ಬ್ರೇಕಿಂಗ್ ನ್ಯೂಸ್
28-01-22 02:50 pm HK Desk news ಕರ್ನಾಟಕ
Photo credits : Headline Karnataka
ಬೆಂಗಳೂರು, ಜ.28 : ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಮೊಮ್ಮಗಳು, ಎಂ.ಎಸ್ ರಾಮಯ್ಯ ಆಸ್ಪತ್ರೆಯ ವೈದ್ಯೆ ಸೌಂದರ್ಯಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬೆಂಗಳೂರಿನ ಮೌಂಟ್ ಕಾರ್ಮೆಲ್ ಬಳಿಯ ಅಪಾರ್ಟ್ಮೆಂಟ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೌಂದರ್ಯ ಮತ್ತು ಆಕೆಯ ಪತಿ ಡಾ. ನೀರಜ್ ಇಬ್ಬರೂ ಎಂ.ಎಸ್ ರಾಮಯ್ಯ ಆಸ್ಪತ್ರೆಯಲ್ಲಿ ವೈದ್ಯರಾಗಿದ್ದರು. ದಂಪತಿಗೆ ಒಂಬತ್ತು ತಿಂಗಳ ಮಗು ಇದೆ.


ಬೆಳಗ್ಗೆ ಹತ್ತು ಗಂಟೆಗೆ ಸೌಂದರ್ಯ ಪತಿಗೆ ಕರೆ ಮಾಡಿದ್ದರು ಎನ್ನಲಾಗಿದೆ. ಮನೆ ಕೆಲಸದವರು ಬಾಗಿಲು ಬಡಿದರೂ ತೆರೆದಿರಲಿಲ್ಲ. ಬಳಿಕ ಮನೆ ಕೆಲಸದ ಮಂದಿಗೆ ಕರೆ ಮಾಡಿ ತಿಳಿಸಿದ್ದರು. ಬಾಗಿಲು ಒಡೆದು ನೋಡಿದಾಗ, ಸೌಂದರ್ಯಾ ಆತ್ಮಹತ್ಯೆ ಮಾಡಿಕೊಂಡಿದ್ದರು.


ಕೆಲವು ಮಾಹಿತಿ ಪ್ರಕಾರ, ಪತಿ ಮತ್ತು ಪತ್ನಿಯ ನಡುವೆ ವಿರಸ ಇತ್ತು ಎನ್ನಲಾಗುತ್ತಿದೆ. ಯಡಿಯೂರಪ್ಪ ಕಿರಿಯ ಪುತ್ರಿ, ಪದ್ಮಾವತಿ ಅವರ ಮಗಳಾಗಿದ್ದ ಸೌಂದರ್ಯಾ ಎಂ.ಎಸ್. ರಾಮಯ್ಯ ಆಸ್ಪತ್ರೆಯಲ್ಲಿ ರೇಡಿಯೋಲಜಿಸ್ಟ್ ಕಲಿತು ವೈದ್ಯರಾಗಿದ್ದರು. ಮೊಮ್ಮಗಳ ಸಾವು ಯಡಿಯೂರಪ್ಪ ಕುಟುಂಬಕ್ಕೆ ಆಘಾತ ನೀಡಿದೆ. 2018 ರಲ್ಲಿ ಸೌಂದರ್ಯಾ ಮದುವೆಯಾಗಿದ್ದು ವರ್ಷದ ಹಿಂದಷ್ಟೇ ಮಗುವಿಗೆ ಜನ್ಮ ನೀಡಿದ್ದರು. ಮಗುವಾದ ಬಳಿಕ ದಂಪತಿ ನಡುವೆ ಕಲಹ ಏರ್ಪಟ್ಟಿತ್ತು ಎನ್ನಲಾಗಿದೆ. ಇಂದು ಬೆಳಗ್ಗೆ ಎಂಟು ಗಂಟೆಗೆ ಪತಿ ನೀರಜ್ ಎಂ.ಎಸ್ ರಾಮಯ್ಯ ಆಸ್ಪತ್ರೆಗೆ ಕರ್ತವ್ಯಕ್ಕೆ ತೆರಳಿದ್ದರು. ಆನಂತರ ಈ ಘಟನೆ ನಡೆದಿದೆ.
Former CM BS Yediyurappa Granddaughter Soundarya commits Suicide at her residence. Soundarya, in her early 30s, was a doctor at MS Ramaiah hospital in Bengaluru. According to the police, she was living with her husband, a fellow doctor, and a six-month-old child at an upscale apartment near Mount Carmel College.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am