ಬ್ರೇಕಿಂಗ್ ನ್ಯೂಸ್
28-01-22 09:38 pm HK Desk news ಕರ್ನಾಟಕ
ಬೆಂಗಳೂರು, ಜ.28 : ಕೆಎಂಎಫ್ ಹಾಗೂ ನಂದಿನಿ ತುಪ್ಪದ ಬ್ರಾಂಡಿನಲ್ಲಿ ನಕಲಿ ತುಪ್ಪ ತಯಾರಿಸಿ ಮಾರಾಟ ಮಾಡುತ್ತಿರುವ ಜಾಲವನ್ನು ಕೆಎಂಎಫ್ ಅಧಿಕಾರಿಗಳು ಬೆಂಗಳೂರು ನಗರದಲ್ಲಿ ಪತ್ತೆ ಮಾಡಿದ್ದು, ಪ್ರಕರಣ ದಾಖಲಿಸಿದ್ದಾರೆ.
ಮೈಸೂರಿನಲ್ಲಿ ನಕಲಿ ತುಪ್ಪ ತಯಾರಿಸಿ, ಬೆಂಗಳೂರು ಹಾಗೂ ಸುತ್ತಮುತ್ತ ಮಾರಾಟ ಮಾಡಲಾಗುತ್ತಿದೆ ಎಂಬುದನ್ನು ಅಧಿಕಾರಿಗಳು ಪತ್ತೆ ಮಾಡಿದ್ದಾರೆ. ನಂದಿನಿ ಬ್ರಾಂಡ್ ಹೆಸರಲ್ಲಿ ನಕಲಿ ತುಪ್ಪ ಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಪಡೆದ ಅಧಿಕಾರಿಗಳು ಬೆಂಗಳೂರಿನ ವಿವಿಧೆಡೆ ಏಕಕಾಲದಲ್ಲಿ ದಾಳಿ ನಡೆಸಿದ್ದರು. ಹನುಮಂತನಗರ, ಹೊಸನಗರ, ಮಾಕಳಿ, ಹೊಸಕೋಟೆ, ಜಯನಗರ, ನೆಲಮಂಗಲ, ಮಾಕಳಿ ಸೇರಿದಂತೆ ವಿವಿಧ ಕಡೆ ಅಧಿಕಾರಿಗಳು ಅಂಗಡಿಗಳಿಗೆ ದಾಳಿ ನಡೆಸಿದ್ದು, ನಕಲಿ ತುಪ್ಪವನ್ನು ವಶಕ್ಕೆ ಪಡೆದಿದ್ದಾರೆ.
ಅಂಗಡಿಗಳಲ್ಲಿ ಸಿಕ್ಕ ನಕಲಿ ತುಪ್ಪದ ಜಾಡು ಹಿಡಿದು ತುಪ್ಪದ ಗೋದಾಮುಗಳಿಗೂ ದಾಳಿ ನಡೆಸಿರುವ ಅಧಿಕಾರಿಗಳು ಭಾರೀ ಪ್ರಮಾಣದ ನಕಲಿ ಜಾಲವನ್ನು ಬಯಲಿಗೆಳೆದಿದ್ದಾರೆ. ನಂದಿನಿ ಹೆಸರಿನಲ್ಲಿರುವ ಒಂದು ಕೇಜಿ ಹಾಗೂ 15 ಕೇಜಿ ತೂಕದ ತುಪ್ಪದ ಟಿನ್ ಗಳನ್ನು ಪಡೆದು ಅದನ್ನು ಪ್ರಯೋಗಾಲಯಕ್ಕೆ ಪರೀಕ್ಷೆಗೆ ಕಳಿಸಿಕೊಡಲಾಗಿದೆ. ವಿವಿಧ ಮಾದರಿಯ ನಕಲಿ ತುಪ್ಪದ ಪ್ಯಾಕೆಟ್ ಗಳನ್ನು ವಶಕ್ಕೆ ಪಡೆದು ಕೆಎಂಎಫ್ ಪ್ರಯೋಗಾಲಯಕ್ಕೆ ಗುಣಮಟ್ಟದ ಪರಿಶೀಲನೆಗಾಗಿ ಕಳಿಸಲಾಗಿದೆ. ಈ ವೇಳೆ, ನಕಲಿಯಾಗಿರುವುದು ಕಂಡುಬಂದಿದ್ದು, ಕೆಎಂಎಫ್ ಮಾರ್ಕೆಟಿಂಗ್ ವಿಭಾಗದ ಬಿ.ಪಿ. ಸುರೇಶ್ ಪೊಲೀಸ್ ದೂರು ನೀಡಿದ್ದಾರೆ.
ದೂರಿನ ಹಿನ್ನೆಲೆಯಲ್ಲಿ ಬಸವನಗುಡಿ ಪೊಲೀಸರು ಕ್ರಿಮಿನಲ್ ಕೇಸು ದಾಖಲಿಸಿದ್ದು, ನಕಲಿ ತುಪ್ಪದ ಜಾಡು ಹಿಡಿದು ತನಿಖೆ ಆರಂಭಿಸಿದ್ದಾರೆ. ಅತಿ ಕಡಿಮೆ ದರದಲ್ಲಿ ಉತ್ತಮ ಗುಣಮಟ್ಟದ ನಂದಿನಿ ತುಪ್ಪವನ್ನು ನೀಡುತ್ತಿರುವ ಕೆಎಂಎಫ್ ಗೆ ಇದೀಗ ನಕಲಿ ತುಪ್ಪದ ಬಿಸಿ ತಟ್ಟಿದೆ.
Bangalore, A fake ghee (Ghee) case has been found in Bengaluru city after Mysore. Kmf(KMF) officials, who detected a fake ghee network in the city, said the fake ghee produced in Mysore was being sold in and around Bengaluru. Officials suspected of fake ghee in Bengaluru and kmf has formed several teams to find fake ghee. Therefore, officials have conducted inspections in several places including Bengaluru city.
13-05-24 09:17 pm
Bangalore Correspondent
parishad elections, JDS, BJP: ಪರಿಷತ್ ಚುನಾವಣೆ...
13-05-24 05:57 pm
Prajwal Revanna, Ticket Cancelled: ಪ್ರಜ್ವಲ್ ರ...
13-05-24 04:34 pm
Bangalore accident, Minor, Boy killed: ರಸ್ತೆಯ...
13-05-24 03:02 pm
Shivamogga Accident: ಶಿವಮೊಗ್ಗ ; ಆಟೋಗೆ ಡಿಕ್ಕಿ...
13-05-24 01:04 pm
13-05-24 07:56 pm
HK News Desk
ಬುರ್ಖಾ ಹಾಕೊಂಡು ಬಂದಿದ್ದ ಮುಸ್ಲಿಂ ಮತದಾರರಿಗೆ ನಿಮ...
13-05-24 03:53 pm
ಮದುವೆ ಆದ್ರು ಡಾಕ್ಟರ್ ಲೇಡಿಗೆ ತೀರದ ದಾಹ ; ಇಬ್ಬರು...
11-05-24 09:43 pm
Kareena Kapoor, Bible Book, court: “ಪ್ರೆಗ್ನೆನ...
11-05-24 03:13 pm
Ram Mandir, Nana Patole, Nrendra modi: ಮೋದಿಯಿ...
10-05-24 10:05 pm
13-05-24 10:15 pm
Mangalore Correspondent
Udupi former MLA Raghupati bhat quits BJP: ಬಂ...
13-05-24 07:27 pm
Ashok Rai, Puttur: ಚುನಾವಣೆ ನೀತಿ ಸಂಹಿತೆ ಉಲ್ಲಂಘ...
13-05-24 02:27 pm
Tv Serial Helmet Fine Police: ಟಿವಿ ಸೀರಿಯಲ್ನಲ್...
12-05-24 06:30 pm
ಕುಂದಾಪುರದ ಫೈನಾನ್ಶಿಯರ್ ಹತ್ಯೆ ಆರೋಪಿಗೆ ಹಿರಿಯಡ್ಕ...
12-05-24 05:41 pm
13-05-24 07:15 pm
Giridhar, Mangaluru Correspondent
Part time job, crime, online fraud: ಆನ್ಲೈನ್...
13-05-24 04:10 pm
Fake Currency Notes, Mangalore, Crime: ಕಾಸರಗೋ...
12-05-24 01:53 pm
Mangalore Crime, Sexual Assult: ಅನ್ಯಕೋಮಿನ ಬಾಲ...
11-05-24 10:18 pm
Bangalore Crime, Cyber, Roopa Iyer: ಸೆಲೆಬ್ರಿಟ...
10-05-24 05:04 pm