ಬ್ರೇಕಿಂಗ್ ನ್ಯೂಸ್
23-01-22 12:59 pm HK Desk news ಕರ್ನಾಟಕ
Photo credits : Headline Karnataka
ಮೈಸೂರು, ಜ.23 : ಮದುವೆಗೆ ವಯಸ್ಸು ಅಡ್ಡಿಯಾಗಲ್ಲ ಎಂದು ಇಲ್ಲೊಬ್ಬರು ಅಜ್ಜ - ಅಜ್ಜಿ ದಾಂಪತ್ಯ ಜೀವನಕ್ಕೆ ಕಾಲಿಟ್ಟು ಸಮಾಜಕ್ಕೆ ಹೊಸ ಪಾಠ ಹೇಳಿಕೊಟ್ಟಿದ್ದಾರೆ. 65 ವರ್ಷದ ಫಾತಿಮಾ ಬೇಗಂ ಎಂಬ ಅಜ್ಜಿಯನ್ನು ಮುಸ್ತಫಾ ಎಂಬ 85 ವರ್ಷದ ಮುದುಕನೊಬ್ಬ ಕೈಹಿಡಿದು ಅಚ್ಚರಿ ಮೂಡಿಸಿದ್ದಾರೆ.
ಮೈಸೂರಿನ ಉದಯಗಿರಿಯ ಗೌಸಿಯಾನಗರದಲ್ಲಿ ವೃದ್ಧ ಜೋಡಿ ಕುಟುಂಬಸ್ಥರ ಸಮ್ಮುಖದಲ್ಲಿ ಪರಸ್ಪರ ಕೈಹಿಡಿದು ಹಾರ ಬದಲಾಯಿಸಿಕೊಂಡು ಸತಿ ಪತಿ ಆಗಿದ್ದಾರೆ. ಕುರಿ ಸಾಕಾಣಿಕೆ ಮಾಡುತ್ತಾ ತನ್ನ 9 ಮಕ್ಕಳಿಗೆ ಮದುವೆ ಮಾಡಿರುವ ಹಾಜಿ ಮುಸ್ತಫಾ ಈಗ ಹೊಸ ಇನ್ನಿಂಗ್ಸ್ ಆರಂಭಿಸಿದ್ದಾರೆ.
ಎರಡು ವರ್ಷಗಳ ಹಿಂದೆ ಪತ್ನಿ ಖುರ್ಷಿದ್ ಬೇಗಂರನ್ನು ಕಳೆದುಕೊಂಡಿದ್ದ ಮುಸ್ತಫಾ ಗೌಸಿಯಾನಗರದಲ್ಲಿ ಒಂಟಿಯಾಗಿ ವಾಸವಿದ್ದರು. ಮಕ್ಕಳಿಗೆಲ್ಲ ಮದುವೆಯಾಗಿದ್ದರಿಂದ ಒಂಟಿ ಜೀವನ ಬೇಡ ಎಂದು ಜಂಟಿಯಾಗಲು ಬಯಸಿದ್ದರು. ಇದೇ ವೇಳೆ, ಅದೇ ಏರಿಯಾದ ಫಾತಿಮಾ ಬೇಗಂ, ಮುಸ್ತಫಾ ಕಣ್ಣಿಗೆ ಬಿದ್ದಿದ್ದಳು. ಗೌಸಿಯಾ ನಗರದಲ್ಲೇ ಒಂಟಿಯಾಗಿ ಜೀವನ ಸಾಗಿಸುತ್ತಿದ್ದ 65 ವರ್ಷದ ವೃದ್ದೆ ಫಾತಿಮಾ ಬೇಗಂ ಅವರನ್ನು ಮದುವೆಯಾಗಲು ಮುಸ್ತಫಾ ಮುಂದಾಗಿದ್ದು ಮದುವೆ ಪ್ರಸ್ತಾಪ ಇಟ್ಟಿದ್ದರು. ಮುಸ್ತಫಾ ಆಸೆಗೆ ನಿರಾಸೆ ಮಾಡದೆ ಫಾತಿಮಾ ಬೇಗಂ ಮದುವೆಗೆ ಒಪ್ಪಿದ್ದು ತಮ್ಮ ಇಳಿ ವಯಸ್ಸಿನಲ್ಲಿ ಜೋಡಿಯಾಗಲು ಮುಂದಾಗಿದ್ದಾರೆ.
ತಂದೆಯ ಹೊಸ ಇನ್ನಿಂಗ್ಸ್ ಆರಂಭಕ್ಕೆ ಮಕ್ಕಳು ಶುಭ ಹಾರೈಸಿದ್ದಾರೆ. ಅಜ್ಜನ ಮಾತು ಕೇಳಿ ಅಚ್ಚರಿ ಎನಿಸಿದ್ರೂ ಮಕ್ಕಳು, ಮೊಮ್ಮಕ್ಕಳು ಸೇರಿ ಇಳಿವಯಸ್ಸಿನ ನಿರ್ಧಾರಕ್ಕೆ ಜೈ ಎಂದಿದ್ದಾರೆ. ಮಕ್ಕಳೇ ಸೇರಿ ತಮ್ಮದೇ ಮನೆಯಲ್ಲಿ ನಿಖಾ ಮಾಡಿದ್ದಾರೆ. ಮಕ್ಕಳು, ಮೊಮ್ಮಕ್ಕಳ ಸಮ್ಮುಖದಲ್ಲಿ ಫಾತಿಮಾ ಅಜ್ಜಿಯನ್ನು ವರಿಸಿದ ಮುಸ್ತಪಾ ಹೊಸ ದಾಂಪತ್ಯ ಆರಂಭಿಸಿದ್ದು ಅಚ್ಚರಿ ಮೂಡಿಸಿದೆ. ಆದರೆ ಇಳಿ ವಯಸ್ಸಿನಲ್ಲಿ ಹೆಣ್ಣಿನ ಆಸರೆ ಬಯಸಿದ ಮುಸ್ತಫಾ ದಿಟ್ಟ ನಿರ್ಧಾರಕ್ಕೆ ಕುಟುಂಬಸ್ಥರು ಫುಲ್ ಖುಷ್ ಆಗಿದ್ದಾರೆ.
Mysuru 85 year old Muslim Man marries a 64-year-old woman. The Marrige took place in the presence of their entire families.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 10:33 am
HK News Staffer
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm
ಕಾರವಾರದ ಕಡ್ಲೆ ಬೀಚ್ನಲ್ಲಿ ರೀಲ್ಸ್ ಮಾಡುಲು ಹೋಗಿ ಅ...
15-06-26 04:54 pm
ಸೋಲಾಪುರದಲ್ಲಿ ಭೀಕರ ದುರಂತ! ನಿಯಂತ್ರಣ ತಪ್ಪಿ ನಾಲೆಗ...
15-06-26 11:50 am