ಬ್ರೇಕಿಂಗ್ ನ್ಯೂಸ್
02-02-22 10:24 pm HK Desk news ಕರ್ನಾಟಕ
ಮೈಸೂರು, ಫೆ.2 : ಆಕ್ರಮ ಆಸ್ತಿ ಗಳಿಕೆ ಮತ್ತು ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಐಪಿಎಸ್ ಅಧಿಕಾರಿ ರವಿ ಚನ್ನಣ್ಣನವರ್ ಪ್ರಕರಣದಲ್ಲಿ ತನಿಖೆ ಕೈಗೊಳ್ಳಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.
ನಗರದ ಪೊಲೀಸ್ ಅಕಾಡೆಮಿ ಕವಾಯತು ಮೈದಾನದಲ್ಲಿ 45ನೇ ತಂಡದ ಪಿಎಸ್ಐ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥಸಂಚಲನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸುದ್ದಿಗಾರರ ಜೊತೆ ಮಾತನಾಡಿದರು. ಐಪಿಎಸ್ ಅಧಿಕಾರಿ ರವಿ ಚೆನ್ನಣ್ಣನವರ್ ಅವರಿಗೆ ವರ್ಗಾವಣೆ ಹಿಂಪಡೆದಿದ್ದು ಆಡಳಿತಾತ್ಮಕ ನಿರ್ಧಾರ ಎಂದು ಸ್ಪಷ್ಟನೆ ನೀಡಿದ ಸಚಿವರು, ಯಾರು ಯಾರ ಮೇಲೆ ಬೇಕಾದರೂ ಆರೋಪ ಮಾಡಬಹುದು. ಆದರೆ ಸತ್ಯಾಸತ್ಯತೆಯನ್ನು ತಿಳಿಯಲು ತನಿಖೆ ನಡೆಸಲಾಗುವುದು ಎಂದರು.

ಬಹಳಷ್ಟು ಮಂದಿ ಪೊಲೀಸ್ ಠಾಣೆಗಳು ಮರ್ಯಾದಸ್ಥರು ಹೋಗುವ ಸ್ಥಳವಲ್ಲ ಎನ್ನುತ್ತಾರೆ. ಆದರೆ ಇಲ್ಲಿ ಹಲವರು ಉನ್ನತ ಶಿಕ್ಷಣ ಪಡೆದವರಿದ್ದಾರೆ. ಈ ತರಬೇತಿ ನೀಡಿರುವುದು ಯಾರಿಗೂ ಹಿಂಸೆ ಕೊಡಲು ಅಲ್ಲ. ಇದು ಜನರ ರಕ್ಷಣೆಗೆ ನೀಡಿರುವ ತರಬೇತಿಯಾಗಿದೆ. ರಾಜ್ಯದಲ್ಲಿ ಸೈಬರ್ ವಿಂಗ್ (ಎಫ್ಎಸ್ಎಲ್) ವಿಭಾಗವನ್ನು ಬಲಪಡಿಸುತ್ತಿದ್ದೇವೆ. ಪ್ರತಿ ಜಿಲ್ಲೆಯಲ್ಲೂ ಎಫ್ಎಸ್ಎಲ್ ಲ್ಯಾಬ್ ಆರಂಭಿಸಲಿದ್ದೇವೆ, ಶಸ್ತ್ರಾಸ್ತ್ರ ಒದಗಿಸಲಿದ್ದೇವೆ ಎಂದರು.
ಸಾರ್ವಜನಿಕರನ್ನು ಬಂಧುಗಳಂತೆ ನೋಡಬೇಕು. ಕಾನೂನು ವಿರೋಧಿಸುವ ಕ್ರಿಮಿನಲ್ಗಳಿಗೆ ಭಯ ಹುಟ್ಟಿಸಬೇಕು. ನಾಗರಿಕರಿಗೆ ಸಜ್ಜನರಿಗೆ ಅಭಯವನ್ನು ನೀಡಬೇಕು. ಕೆಲವು ಪೊಲೀಸರು ಅನಿಷ್ಟತನ ನೋಡಿದಾಗ ಉತ್ತಮ ನಡವಳಿಕೆಯವರು ತಲೆ ತಗ್ಗಿಸಬೇಕಾಗಿದೆ. ಒಮ್ಮೆಯೂ ತಲೆ ತಗ್ಗಿಸುವ ಕೆಲಸ ಮಾಡಬಾರದು. ಯಾವುದೇ ಅಪಚಾರಗಳು ನಮ್ಮಿಂದ ಆಗಬಾರದು. ನಾವು ಅವರ ರಕ್ಷಕರಾಗಬೇಕು. ನಾವು ಯಾರ ಗುಲಾಮರಾಗಬಾರದು ಎಂದು ಹೇಳಿದರು.
Corruption allegation on Ravi D Channannavar, Home Minister says investigation is on after a Bangalore Based lawyer Jagadish exposed documents of properties acquired by Ips officer.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am