ಬ್ರೇಕಿಂಗ್ ನ್ಯೂಸ್
26-01-22 01:45 pm DK Desk news ಕರ್ನಾಟಕ
ಬೆಂಗಳೂರು, ಜ 26 : ಕೋವಿಡ್ ಲಸಿಕೆ ನೀಡಿಕೆ ಗುರಿ ತಲುಪುವ ಉದ್ದೇಶದಿಂದ ಮಹಾನಗರ ಪಾಲಿಕೆಯ ಸಿಬ್ಬಂದಿಗಳು 8 ತಿಂಗಳ ಹಿಂದೆ ಮೃತಪಟ್ಟ ವ್ಯಕ್ತಿಗೂ ಜ.23ರಂದು ಎರಡನೇ ಡೋಸ್ ಲಸಿಕೆ ನೀಡಿರುವುದಾಗಿ ಮೊಬೈಲ್ಫೋನ್ಗೆ ಮೆಸೇಜ್ ಕಳಿಸುವ ಮೂಲಕ ಸಾಹಸ ಮೆರೆದಿದ್ದಾರೆ.
ನಗರದ ಉತ್ತರಹಳ್ಳಿಯ ನಿವಾಸಿ ವಿ.ಎಸ್.ರಾಘವೇಂದ್ರ ರಾವ್ ಎನ್ನುವವರು 2021ರ ಮಾ.21ರಂದು ಮೊದಲ ಡೋಸ್ ಕೋವಿಡ್ ಲಸಿಕೆ ಪಡೆದುಕೊಂಡಿದ್ದರು. ನಂತರ ಕರೋನಾ ಎರಡನೇ ಅಲೆಯ ವೇಳೆ 2021ರ ಮೇ 25ರಂದು ಕೋವಿಡ್ನಿಂದ ಮೃತಪಟ್ಟಿದ್ದರು. ಇವರು ಮೃತಪಟ್ಟ ಸುಮಾರು 8 ತಿಂಗಳ ನಂತರ ಪಾಲಿಕೆಯ 198ನೇ ವಾರ್ಡ್ನ ತಲಘಟ್ಟಪುರ ಉಪ ಅರೋಗ್ಯ ಕೇಂದ್ರದಲ್ಲಿ ಜ.23ರಂದು ಕೋವಿಡ್ ಎರಡನೇ ಡೋಸ್ ಲಸಿಕೆ ನೀಡಿರುವುದಾಗಿ ಮೆಸೇಜ್ ಜೊತೆಗೆ ಲಸಿಕೆ ಪ್ರಮಾಣ ಪತ್ರ ಕಳಿಸುವ ಮೂಲಕ ಭಾರೀ ಎಡವಟ್ಟು ಮಾಡಿಕೊಂಡಿದ್ದಾರೆ.
ರಾಜ್ಯದಲ್ಲಿ ಕೋವಿಡ್ ಲಸಿಕೆ ಶೇ.100 ಗುರಿ ತಲುಪುವಂತೆ ಆರೋಗ್ಯ ಇಲಾಖೆ ಸಚಿವರು ಕಠಿಣ ಸಂದೇಶ ರವಾನಿಸಿದ್ದಾರೆ. ಅದರಲ್ಲಿ ದಕ್ಷಿಣ ಕನ್ನಡ ಮತ್ತು ಬಿಬಿಎಂಪಿ ವ್ಯಾಪ್ತಿಯಲ್ಲಿ ಲಸಿಕೆ ನೀಡಿಕೆಗೆ ಹಿನ್ನಡೆ ಉಂಟಾಗಿರುವುದು ಇಲಾಖೆ ಕೆಂಗಣ್ಣಿಗೆ ಗುರಿಯಾಗಿತ್ತು. ಇದನ್ನು ಸರಿಪಡಿಸಿಕೊಳ್ಳಲು ಪಾಲಿಕೆ ಆರೋಗ್ಯ ಸಿಬ್ಬಂದಿ ಲಸಿಕೆ ನೀಡದಿದ್ದರೂ ಸುಳ್ಳು ಪ್ರಮಾಣಪತ್ರ ನೀಡಲು ಮುಂದಾಗಿದ್ದಾರೆ. ಮೊದಲ ಡೋಸ್ ಲಸಿಕೆ ಪಡೆದು ಎರಡನೇ ಡೋಸ್ ಲಸಿಕೆ ಪಡೆಯದವರು 6 ರಿಂದ 8 ತಿಂಗಳವರೆಗೆ ಎರಡನೇ ಡೋಸ್ ಪಡೆಯದಿದ್ದಲ್ಲಿ ಅವರ ಮೊಬೈಲ್ಫೋನ್ಗೆ ಲಸಿಕೆ ನೀಡಿರುವ ಸಂದೇಶ ಕಳುಹಿಸಲಾಗುತ್ತಿದೆ. ಇಂತಹ ಅನೇಕ ಪ್ರಕರಣಗಳು ಈ ಮೊದಲೇ ಬಿಬಿಎಂಪಿ ಸೇರಿ ಬೇರೆ ಜಿಲ್ಲಾ ಕೇಂದ್ರಗಳಲ್ಲಿ ನಡೆದಿವೆ. ಪಾಲಿಕೆಯ ಆರೋಗ್ಯ ಸಿಬ್ಬಂದಿ ಕ್ರಮಕ್ಕೆ ಉತ್ತರ ಹಳ್ಳಿ ನಿವಾಸಿ ರಾಘವೇಂದ್ರ ಕುಟುಂಬಸ್ಥರಿಂದ ಆಕ್ರೋಶ ವ್ಯಕ್ತವಾಗಿದೆ.
Bangalore Man who died eight months ago gets covid second dose message, family in shock. The family has alleged the negligence of the officials who are playing tactics of sending messages to people who are dead to show 100 percent vaccine in state.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am