53 pm
09-04-25 10:57 pm
Mangalore Correspondent
Mangalore BJP Janakrosha Rally, Protest: ಕರ್ನ...
09-04-25 10:23 pm
Kpt Accident, Mangalore: ಕೆಪಿಟಿ ಬಳಿ ಭೀಕರ ಅಪಘಾ...
08-04-25 08:58 pm
PUC Results 2025, Mangalore Udupi topper: ಪಿಯ...
08-04-25 03:00 pm
Praveen Nettaru, Shafi Bellare, SDPI, Mangalo...
07-04-25 07:01 pm
10-04-25 08:41 pm
HK News Desk
Puttur crime, Sword, Mangalore: ಪುತ್ತೂರಿನಲ್ಲಿ...
10-04-25 02:57 pm
ಸಾಮೂಹಿಕ ವಿವಾಹ ಹೆಸರಲ್ಲಿ ಬಡ ಯುವತಿಯರ ಮಾರಾಟ ಜಾಲ ;...
09-04-25 11:17 pm
Kalaburagi ATM Robbery: ಬೀದರ್ ದರೋಡೆ ಬೆನ್ನಲ್...
09-04-25 08:15 pm
Mangalore Gold smuggling, Crime, CCB: ಇಬ್ಬರು...
08-04-25 11:04 pm