ಬ್ರೇಕಿಂಗ್ ನ್ಯೂಸ್
17-09-20 10:48 am Headline Karnataka News Network ಕರ್ನಾಟಕ
ಕಲಬರುಗಿ, ಸೆಪ್ಟಂಬರ್ 17: ಇಂದು 73ನೇಯ ಕಲ್ಯಾಣ ಕರ್ನಾಟಕ ಉತ್ಸವ ಹಿನ್ನಲೆ ಜಿಲ್ಲೆಗೆ ಆಗಮಿಸಿರುವ ಸಿಎಂ ಬಿ.ಎಸ್.ಯಡಿಯೂರಪ್ಪನವರು 1,300 ಕೋಟಿ ರೂಪಾಯಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು.
ನಗರದ ಎಸ್ ವಿಪಿ ವೃತ್ತದಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ರ ಪುತ್ತಳಿಗೆ ಪೂಜೆ ಸಲ್ಲಿಸಿ ಸಿಎಂ ಮಾಲಾರ್ಪಣೆ ಮಾಡಿದರು. ನಂತರ ಡಿಎಆರ್ ಮೈದಾನದಲ್ಲಿ ಧ್ವಜಾರೋಹಣ ನೇರವೇರಿಸಿದರು. 2013-14 ರಿಂದ 219-20ರ ವರೆಗೆ ಕೆಕೆಆರ್ ಡಿಬಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳ ಕುರಿತ ವಿಶೇಷ ಕೈಪಿಡಿಯನ್ನ ಸಿಎಂ ಬಿಡುಗಡೆ ಮಾಡಿದರು. ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆಯನ್ನು ಮಾಡಿದರು.

ಸರ್ದಾರ ವಲ್ಲಭಭಾಯಿ ಪಟೇಲ್ ಪ್ರತಿಮೆಗೆ ಮಾಲಾರ್ಪಣೆ ಬಳಿಕ ಮಾತನಾಡಿದ ಸಿಎಂ ಯಡಿಯೂರಪ್ಪ, ಮಾಲಾರ್ಪಣೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದೇನೆ. ಮಳೆ ಹಿನ್ನೆಲೆಯಲ್ಲಿ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತೇನೆಂದು ಅನ್ಕೊಂಡಿರಲಿಲ್ಲ. ಮಳೆಯ ನಡುವೆ ಕಲ್ಯಾಣ ಕರ್ನಾಟಕ ಉತ್ಸವ ಯಶಸ್ವಿಯಾಗಿದೆ. ಕಲ್ಯಾಣ ಕರ್ನಾಟಕ ಅಭಿವೃದ್ಧಿಗಾಗಿ ಏನೇನು ಕಾರ್ಯಕ್ರಮ ರೂಪಿಸಬೇಕು ಅದಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.
ಇನ್ನು ಕಾರ್ಯಕ್ರಮದಲ್ಲಿ ಡಿಸಿಎಂ ಗೋವಿಂದ್ ಕಾರಜೋಳ, ಸಂಸದ ಉಮೇಶ್ ಜಾದವ್, ಸಚಿವ ಆರ್.ಅಶೋಕ್, ಶಾಸಕ ದತ್ತಾತ್ರೇಯ ಪಾಟೀಲ್ ರೆವೂರ್, ಬಾಬುರಾವ್ ಚಿಂಚನಸೂರ್ ಸೇರಿದಂತೆ ಹಲವರು ಕಲ್ಯಾಣ ಕರ್ನಾಟಕದ ಉತ್ಸವದಲ್ಲಿ ಭಾಗಿಯಾಗಿದ್ದರು.
ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿ ನಮ್ಮ ಬದ್ಧತೆಯಾಗಿದೆ. ಕೋವಿಡ್, ನೆರೆ ಸೇರಿದಂತೆ ಈ ನಿಟ್ಟಿನಲ್ಲಿ ಅಡೆತಡೆಗಳು ಎದುರಾದರೂ, ನಮ್ಮ ಪ್ರಾಮಾಣಿಕ ಪ್ರಯತ್ನಗಳು ಮುಂದುವರಿಯಲಿವೆ. ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯ ಅಂಗವಾಗಿ ಇಂದು ಕಲಬುರ್ಗಿಯಲ್ಲಿ ಸರ್ದಾರ್ ವಲ್ಲಭಾಯಿ ಪಟೇಲರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಧ್ವಜಾರೋಹಣ ನೆರವೇರಿಸಲಾಯಿತು. pic.twitter.com/jizYbVI8Bz
— B.S. Yediyurappa (@BSYBJP) September 17, 2020
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
02-03-26 09:23 pm
HK News Staffer
ಇರಾನ್ ಸಂಘರ್ಷ ; ಸುಪ್ರೀಂ ಲೀಡರ್ ಆಗಿ ನೇಮಿಸಲ್ಪಟ್ಟ...
02-03-26 06:51 pm
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
03-03-26 10:37 am
HK News Staffer
ಪಾಂಡೇಶ್ವರ ಲೆವೆಲ್ ಕ್ರಾಸಿಂಗ್ ರಸ್ತೆ ಚತುಷ್ಪಥ ಅಭ...
02-03-26 10:06 pm
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
'ಬೊಲ್ಪು’ ಯೋಜನೆಯಡಿ 11 ಸ್ಟಾರ್ಟಪ್ಗಳ ಆಯ್ಕೆ ; ಭಾವ...
01-03-26 08:37 pm
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm