ಬ್ರೇಕಿಂಗ್ ನ್ಯೂಸ್
26-01-22 01:45 pm DK Desk news ಕರ್ನಾಟಕ
ಬೆಂಗಳೂರು, ಜ 26 : ಕೋವಿಡ್ ಲಸಿಕೆ ನೀಡಿಕೆ ಗುರಿ ತಲುಪುವ ಉದ್ದೇಶದಿಂದ ಮಹಾನಗರ ಪಾಲಿಕೆಯ ಸಿಬ್ಬಂದಿಗಳು 8 ತಿಂಗಳ ಹಿಂದೆ ಮೃತಪಟ್ಟ ವ್ಯಕ್ತಿಗೂ ಜ.23ರಂದು ಎರಡನೇ ಡೋಸ್ ಲಸಿಕೆ ನೀಡಿರುವುದಾಗಿ ಮೊಬೈಲ್ಫೋನ್ಗೆ ಮೆಸೇಜ್ ಕಳಿಸುವ ಮೂಲಕ ಸಾಹಸ ಮೆರೆದಿದ್ದಾರೆ.
ನಗರದ ಉತ್ತರಹಳ್ಳಿಯ ನಿವಾಸಿ ವಿ.ಎಸ್.ರಾಘವೇಂದ್ರ ರಾವ್ ಎನ್ನುವವರು 2021ರ ಮಾ.21ರಂದು ಮೊದಲ ಡೋಸ್ ಕೋವಿಡ್ ಲಸಿಕೆ ಪಡೆದುಕೊಂಡಿದ್ದರು. ನಂತರ ಕರೋನಾ ಎರಡನೇ ಅಲೆಯ ವೇಳೆ 2021ರ ಮೇ 25ರಂದು ಕೋವಿಡ್ನಿಂದ ಮೃತಪಟ್ಟಿದ್ದರು. ಇವರು ಮೃತಪಟ್ಟ ಸುಮಾರು 8 ತಿಂಗಳ ನಂತರ ಪಾಲಿಕೆಯ 198ನೇ ವಾರ್ಡ್ನ ತಲಘಟ್ಟಪುರ ಉಪ ಅರೋಗ್ಯ ಕೇಂದ್ರದಲ್ಲಿ ಜ.23ರಂದು ಕೋವಿಡ್ ಎರಡನೇ ಡೋಸ್ ಲಸಿಕೆ ನೀಡಿರುವುದಾಗಿ ಮೆಸೇಜ್ ಜೊತೆಗೆ ಲಸಿಕೆ ಪ್ರಮಾಣ ಪತ್ರ ಕಳಿಸುವ ಮೂಲಕ ಭಾರೀ ಎಡವಟ್ಟು ಮಾಡಿಕೊಂಡಿದ್ದಾರೆ.
ರಾಜ್ಯದಲ್ಲಿ ಕೋವಿಡ್ ಲಸಿಕೆ ಶೇ.100 ಗುರಿ ತಲುಪುವಂತೆ ಆರೋಗ್ಯ ಇಲಾಖೆ ಸಚಿವರು ಕಠಿಣ ಸಂದೇಶ ರವಾನಿಸಿದ್ದಾರೆ. ಅದರಲ್ಲಿ ದಕ್ಷಿಣ ಕನ್ನಡ ಮತ್ತು ಬಿಬಿಎಂಪಿ ವ್ಯಾಪ್ತಿಯಲ್ಲಿ ಲಸಿಕೆ ನೀಡಿಕೆಗೆ ಹಿನ್ನಡೆ ಉಂಟಾಗಿರುವುದು ಇಲಾಖೆ ಕೆಂಗಣ್ಣಿಗೆ ಗುರಿಯಾಗಿತ್ತು. ಇದನ್ನು ಸರಿಪಡಿಸಿಕೊಳ್ಳಲು ಪಾಲಿಕೆ ಆರೋಗ್ಯ ಸಿಬ್ಬಂದಿ ಲಸಿಕೆ ನೀಡದಿದ್ದರೂ ಸುಳ್ಳು ಪ್ರಮಾಣಪತ್ರ ನೀಡಲು ಮುಂದಾಗಿದ್ದಾರೆ. ಮೊದಲ ಡೋಸ್ ಲಸಿಕೆ ಪಡೆದು ಎರಡನೇ ಡೋಸ್ ಲಸಿಕೆ ಪಡೆಯದವರು 6 ರಿಂದ 8 ತಿಂಗಳವರೆಗೆ ಎರಡನೇ ಡೋಸ್ ಪಡೆಯದಿದ್ದಲ್ಲಿ ಅವರ ಮೊಬೈಲ್ಫೋನ್ಗೆ ಲಸಿಕೆ ನೀಡಿರುವ ಸಂದೇಶ ಕಳುಹಿಸಲಾಗುತ್ತಿದೆ. ಇಂತಹ ಅನೇಕ ಪ್ರಕರಣಗಳು ಈ ಮೊದಲೇ ಬಿಬಿಎಂಪಿ ಸೇರಿ ಬೇರೆ ಜಿಲ್ಲಾ ಕೇಂದ್ರಗಳಲ್ಲಿ ನಡೆದಿವೆ. ಪಾಲಿಕೆಯ ಆರೋಗ್ಯ ಸಿಬ್ಬಂದಿ ಕ್ರಮಕ್ಕೆ ಉತ್ತರ ಹಳ್ಳಿ ನಿವಾಸಿ ರಾಘವೇಂದ್ರ ಕುಟುಂಬಸ್ಥರಿಂದ ಆಕ್ರೋಶ ವ್ಯಕ್ತವಾಗಿದೆ.
Bangalore Man who died eight months ago gets covid second dose message, family in shock. The family has alleged the negligence of the officials who are playing tactics of sending messages to people who are dead to show 100 percent vaccine in state.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm