ಬ್ರೇಕಿಂಗ್ ನ್ಯೂಸ್
20-01-22 10:51 pm HK Desk news ಕರ್ನಾಟಕ
ಮಂಡ್ಯ, ಜ.20 : ಪ್ರಚೋದನೆಕಾರಿ ಹೇಳಿಕೆ ನೀಡಿ ಜೈಲಿಗೆ ಹೋಗಿ ಹೊರಬಂದ ಕಾಳಿಕಾ ಮಠದ ಋಷಿಕುಮಾರ ಸ್ವಾಮಿ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.
ಜೈಲಿನಿಂದ ಹೊರಬಂದ ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಸ್ವಾಮಿ, ಅಲ್ಲಿನ ಕಂಬಗಳನ್ನ ನೋಡಿದ್ರೆ ಪ್ರತಿಯೊಬ್ಬ ಹಿಂದು ಮಗುವೂ ಪ್ರಚೋದನೆಗೆ ಒಳಪಡುತ್ತದೆ. ಕಂಬದ ಬಿಂಬಗಳು, ನಾಗನ ಕಟ್ಟೆಗಳನ್ನ ನೋಡಿದ್ರೆ ಯಾರು ಕೂಡ ಪ್ರಚೋದನೆಗೆ ಒಳಗಾಗುತ್ತಾರೆ. ನಾನು ಒಬ್ಬ ಯತಿ, ಇನ್ನೆಷ್ಟು ಪ್ರಚೋದನೆಗೆ ಒಳಪಡಲಿಕ್ಕಿಲ್ಲ ಎಂದು ಪ್ರಶ್ನೆ ಮಾಡಿದ್ದಾರೆ.

ನನಗೆ ಕಾನೂನಿನ ಮೇಲೆ ಅಪಾರ ನಂಬಿಕೆ ಇದೆ. ಬಾಬರಿ ಮಸೀದಿಯನ್ನು ರಾಮನ ದೇವಸ್ಥಾನ ಆಗೋದಕ್ಕೆ ನನ್ನ ದೇಶದ ಕಾನೂನು ಒಪ್ಪಿದೆ. ಈ ವಿಚಾರದಲ್ಲೂ ಕೋರ್ಟ್ ನಲ್ಲಿ ನನಗೆ ಖಂಡಿತ ನ್ಯಾಯ ಸಿಗಲಿದೆ. ಬಾಬರಿ ಮಸೀದಿ ಉತ್ಕನನ ಮಾಡಿ ಕೆಳಗಿರುವ ಕಂಬ ತೆಗೆದು ಇಲ್ಲಿ ದೇವಸ್ಥಾನ ಇತ್ತು ಅಂತ ಹೇಳಬೇಕಾಯಿತು. ಆದ್ರೆ ಶ್ರೀರಂಗಪಟ್ಟಣ ಮಸೀದಿಯ ದಾಖಲೆ ತರಿಸಿಕೊಂಡರೆ ಸಾಕು ದೇವಾಲಯ ಅಂತ ಗೊತ್ತಾಗುತ್ತೆ. ಉತ್ಖನನ ಮಾಡಬೇಕಿಲ್ಲ ಎಂದು ಹೇಳಿದರು.


ಸರ್ಕಾರ ದಯವಿಟ್ಟು ಮುಂಬರುವ ಹನುಮ ಜಯಂತಿ ಒಳಗಾಗಿ ಮಸೀದಿ ಬಾಗಿಲು ಹಾಕಿಸಬೇಕು. ನಾವು ಪ್ರಚೋದನೆ ಆಗುತ್ತಿಲ್ಲ, ನಮ್ಮೊಳಗೆ ಪ್ರಚೋದನೆ ಆಗಿಹೋಗುತ್ತದೆ. ಮಸೀದಿಯಾಗಿರುವ ಹಿಂದು ದೇವಾಲಯದ ಅವಶೇಷದ ಮೇಲಿನ ಗೋಪುರ ನೋಡಿದ್ರೆ ನೋವಾಗುತ್ತೆ. ಮುಂದೆ ಆಗುವಂತಹ ಅನಾಹುತಗಳನ್ನು ತಡೆದು ಮಸೀದಿ ಬಂದ್ ಮಾಡಿಸಬೇಕು. ನಾನು ಹೋರಾಟಕ್ಕೆ ಶತ ಸಿದ್ಧ, ಶತ ಬದ್ಧ. ನನ್ನ ಹೇಳಿಕೆಯಲ್ಲಿ ಯಾವುದೇ ತಪ್ಪಿಲ್ಲ, ನನ್ನ ಮನಸ್ಸಿನ ಭಾವನೆಯನ್ನ ಹಂಚಿಕೊಂಡಿದ್ದೇನೆ ಎಂದು ಹೇಳಿದರು.
ಬಾಬರಿ ರೀತಿಯಲ್ಲೇ ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ಒಡೆದು ಹಾಕಬೇಕೆಂದ ಋಷಿಕುಮಾರ ಸ್ವಾಮೀಜಿ ಬಂಧನ !
Mandya Rushikukar Swami released from jail says I abide with what I said about mosques.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm