ಬ್ರೇಕಿಂಗ್ ನ್ಯೂಸ್
19-01-22 10:05 pm HK Desk news ಕರ್ನಾಟಕ
ಬೆಂಗಳೂರು, ಜ.19 : ಬೆಂಗಳೂರು ಏರ್ಪೋರ್ಟ್ ನಲ್ಲಿ ಮೇಲಕ್ಕೆ ಹಾರಿದ ಎರಡು ಇಂಡಿಗೋ ವಿಮಾನಗಳು ಆಗಸದಲ್ಲಿ ಪರಸ್ಪರ ಡಿಕ್ಕಿಯಾಗುವುದರಿಂದ ಸ್ವಲ್ಪದರಲ್ಲಿ ತಪ್ಪಿದ ಘಟನೆ ಜನವರಿ 9ರಂದು ಬೆಳಗ್ಗೆ ನಡೆದಿದ್ದು, ತಡವಾಗಿ ಪ್ರಕರಣ ಬೆಳಕಿಗೆ ಬಂದಿದೆ. ಈ ಬಗ್ಗೆ ವಿಮಾನ ಯಾನ ಸಚಿವಾಲಯ ತನಿಖೆಗೆ ಆದೇಶ ಮಾಡಿದೆ.
ಈ ಬಗ್ಗೆ ಏರ್ಪೋರ್ಟ್ ಇಂಡಿಯಾ ಅಥಾರಿಟಿ ಸಂಸ್ಥೆಯಾಗಲೀ, ಬೆಂಗಳೂರು ಏರ್ಪೋರ್ಟ್ ಸಂಸ್ಥೆಯಾಗಲೀ ವಿಷಯ ಬಹಿರಂಗ ಪಡಿಸಿಲ್ಲ. ಆದರೆ, ಡಿಜಿಸಿಎ ಮುಖ್ಯಸ್ಥ ಅರುಣ್ ಕುಮಾರ್, ಈ ಬಗ್ಗೆ ತನಿಖೆ ನಡೆಸಲು ಆದೇಶ ಮಾಡಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಪಿಟಿಐ ಸುದ್ದಿಸಂಸ್ಥೆಗೆ ಮಾಹಿತಿ ನೀಡಿದ್ದಾರೆ.
ಬೆಂಗಳೂರಿನಿಂದ ಕೊಲ್ಕತ್ತಾ ಹೊರಟಿದ್ದ ಇಂಡಿಗೋ ವಿಮಾನ (6E455) ಮತ್ತು ಬೆಂಗಳೂರಿನಿಂದ ಭುವನೇಶ್ವರ ಹೊರಟಿದ್ದ (6E246) ಇಂಡಿಗೋ ವಿಮಾನ 5 ನಿಮಿಷದ ಅಂತರದಲ್ಲಿ ಟೇಕ್ ಆಫ್ ಆಗಿದ್ದು, ಆಗಸದಲ್ಲಿ ವರ್ಟಿಕಲ್ ಮತ್ತು ಹಾರಿಜಂಟಲ್ ಆಗಿ ಸಾಗುವ ದಿಕ್ಕಿನಲ್ಲಿ ನಿಯಮ ಉಲ್ಲಂಘಿಸಿದೆ. ರಾಡಾರ್ ಸೂಚನೆಯನ್ನು ಉಲ್ಲಂಘಿಸಿ, ಒಂದಕ್ಕೊಂದು ಏಕಪ್ರಕಾರದಲ್ಲಿ ಸಾಗಿದ್ದವು. ಇದರಿಂದ ಕೆಲವೇ ಕ್ಷಣಗಳ ಅಂತರದಲ್ಲಿ ಆಗಸದಲ್ಲಿ ವಿಮಾನಗಳ ಡಿಕ್ಕಿಯಾಗುವ ಸಾಧ್ಯತೆ ಕಂಡುಬಂದಿದ್ದು ಸ್ವಲ್ಪದರಲ್ಲಿ ಅವಘಡ ತಪ್ಪಿತ್ತು ಎಂದು ಡಿಜಿಸಿಎ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಈ ಬಗ್ಗೆ ಏರ್ಪೋರ್ಟ್ ಅಥಾರಿಟಿ ಆಫ್ ಇಂಡಿಯಾ ಮತ್ತು ಇಂಡಿಗೋ ಸಂಸ್ಥೆಯ ಪ್ರತಿನಿಧಿಗಳು ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಇತ್ತೀಚೆಗೆ ದುಬೈ ವಿಮಾನ ನಿಲ್ದಾಣದಲ್ಲಿ ಟೇಕ್ ಆಫ್ ಆಗಿದ್ದ ಭಾರತ ಮೂಲದ ಎರಡು ವಿಮಾನಗಳು ಇದೇ ರೀತಿ ಅಪಘಾತ ಆಗುವುದರಿಂದ ಸ್ವಲ್ಪದರಲ್ಲಿ ತಪ್ಪಿದ ಘಟನೆ ನಡೆದಿತ್ತು.
Two IndiGo planes taking off from the Kempegowda International Airport came close to colliding with each other mid-air while taking off. The flights involved in the incident were the IndiGo flights 6E 455 departing for Kolkata and 6E 246 for Bhubaneswar.
13-01-26 03:04 pm
Bangalore Correspondent
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm