ಬ್ರೇಕಿಂಗ್ ನ್ಯೂಸ್
19-01-22 10:05 pm HK Desk news ಕರ್ನಾಟಕ
ಬೆಂಗಳೂರು, ಜ.19 : ಬೆಂಗಳೂರು ಏರ್ಪೋರ್ಟ್ ನಲ್ಲಿ ಮೇಲಕ್ಕೆ ಹಾರಿದ ಎರಡು ಇಂಡಿಗೋ ವಿಮಾನಗಳು ಆಗಸದಲ್ಲಿ ಪರಸ್ಪರ ಡಿಕ್ಕಿಯಾಗುವುದರಿಂದ ಸ್ವಲ್ಪದರಲ್ಲಿ ತಪ್ಪಿದ ಘಟನೆ ಜನವರಿ 9ರಂದು ಬೆಳಗ್ಗೆ ನಡೆದಿದ್ದು, ತಡವಾಗಿ ಪ್ರಕರಣ ಬೆಳಕಿಗೆ ಬಂದಿದೆ. ಈ ಬಗ್ಗೆ ವಿಮಾನ ಯಾನ ಸಚಿವಾಲಯ ತನಿಖೆಗೆ ಆದೇಶ ಮಾಡಿದೆ.
ಈ ಬಗ್ಗೆ ಏರ್ಪೋರ್ಟ್ ಇಂಡಿಯಾ ಅಥಾರಿಟಿ ಸಂಸ್ಥೆಯಾಗಲೀ, ಬೆಂಗಳೂರು ಏರ್ಪೋರ್ಟ್ ಸಂಸ್ಥೆಯಾಗಲೀ ವಿಷಯ ಬಹಿರಂಗ ಪಡಿಸಿಲ್ಲ. ಆದರೆ, ಡಿಜಿಸಿಎ ಮುಖ್ಯಸ್ಥ ಅರುಣ್ ಕುಮಾರ್, ಈ ಬಗ್ಗೆ ತನಿಖೆ ನಡೆಸಲು ಆದೇಶ ಮಾಡಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಪಿಟಿಐ ಸುದ್ದಿಸಂಸ್ಥೆಗೆ ಮಾಹಿತಿ ನೀಡಿದ್ದಾರೆ.
ಬೆಂಗಳೂರಿನಿಂದ ಕೊಲ್ಕತ್ತಾ ಹೊರಟಿದ್ದ ಇಂಡಿಗೋ ವಿಮಾನ (6E455) ಮತ್ತು ಬೆಂಗಳೂರಿನಿಂದ ಭುವನೇಶ್ವರ ಹೊರಟಿದ್ದ (6E246) ಇಂಡಿಗೋ ವಿಮಾನ 5 ನಿಮಿಷದ ಅಂತರದಲ್ಲಿ ಟೇಕ್ ಆಫ್ ಆಗಿದ್ದು, ಆಗಸದಲ್ಲಿ ವರ್ಟಿಕಲ್ ಮತ್ತು ಹಾರಿಜಂಟಲ್ ಆಗಿ ಸಾಗುವ ದಿಕ್ಕಿನಲ್ಲಿ ನಿಯಮ ಉಲ್ಲಂಘಿಸಿದೆ. ರಾಡಾರ್ ಸೂಚನೆಯನ್ನು ಉಲ್ಲಂಘಿಸಿ, ಒಂದಕ್ಕೊಂದು ಏಕಪ್ರಕಾರದಲ್ಲಿ ಸಾಗಿದ್ದವು. ಇದರಿಂದ ಕೆಲವೇ ಕ್ಷಣಗಳ ಅಂತರದಲ್ಲಿ ಆಗಸದಲ್ಲಿ ವಿಮಾನಗಳ ಡಿಕ್ಕಿಯಾಗುವ ಸಾಧ್ಯತೆ ಕಂಡುಬಂದಿದ್ದು ಸ್ವಲ್ಪದರಲ್ಲಿ ಅವಘಡ ತಪ್ಪಿತ್ತು ಎಂದು ಡಿಜಿಸಿಎ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಈ ಬಗ್ಗೆ ಏರ್ಪೋರ್ಟ್ ಅಥಾರಿಟಿ ಆಫ್ ಇಂಡಿಯಾ ಮತ್ತು ಇಂಡಿಗೋ ಸಂಸ್ಥೆಯ ಪ್ರತಿನಿಧಿಗಳು ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಇತ್ತೀಚೆಗೆ ದುಬೈ ವಿಮಾನ ನಿಲ್ದಾಣದಲ್ಲಿ ಟೇಕ್ ಆಫ್ ಆಗಿದ್ದ ಭಾರತ ಮೂಲದ ಎರಡು ವಿಮಾನಗಳು ಇದೇ ರೀತಿ ಅಪಘಾತ ಆಗುವುದರಿಂದ ಸ್ವಲ್ಪದರಲ್ಲಿ ತಪ್ಪಿದ ಘಟನೆ ನಡೆದಿತ್ತು.
Two IndiGo planes taking off from the Kempegowda International Airport came close to colliding with each other mid-air while taking off. The flights involved in the incident were the IndiGo flights 6E 455 departing for Kolkata and 6E 246 for Bhubaneswar.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm