ಬ್ರೇಕಿಂಗ್ ನ್ಯೂಸ್
02-02-22 10:24 pm HK Desk news ಕರ್ನಾಟಕ
ಮೈಸೂರು, ಫೆ.2 : ಆಕ್ರಮ ಆಸ್ತಿ ಗಳಿಕೆ ಮತ್ತು ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಐಪಿಎಸ್ ಅಧಿಕಾರಿ ರವಿ ಚನ್ನಣ್ಣನವರ್ ಪ್ರಕರಣದಲ್ಲಿ ತನಿಖೆ ಕೈಗೊಳ್ಳಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.
ನಗರದ ಪೊಲೀಸ್ ಅಕಾಡೆಮಿ ಕವಾಯತು ಮೈದಾನದಲ್ಲಿ 45ನೇ ತಂಡದ ಪಿಎಸ್ಐ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥಸಂಚಲನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸುದ್ದಿಗಾರರ ಜೊತೆ ಮಾತನಾಡಿದರು. ಐಪಿಎಸ್ ಅಧಿಕಾರಿ ರವಿ ಚೆನ್ನಣ್ಣನವರ್ ಅವರಿಗೆ ವರ್ಗಾವಣೆ ಹಿಂಪಡೆದಿದ್ದು ಆಡಳಿತಾತ್ಮಕ ನಿರ್ಧಾರ ಎಂದು ಸ್ಪಷ್ಟನೆ ನೀಡಿದ ಸಚಿವರು, ಯಾರು ಯಾರ ಮೇಲೆ ಬೇಕಾದರೂ ಆರೋಪ ಮಾಡಬಹುದು. ಆದರೆ ಸತ್ಯಾಸತ್ಯತೆಯನ್ನು ತಿಳಿಯಲು ತನಿಖೆ ನಡೆಸಲಾಗುವುದು ಎಂದರು.

ಬಹಳಷ್ಟು ಮಂದಿ ಪೊಲೀಸ್ ಠಾಣೆಗಳು ಮರ್ಯಾದಸ್ಥರು ಹೋಗುವ ಸ್ಥಳವಲ್ಲ ಎನ್ನುತ್ತಾರೆ. ಆದರೆ ಇಲ್ಲಿ ಹಲವರು ಉನ್ನತ ಶಿಕ್ಷಣ ಪಡೆದವರಿದ್ದಾರೆ. ಈ ತರಬೇತಿ ನೀಡಿರುವುದು ಯಾರಿಗೂ ಹಿಂಸೆ ಕೊಡಲು ಅಲ್ಲ. ಇದು ಜನರ ರಕ್ಷಣೆಗೆ ನೀಡಿರುವ ತರಬೇತಿಯಾಗಿದೆ. ರಾಜ್ಯದಲ್ಲಿ ಸೈಬರ್ ವಿಂಗ್ (ಎಫ್ಎಸ್ಎಲ್) ವಿಭಾಗವನ್ನು ಬಲಪಡಿಸುತ್ತಿದ್ದೇವೆ. ಪ್ರತಿ ಜಿಲ್ಲೆಯಲ್ಲೂ ಎಫ್ಎಸ್ಎಲ್ ಲ್ಯಾಬ್ ಆರಂಭಿಸಲಿದ್ದೇವೆ, ಶಸ್ತ್ರಾಸ್ತ್ರ ಒದಗಿಸಲಿದ್ದೇವೆ ಎಂದರು.
ಸಾರ್ವಜನಿಕರನ್ನು ಬಂಧುಗಳಂತೆ ನೋಡಬೇಕು. ಕಾನೂನು ವಿರೋಧಿಸುವ ಕ್ರಿಮಿನಲ್ಗಳಿಗೆ ಭಯ ಹುಟ್ಟಿಸಬೇಕು. ನಾಗರಿಕರಿಗೆ ಸಜ್ಜನರಿಗೆ ಅಭಯವನ್ನು ನೀಡಬೇಕು. ಕೆಲವು ಪೊಲೀಸರು ಅನಿಷ್ಟತನ ನೋಡಿದಾಗ ಉತ್ತಮ ನಡವಳಿಕೆಯವರು ತಲೆ ತಗ್ಗಿಸಬೇಕಾಗಿದೆ. ಒಮ್ಮೆಯೂ ತಲೆ ತಗ್ಗಿಸುವ ಕೆಲಸ ಮಾಡಬಾರದು. ಯಾವುದೇ ಅಪಚಾರಗಳು ನಮ್ಮಿಂದ ಆಗಬಾರದು. ನಾವು ಅವರ ರಕ್ಷಕರಾಗಬೇಕು. ನಾವು ಯಾರ ಗುಲಾಮರಾಗಬಾರದು ಎಂದು ಹೇಳಿದರು.
Corruption allegation on Ravi D Channannavar, Home Minister says investigation is on after a Bangalore Based lawyer Jagadish exposed documents of properties acquired by Ips officer.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm