ಬ್ರೇಕಿಂಗ್ ನ್ಯೂಸ್
24-01-22 05:35 pm HK Desk news ಕರ್ನಾಟಕ
ಬೆಂಗಳೂರು, ಜ.24 : ಸಿಎಂ ಬಸವರಾಜ ಬೊಮ್ಮಾಯಿ ಕೊನೆಗೂ ಆಯಾ ಜಿಲ್ಲೆಗಳಿಗೆ ಉಸ್ತುವಾರಿ ಸಚಿವರನ್ನು ನೇಮಕ ಮಾಡಿದ್ದಾರೆ. ಬೊಮ್ಮಾಯಿ ಸರಕಾರ ಅಸ್ತಿತ್ವಕ್ಕೆ ಬಂದ ಸಂದರ್ಭದಲ್ಲಿ ಕೋವಿಡ್ ನಿಯಂತ್ರಣ ಹಿನ್ನೆಲೆಯಲ್ಲಿ ತಾತ್ಕಾಲಿಕ ನೆಲೆಯಲ್ಲಿ ಉಸ್ತುವಾರಿ ಸಚಿವರನ್ನು ನೇಮಕ ಮಾಡಲಾಗಿತ್ತು.
ದಕ್ಷಿಣ ಕನ್ನಡ ಜಿಲ್ಲೆಗೆ ಇಂಧನ ಸಚಿವ ಸುನಿಲ್ ಕುಮಾರ್, ಮೀನುಗಾರಿಕೆ ಮತ್ತು ಬಂದರು ಸಚಿವ ಎಸ್.ಅಂಗಾರ ಅವರನ್ನು ಉಡುಪಿ ಜಿಲ್ಲೆಗೆ ಉಸ್ತುವಾರಿಯನ್ನಾಗಿ ಮಾಡಲಾಗಿದೆ. ಉತ್ತರ ಕನ್ನಡ ಜಿಲ್ಲೆಗೆ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಉಸ್ತುವಾರಿ ಮಾಡಲಾಗಿದೆ. ಸಂಪುಟ ಪುನಾರಚನೆ ಆಗುತ್ತೆ, ಹಳಬರನ್ನು ಬದಲಿಸಿ ಹೊಸಬರಿಗೆ ಅವಕಾಶ ನೀಡಲಾಗುತ್ತೆ ಎಂಬ ವದಂತಿ, ಆಗ್ರಹದ ಬೆನ್ನಲ್ಲೇ ಸಿಎಂ ಬೊಮ್ಮಾಯಿ ಪೂರ್ಣಕಾಲಿಕ ಉಸ್ತುವಾರಿ ನೇಮಕ ಮಾಡಿದ್ದು ಅಚ್ಚರಿ ಮೂಡಿಸಿದೆ.

ಬೆಂಗಳೂರು ನಗರದ ಉಸ್ತುವಾರಿಯನ್ನು ಸಿಎಂ ಸ್ವತಃ ತನ್ನಲ್ಲಿ ಇಟ್ಟುಕೊಂಡಿದ್ದಾರೆ. ಶಿವಮೊಗ್ಗಕ್ಕೆ ಕೆ.ಸಿ.ನಾರಾಯಣ ಗೌಡ, ಚಿಕ್ಕಮಗಳೂರಿಗೆ ಕೆ.ಎಸ್.ಈಶ್ವರಪ್ಪ ಅವರಿಗೆ ಉಸ್ತುವಾರಿ ನೀಡಲಾಗಿದೆ. ಆಯಾ ಭಾಗದ ಸಚಿವರಿಗೆ ಬೇರೆ ಜಿಲ್ಲೆಗಳ ಜವಾಬ್ದಾರಿ ನೀಡಿ ಉಸ್ತುವಾರಿ ನೀಡಿಕೆಯಲ್ಲೂ ಸಿಎಂ ಬೊಮ್ಮಾಯಿ ಚಾಣಾಕ್ಷತನ ತೋರಿದ್ದಾರೆ. ಕರಾವಳಿಯಲ್ಲಿ ನಾರಾಯಣ ಗುರು ವಿಚಾರದಲ್ಲಿ ಬಿಲ್ಲವರ ಆಕ್ರೋಶ ಕೇಳಿಬರುತ್ತಿರುವ ನಡುವೆಯೇ ಬಿಲ್ಲವ ಸಮುದಾಯದ ಸುನಿಲ್ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಆಗಿ ನೇಮಿಸಿ ಸಮಾಧಾನಿಸುವ ಹೊಣೆ ನೀಡಿದ್ದಾರೆ ಎನ್ನಲಾಗುತ್ತಿದೆ.
Chief minister Basavaraj Bommai has announced the district in-charge ministers for Dakshina Kannada and Udupi on Monday, January 24. V Sunil Kumar will be the district in-charge of Dakshina Kannada and S Angara will be in-charge of Udupi district.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am