ಬ್ರೇಕಿಂಗ್ ನ್ಯೂಸ್
26-01-22 01:45 pm DK Desk news ಕರ್ನಾಟಕ
ಬೆಂಗಳೂರು, ಜ 26 : ಕೋವಿಡ್ ಲಸಿಕೆ ನೀಡಿಕೆ ಗುರಿ ತಲುಪುವ ಉದ್ದೇಶದಿಂದ ಮಹಾನಗರ ಪಾಲಿಕೆಯ ಸಿಬ್ಬಂದಿಗಳು 8 ತಿಂಗಳ ಹಿಂದೆ ಮೃತಪಟ್ಟ ವ್ಯಕ್ತಿಗೂ ಜ.23ರಂದು ಎರಡನೇ ಡೋಸ್ ಲಸಿಕೆ ನೀಡಿರುವುದಾಗಿ ಮೊಬೈಲ್ಫೋನ್ಗೆ ಮೆಸೇಜ್ ಕಳಿಸುವ ಮೂಲಕ ಸಾಹಸ ಮೆರೆದಿದ್ದಾರೆ.
ನಗರದ ಉತ್ತರಹಳ್ಳಿಯ ನಿವಾಸಿ ವಿ.ಎಸ್.ರಾಘವೇಂದ್ರ ರಾವ್ ಎನ್ನುವವರು 2021ರ ಮಾ.21ರಂದು ಮೊದಲ ಡೋಸ್ ಕೋವಿಡ್ ಲಸಿಕೆ ಪಡೆದುಕೊಂಡಿದ್ದರು. ನಂತರ ಕರೋನಾ ಎರಡನೇ ಅಲೆಯ ವೇಳೆ 2021ರ ಮೇ 25ರಂದು ಕೋವಿಡ್ನಿಂದ ಮೃತಪಟ್ಟಿದ್ದರು. ಇವರು ಮೃತಪಟ್ಟ ಸುಮಾರು 8 ತಿಂಗಳ ನಂತರ ಪಾಲಿಕೆಯ 198ನೇ ವಾರ್ಡ್ನ ತಲಘಟ್ಟಪುರ ಉಪ ಅರೋಗ್ಯ ಕೇಂದ್ರದಲ್ಲಿ ಜ.23ರಂದು ಕೋವಿಡ್ ಎರಡನೇ ಡೋಸ್ ಲಸಿಕೆ ನೀಡಿರುವುದಾಗಿ ಮೆಸೇಜ್ ಜೊತೆಗೆ ಲಸಿಕೆ ಪ್ರಮಾಣ ಪತ್ರ ಕಳಿಸುವ ಮೂಲಕ ಭಾರೀ ಎಡವಟ್ಟು ಮಾಡಿಕೊಂಡಿದ್ದಾರೆ.
ರಾಜ್ಯದಲ್ಲಿ ಕೋವಿಡ್ ಲಸಿಕೆ ಶೇ.100 ಗುರಿ ತಲುಪುವಂತೆ ಆರೋಗ್ಯ ಇಲಾಖೆ ಸಚಿವರು ಕಠಿಣ ಸಂದೇಶ ರವಾನಿಸಿದ್ದಾರೆ. ಅದರಲ್ಲಿ ದಕ್ಷಿಣ ಕನ್ನಡ ಮತ್ತು ಬಿಬಿಎಂಪಿ ವ್ಯಾಪ್ತಿಯಲ್ಲಿ ಲಸಿಕೆ ನೀಡಿಕೆಗೆ ಹಿನ್ನಡೆ ಉಂಟಾಗಿರುವುದು ಇಲಾಖೆ ಕೆಂಗಣ್ಣಿಗೆ ಗುರಿಯಾಗಿತ್ತು. ಇದನ್ನು ಸರಿಪಡಿಸಿಕೊಳ್ಳಲು ಪಾಲಿಕೆ ಆರೋಗ್ಯ ಸಿಬ್ಬಂದಿ ಲಸಿಕೆ ನೀಡದಿದ್ದರೂ ಸುಳ್ಳು ಪ್ರಮಾಣಪತ್ರ ನೀಡಲು ಮುಂದಾಗಿದ್ದಾರೆ. ಮೊದಲ ಡೋಸ್ ಲಸಿಕೆ ಪಡೆದು ಎರಡನೇ ಡೋಸ್ ಲಸಿಕೆ ಪಡೆಯದವರು 6 ರಿಂದ 8 ತಿಂಗಳವರೆಗೆ ಎರಡನೇ ಡೋಸ್ ಪಡೆಯದಿದ್ದಲ್ಲಿ ಅವರ ಮೊಬೈಲ್ಫೋನ್ಗೆ ಲಸಿಕೆ ನೀಡಿರುವ ಸಂದೇಶ ಕಳುಹಿಸಲಾಗುತ್ತಿದೆ. ಇಂತಹ ಅನೇಕ ಪ್ರಕರಣಗಳು ಈ ಮೊದಲೇ ಬಿಬಿಎಂಪಿ ಸೇರಿ ಬೇರೆ ಜಿಲ್ಲಾ ಕೇಂದ್ರಗಳಲ್ಲಿ ನಡೆದಿವೆ. ಪಾಲಿಕೆಯ ಆರೋಗ್ಯ ಸಿಬ್ಬಂದಿ ಕ್ರಮಕ್ಕೆ ಉತ್ತರ ಹಳ್ಳಿ ನಿವಾಸಿ ರಾಘವೇಂದ್ರ ಕುಟುಂಬಸ್ಥರಿಂದ ಆಕ್ರೋಶ ವ್ಯಕ್ತವಾಗಿದೆ.
Bangalore Man who died eight months ago gets covid second dose message, family in shock. The family has alleged the negligence of the officials who are playing tactics of sending messages to people who are dead to show 100 percent vaccine in state.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 10:33 am
HK News Staffer
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm
ಕಾರವಾರದ ಕಡ್ಲೆ ಬೀಚ್ನಲ್ಲಿ ರೀಲ್ಸ್ ಮಾಡುಲು ಹೋಗಿ ಅ...
15-06-26 04:54 pm
ಸೋಲಾಪುರದಲ್ಲಿ ಭೀಕರ ದುರಂತ! ನಿಯಂತ್ರಣ ತಪ್ಪಿ ನಾಲೆಗ...
15-06-26 11:50 am