ಬ್ರೇಕಿಂಗ್ ನ್ಯೂಸ್
26-01-22 01:45 pm DK Desk news ಕರ್ನಾಟಕ
ಬೆಂಗಳೂರು, ಜ 26 : ಕೋವಿಡ್ ಲಸಿಕೆ ನೀಡಿಕೆ ಗುರಿ ತಲುಪುವ ಉದ್ದೇಶದಿಂದ ಮಹಾನಗರ ಪಾಲಿಕೆಯ ಸಿಬ್ಬಂದಿಗಳು 8 ತಿಂಗಳ ಹಿಂದೆ ಮೃತಪಟ್ಟ ವ್ಯಕ್ತಿಗೂ ಜ.23ರಂದು ಎರಡನೇ ಡೋಸ್ ಲಸಿಕೆ ನೀಡಿರುವುದಾಗಿ ಮೊಬೈಲ್ಫೋನ್ಗೆ ಮೆಸೇಜ್ ಕಳಿಸುವ ಮೂಲಕ ಸಾಹಸ ಮೆರೆದಿದ್ದಾರೆ.
ನಗರದ ಉತ್ತರಹಳ್ಳಿಯ ನಿವಾಸಿ ವಿ.ಎಸ್.ರಾಘವೇಂದ್ರ ರಾವ್ ಎನ್ನುವವರು 2021ರ ಮಾ.21ರಂದು ಮೊದಲ ಡೋಸ್ ಕೋವಿಡ್ ಲಸಿಕೆ ಪಡೆದುಕೊಂಡಿದ್ದರು. ನಂತರ ಕರೋನಾ ಎರಡನೇ ಅಲೆಯ ವೇಳೆ 2021ರ ಮೇ 25ರಂದು ಕೋವಿಡ್ನಿಂದ ಮೃತಪಟ್ಟಿದ್ದರು. ಇವರು ಮೃತಪಟ್ಟ ಸುಮಾರು 8 ತಿಂಗಳ ನಂತರ ಪಾಲಿಕೆಯ 198ನೇ ವಾರ್ಡ್ನ ತಲಘಟ್ಟಪುರ ಉಪ ಅರೋಗ್ಯ ಕೇಂದ್ರದಲ್ಲಿ ಜ.23ರಂದು ಕೋವಿಡ್ ಎರಡನೇ ಡೋಸ್ ಲಸಿಕೆ ನೀಡಿರುವುದಾಗಿ ಮೆಸೇಜ್ ಜೊತೆಗೆ ಲಸಿಕೆ ಪ್ರಮಾಣ ಪತ್ರ ಕಳಿಸುವ ಮೂಲಕ ಭಾರೀ ಎಡವಟ್ಟು ಮಾಡಿಕೊಂಡಿದ್ದಾರೆ.
ರಾಜ್ಯದಲ್ಲಿ ಕೋವಿಡ್ ಲಸಿಕೆ ಶೇ.100 ಗುರಿ ತಲುಪುವಂತೆ ಆರೋಗ್ಯ ಇಲಾಖೆ ಸಚಿವರು ಕಠಿಣ ಸಂದೇಶ ರವಾನಿಸಿದ್ದಾರೆ. ಅದರಲ್ಲಿ ದಕ್ಷಿಣ ಕನ್ನಡ ಮತ್ತು ಬಿಬಿಎಂಪಿ ವ್ಯಾಪ್ತಿಯಲ್ಲಿ ಲಸಿಕೆ ನೀಡಿಕೆಗೆ ಹಿನ್ನಡೆ ಉಂಟಾಗಿರುವುದು ಇಲಾಖೆ ಕೆಂಗಣ್ಣಿಗೆ ಗುರಿಯಾಗಿತ್ತು. ಇದನ್ನು ಸರಿಪಡಿಸಿಕೊಳ್ಳಲು ಪಾಲಿಕೆ ಆರೋಗ್ಯ ಸಿಬ್ಬಂದಿ ಲಸಿಕೆ ನೀಡದಿದ್ದರೂ ಸುಳ್ಳು ಪ್ರಮಾಣಪತ್ರ ನೀಡಲು ಮುಂದಾಗಿದ್ದಾರೆ. ಮೊದಲ ಡೋಸ್ ಲಸಿಕೆ ಪಡೆದು ಎರಡನೇ ಡೋಸ್ ಲಸಿಕೆ ಪಡೆಯದವರು 6 ರಿಂದ 8 ತಿಂಗಳವರೆಗೆ ಎರಡನೇ ಡೋಸ್ ಪಡೆಯದಿದ್ದಲ್ಲಿ ಅವರ ಮೊಬೈಲ್ಫೋನ್ಗೆ ಲಸಿಕೆ ನೀಡಿರುವ ಸಂದೇಶ ಕಳುಹಿಸಲಾಗುತ್ತಿದೆ. ಇಂತಹ ಅನೇಕ ಪ್ರಕರಣಗಳು ಈ ಮೊದಲೇ ಬಿಬಿಎಂಪಿ ಸೇರಿ ಬೇರೆ ಜಿಲ್ಲಾ ಕೇಂದ್ರಗಳಲ್ಲಿ ನಡೆದಿವೆ. ಪಾಲಿಕೆಯ ಆರೋಗ್ಯ ಸಿಬ್ಬಂದಿ ಕ್ರಮಕ್ಕೆ ಉತ್ತರ ಹಳ್ಳಿ ನಿವಾಸಿ ರಾಘವೇಂದ್ರ ಕುಟುಂಬಸ್ಥರಿಂದ ಆಕ್ರೋಶ ವ್ಯಕ್ತವಾಗಿದೆ.
Bangalore Man who died eight months ago gets covid second dose message, family in shock. The family has alleged the negligence of the officials who are playing tactics of sending messages to people who are dead to show 100 percent vaccine in state.
16-09-25 11:00 pm
Bangalore Correspondent
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
16-09-25 07:48 pm
Mangalore Correspondent
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
16-09-25 10:40 pm
HK News Desk
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am