ಬ್ರೇಕಿಂಗ್ ನ್ಯೂಸ್
02-02-22 10:24 pm HK Desk news ಕರ್ನಾಟಕ
ಮೈಸೂರು, ಫೆ.2 : ಆಕ್ರಮ ಆಸ್ತಿ ಗಳಿಕೆ ಮತ್ತು ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಐಪಿಎಸ್ ಅಧಿಕಾರಿ ರವಿ ಚನ್ನಣ್ಣನವರ್ ಪ್ರಕರಣದಲ್ಲಿ ತನಿಖೆ ಕೈಗೊಳ್ಳಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.
ನಗರದ ಪೊಲೀಸ್ ಅಕಾಡೆಮಿ ಕವಾಯತು ಮೈದಾನದಲ್ಲಿ 45ನೇ ತಂಡದ ಪಿಎಸ್ಐ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥಸಂಚಲನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸುದ್ದಿಗಾರರ ಜೊತೆ ಮಾತನಾಡಿದರು. ಐಪಿಎಸ್ ಅಧಿಕಾರಿ ರವಿ ಚೆನ್ನಣ್ಣನವರ್ ಅವರಿಗೆ ವರ್ಗಾವಣೆ ಹಿಂಪಡೆದಿದ್ದು ಆಡಳಿತಾತ್ಮಕ ನಿರ್ಧಾರ ಎಂದು ಸ್ಪಷ್ಟನೆ ನೀಡಿದ ಸಚಿವರು, ಯಾರು ಯಾರ ಮೇಲೆ ಬೇಕಾದರೂ ಆರೋಪ ಮಾಡಬಹುದು. ಆದರೆ ಸತ್ಯಾಸತ್ಯತೆಯನ್ನು ತಿಳಿಯಲು ತನಿಖೆ ನಡೆಸಲಾಗುವುದು ಎಂದರು.

ಬಹಳಷ್ಟು ಮಂದಿ ಪೊಲೀಸ್ ಠಾಣೆಗಳು ಮರ್ಯಾದಸ್ಥರು ಹೋಗುವ ಸ್ಥಳವಲ್ಲ ಎನ್ನುತ್ತಾರೆ. ಆದರೆ ಇಲ್ಲಿ ಹಲವರು ಉನ್ನತ ಶಿಕ್ಷಣ ಪಡೆದವರಿದ್ದಾರೆ. ಈ ತರಬೇತಿ ನೀಡಿರುವುದು ಯಾರಿಗೂ ಹಿಂಸೆ ಕೊಡಲು ಅಲ್ಲ. ಇದು ಜನರ ರಕ್ಷಣೆಗೆ ನೀಡಿರುವ ತರಬೇತಿಯಾಗಿದೆ. ರಾಜ್ಯದಲ್ಲಿ ಸೈಬರ್ ವಿಂಗ್ (ಎಫ್ಎಸ್ಎಲ್) ವಿಭಾಗವನ್ನು ಬಲಪಡಿಸುತ್ತಿದ್ದೇವೆ. ಪ್ರತಿ ಜಿಲ್ಲೆಯಲ್ಲೂ ಎಫ್ಎಸ್ಎಲ್ ಲ್ಯಾಬ್ ಆರಂಭಿಸಲಿದ್ದೇವೆ, ಶಸ್ತ್ರಾಸ್ತ್ರ ಒದಗಿಸಲಿದ್ದೇವೆ ಎಂದರು.
ಸಾರ್ವಜನಿಕರನ್ನು ಬಂಧುಗಳಂತೆ ನೋಡಬೇಕು. ಕಾನೂನು ವಿರೋಧಿಸುವ ಕ್ರಿಮಿನಲ್ಗಳಿಗೆ ಭಯ ಹುಟ್ಟಿಸಬೇಕು. ನಾಗರಿಕರಿಗೆ ಸಜ್ಜನರಿಗೆ ಅಭಯವನ್ನು ನೀಡಬೇಕು. ಕೆಲವು ಪೊಲೀಸರು ಅನಿಷ್ಟತನ ನೋಡಿದಾಗ ಉತ್ತಮ ನಡವಳಿಕೆಯವರು ತಲೆ ತಗ್ಗಿಸಬೇಕಾಗಿದೆ. ಒಮ್ಮೆಯೂ ತಲೆ ತಗ್ಗಿಸುವ ಕೆಲಸ ಮಾಡಬಾರದು. ಯಾವುದೇ ಅಪಚಾರಗಳು ನಮ್ಮಿಂದ ಆಗಬಾರದು. ನಾವು ಅವರ ರಕ್ಷಕರಾಗಬೇಕು. ನಾವು ಯಾರ ಗುಲಾಮರಾಗಬಾರದು ಎಂದು ಹೇಳಿದರು.
Corruption allegation on Ravi D Channannavar, Home Minister says investigation is on after a Bangalore Based lawyer Jagadish exposed documents of properties acquired by Ips officer.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm