ಬ್ರೇಕಿಂಗ್ ನ್ಯೂಸ್
23-01-22 12:59 pm HK Desk news ಕರ್ನಾಟಕ
Photo credits : Headline Karnataka
ಮೈಸೂರು, ಜ.23 : ಮದುವೆಗೆ ವಯಸ್ಸು ಅಡ್ಡಿಯಾಗಲ್ಲ ಎಂದು ಇಲ್ಲೊಬ್ಬರು ಅಜ್ಜ - ಅಜ್ಜಿ ದಾಂಪತ್ಯ ಜೀವನಕ್ಕೆ ಕಾಲಿಟ್ಟು ಸಮಾಜಕ್ಕೆ ಹೊಸ ಪಾಠ ಹೇಳಿಕೊಟ್ಟಿದ್ದಾರೆ. 65 ವರ್ಷದ ಫಾತಿಮಾ ಬೇಗಂ ಎಂಬ ಅಜ್ಜಿಯನ್ನು ಮುಸ್ತಫಾ ಎಂಬ 85 ವರ್ಷದ ಮುದುಕನೊಬ್ಬ ಕೈಹಿಡಿದು ಅಚ್ಚರಿ ಮೂಡಿಸಿದ್ದಾರೆ.
ಮೈಸೂರಿನ ಉದಯಗಿರಿಯ ಗೌಸಿಯಾನಗರದಲ್ಲಿ ವೃದ್ಧ ಜೋಡಿ ಕುಟುಂಬಸ್ಥರ ಸಮ್ಮುಖದಲ್ಲಿ ಪರಸ್ಪರ ಕೈಹಿಡಿದು ಹಾರ ಬದಲಾಯಿಸಿಕೊಂಡು ಸತಿ ಪತಿ ಆಗಿದ್ದಾರೆ. ಕುರಿ ಸಾಕಾಣಿಕೆ ಮಾಡುತ್ತಾ ತನ್ನ 9 ಮಕ್ಕಳಿಗೆ ಮದುವೆ ಮಾಡಿರುವ ಹಾಜಿ ಮುಸ್ತಫಾ ಈಗ ಹೊಸ ಇನ್ನಿಂಗ್ಸ್ ಆರಂಭಿಸಿದ್ದಾರೆ.
ಎರಡು ವರ್ಷಗಳ ಹಿಂದೆ ಪತ್ನಿ ಖುರ್ಷಿದ್ ಬೇಗಂರನ್ನು ಕಳೆದುಕೊಂಡಿದ್ದ ಮುಸ್ತಫಾ ಗೌಸಿಯಾನಗರದಲ್ಲಿ ಒಂಟಿಯಾಗಿ ವಾಸವಿದ್ದರು. ಮಕ್ಕಳಿಗೆಲ್ಲ ಮದುವೆಯಾಗಿದ್ದರಿಂದ ಒಂಟಿ ಜೀವನ ಬೇಡ ಎಂದು ಜಂಟಿಯಾಗಲು ಬಯಸಿದ್ದರು. ಇದೇ ವೇಳೆ, ಅದೇ ಏರಿಯಾದ ಫಾತಿಮಾ ಬೇಗಂ, ಮುಸ್ತಫಾ ಕಣ್ಣಿಗೆ ಬಿದ್ದಿದ್ದಳು. ಗೌಸಿಯಾ ನಗರದಲ್ಲೇ ಒಂಟಿಯಾಗಿ ಜೀವನ ಸಾಗಿಸುತ್ತಿದ್ದ 65 ವರ್ಷದ ವೃದ್ದೆ ಫಾತಿಮಾ ಬೇಗಂ ಅವರನ್ನು ಮದುವೆಯಾಗಲು ಮುಸ್ತಫಾ ಮುಂದಾಗಿದ್ದು ಮದುವೆ ಪ್ರಸ್ತಾಪ ಇಟ್ಟಿದ್ದರು. ಮುಸ್ತಫಾ ಆಸೆಗೆ ನಿರಾಸೆ ಮಾಡದೆ ಫಾತಿಮಾ ಬೇಗಂ ಮದುವೆಗೆ ಒಪ್ಪಿದ್ದು ತಮ್ಮ ಇಳಿ ವಯಸ್ಸಿನಲ್ಲಿ ಜೋಡಿಯಾಗಲು ಮುಂದಾಗಿದ್ದಾರೆ.
ತಂದೆಯ ಹೊಸ ಇನ್ನಿಂಗ್ಸ್ ಆರಂಭಕ್ಕೆ ಮಕ್ಕಳು ಶುಭ ಹಾರೈಸಿದ್ದಾರೆ. ಅಜ್ಜನ ಮಾತು ಕೇಳಿ ಅಚ್ಚರಿ ಎನಿಸಿದ್ರೂ ಮಕ್ಕಳು, ಮೊಮ್ಮಕ್ಕಳು ಸೇರಿ ಇಳಿವಯಸ್ಸಿನ ನಿರ್ಧಾರಕ್ಕೆ ಜೈ ಎಂದಿದ್ದಾರೆ. ಮಕ್ಕಳೇ ಸೇರಿ ತಮ್ಮದೇ ಮನೆಯಲ್ಲಿ ನಿಖಾ ಮಾಡಿದ್ದಾರೆ. ಮಕ್ಕಳು, ಮೊಮ್ಮಕ್ಕಳ ಸಮ್ಮುಖದಲ್ಲಿ ಫಾತಿಮಾ ಅಜ್ಜಿಯನ್ನು ವರಿಸಿದ ಮುಸ್ತಪಾ ಹೊಸ ದಾಂಪತ್ಯ ಆರಂಭಿಸಿದ್ದು ಅಚ್ಚರಿ ಮೂಡಿಸಿದೆ. ಆದರೆ ಇಳಿ ವಯಸ್ಸಿನಲ್ಲಿ ಹೆಣ್ಣಿನ ಆಸರೆ ಬಯಸಿದ ಮುಸ್ತಫಾ ದಿಟ್ಟ ನಿರ್ಧಾರಕ್ಕೆ ಕುಟುಂಬಸ್ಥರು ಫುಲ್ ಖುಷ್ ಆಗಿದ್ದಾರೆ.
Mysuru 85 year old Muslim Man marries a 64-year-old woman. The Marrige took place in the presence of their entire families.
16-09-25 11:00 pm
Bangalore Correspondent
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
16-09-25 07:48 pm
Mangalore Correspondent
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
16-09-25 10:40 pm
HK News Desk
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am