ಬ್ರೇಕಿಂಗ್ ನ್ಯೂಸ್
16-09-20 11:02 pm Headline Karnataka News Network ಕರ್ನಾಟಕ
ಕಲಬುರಗಿ, ಸೆಪ್ಟಂಬರ್ 16: ಉತ್ತರ ಕರ್ನಾಟಕದಲ್ಲಿ ಮಳೆಯ ಅಬ್ಬರ ಹೆಚ್ಚಾಗಿದ್ದು ನದಿ ನಾಲೆಗಳು ತುಂಬಿ ಹರಿಯುತ್ತಿವೆ. ಈ ನಡುವೆ ಮಳೆ ಹಾನಿ ಪರಿಶೀಲನೆಗೆ ತೆರಳಿದ್ದ ತಹಶೀಲ್ದಾರ್ ಒಬ್ಬರು ಅಪಾಯದಲ್ಲಿ ಸಿಲುಕಿರುವ ಘಟನೆ ಬೆಳಕಿಗೆ ಬಂದಿದೆ. ಸೇತುವೆ ಮೇಲೆ ಹರಿಯುತ್ತಿದ್ದ ನದಿ ನೀರಿನಲ್ಲಿ ಕಾರು ಚಲಾಯಿಸಲೆತ್ನಿಸಿದ ತಹಶೀಲ್ದಾರ್ ಪಂಡಿತ್ ಬಿರಾದಾರ್ ಕಾರು ಕೊಚ್ಚಿ ಹೋಗಿದ್ದು ಆಪತ್ತಿಗೆ ಸಿಲುಕಿದ ತಹಸೀಲ್ದಾರ್ ಮರ ಹತ್ತಿ ಕುಳಿತಿದ್ದಾರೆ.
ಕಲಬುರಗಿ ಜಿಲ್ಲೆ ಚಿಂಚೋಳಿ ತಾಲ್ಲೂಕಿನ ಗಣಾಪುರ ಗ್ರಾಮದ ಬಳಿ ಘಟನೆ ನಡೆದಿದೆ. ಕಾರಿನಲ್ಲಿ ಹಿಂತಿರುಗುತ್ತಿದ್ದಾಗ ಸೇತುವೆ ದಾಟುತ್ತಿದ್ದ ವೇಳೆ ನೀರು ಹೆಚ್ಚಿದ್ದು ಅಪಾಯ ಎದುರಾಗಿತ್ತು. ಕಾರು ನೀರಿನಲ್ಲಿ ಮುಂದೆ ಚಲಿಸಲ್ಲ ಎಂದು ತಿಳಿದ ತಹಸೀಲ್ದಾರ್ ಮತ್ತು ಚಾಲಕ ಕಾರಿನಿಂದ ಇಳಿದು ನಡೆದುಕೊಂಡು ಹೋಗಿದ್ದಾರೆ. ಆದರೆ ಪ್ರವಾಹದ ನೀರಿನಲ್ಲಿ ಹೋಗಲು ಸಾಧ್ಯವಾಗದೆ ರಕ್ಷಣೆಗಾಗಿ ಅಲ್ಲಿಯೇ ಇದ್ದ ಮರ ಹತ್ತಿದ್ದಾರೆ. ಅಲ್ಲದೆ, ಮರದಿಂದಲೇ ರಕ್ಷಣೆಗಾಗಿ ಗೋಗರೆದಿದ್ದಾರೆ. ಪೋನ್ ಮುಖಾಂತರ ಇತರ ಅಧಿಕಾರಿಗಳನ್ನು ಸಂಪರ್ಕಿಸಿದ ಅವರು ‘ನಾನು ಪ್ರವಾಹದಲ್ಲಿ ಸಿಲುಕಿದ್ದೇನೆ. ಮರದ ಮೇಲಿದ್ದೇನೆ’ ಎಂದು ಹೇಳಿದ್ದಾರೆ.

ಅಪಾಯದಲ್ಲಿ ಸಿಲುಕಿರುವ ಅಧಿಕಾರಿಯ ರಕ್ಷಣೆಗೆ ಕೂಡಲೇ ಪೊಲೀಸರ ತಂಡ ಧಾವಿಸಿದೆ. ತಹಶೀಲ್ದಾರ್ ಅರುಣಕುಮಾರ ಕುಲಕರ್ಣಿ ಹಾಗೂ ಡಿವೈಎಸ್ಪಿ ವೀರಭದ್ರಯ್ಯ ಮತ್ತು ಸರ್ಕಲ್ ಇನಸ್ಪೆಕ್ಟರ್ ಮಹಾಂತೇಶ ಪಾಟೀಲ, ಮಿರಿಯಾಣ ಠಾಣೆಯ ಸಬ್ ಇನಸ್ಪೆಕ್ಟರ್ ಸಂತೋಷ ರಾಠೋಡ್ ಹಾಗೂ ಅಗ್ನಿಶಾಮಕ ದಳದ ಅಧಿಕಾರಿಗಳು ರಕ್ಷಣೆಗೆ ಧಾವಿಸಿದ್ದಾರೆ. ಕೊನೆಗೆ ಪ್ರವಾಹದ ನೀರಿನ ಮಧ್ಯೆ ಕಾರ್ಯಾಚರಣೆ ಯಶಸ್ವಿಯಾಗಿದ್ದು ಸಿಕ್ಕಿಬಿದ್ದ ತಹಸೀಲ್ದಾರ್ ಅವರನ್ನು ರಕ್ಷಣಾ ಸುರಕ್ಷಿತವಾಗಿ ಪಾರು ಮಾಡಿದೆ. ಮೂರು ಗಂಟೆಗಳ ಕಾರ್ಯಾಚರಣೆಯಲ್ಲಿ ಅಧಿಕಾರಿಯನ್ನು ರಕ್ಷಿಸಿ ಕರೆತಂದಿದ್ದು , ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm