ಬ್ರೇಕಿಂಗ್ ನ್ಯೂಸ್
02-02-22 10:34 pm HK Desk news ಕರ್ನಾಟಕ
ಮೈಸೂರು, ಫೆ.2 : ಕಾಂಗ್ರೆಸ್ ಪಕ್ಷದಿಂದ ಒಂದು ಕಾಲು ಹೊರಗಿಟ್ಟಿರುವ ಹಿರಿಯ ನಾಯಕ ಸಿಎಂ ಇಬ್ರಾಹಿಂ, ಫೆ.14ರಂದು ಎಂಎಲ್ಸಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ. ಅಲ್ಲದೇ, ಅಂದೇ ಮುಂದಿನ ರಾಜಕೀಯ ನಿರ್ಧಾರವನ್ನು ಪ್ರಕಟಿಸುವುದಾಗಿ ಹೇಳಿದ್ದಾರೆ.
ಮೈಸೂರಿನಲ್ಲಿ ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿ.ಎಂ.ಇಬ್ರಾಹಿಂ, ನಾನು ಹೊಸ ಪಕ್ಷ ಕಟ್ಟೋದಿಲ್ಲ. ಜೆಡಿಎಸ್, ತೃಣಮೂಲ ಕಾಂಗ್ರೆಸ್, ಸಮಾಜವಾದಿ ಪಕ್ಷ ಈ ಮೂರು ಆಯ್ಕೆಗಳಿವೆ. ಜನಾಭಿಪ್ರಾಯ ಸಂಗ್ರಹಿಸಿ ಪಕ್ಷ ಆಯ್ಕೆ ಮಾಡಿಕೊಳ್ಳುತ್ತೇನೆ ಎಂದು ಹೇಳಿದರು.
ರಾಜ್ಯದಲ್ಲಿ ಕಾಂಗ್ರೆಸ್ ಮುಗಿದು ಹೋಗಿದೆ. ಮಂಚ, ಬೆಡ್ಡು, ದಿಂಬು ಯಾರಿಗೆ ಏನು ಬೇಕೋ ಅದನ್ನು ತೆಗೆದುಕೊಂಡು ಹೋಗುತ್ತಿದ್ದಾರೆ. ಮುಂದೆ ಕಾಂಗ್ರೆಸ್ ಅಧಿಕಾರಕ್ಕೆ ಬರೋದು ಕನಸಿನ ಮಾತು. ಮೂರನೇ ಸ್ಥಾನದಲ್ಲಿ ಕೂತಿರುತ್ತಾರೆ. ಸಿದ್ದರಾಮಯ್ಯ ಕಾಂಗ್ರೆಸ್ನಲ್ಲಿ ಅಸಹಾಯಕರಾಗುತ್ತಿದ್ದಾರೆ. ನಾನಂತೂ ಹೋರಾಟ ಶುರು ಮಾಡಿದ್ದೇನೆ. ಫೆಬ್ರವರಿ ಅಂತ್ಯಕ್ಕೆ ದಾವಣಗೆರೆ ಅಥವಾ ಮುಂಬೈ ಕರ್ನಾಟಕದಲ್ಲಿ ಅಲಿಂಗೌ ಸಮಾವೇಶ ಮಾಡುತ್ತೇವೆ. ಎಲ್ಲರನ್ನೂ ಒಗ್ಗೂಡಿಸಿಕೊಳ್ಳುವ ನಿಟ್ಟಿನಲ್ಲಿ ಪ್ರಯತ್ನ ಮಾಡುತ್ತಿದ್ದೇನೆ. ಈಗಾಗಲೇ ಸುತ್ತೂರು ಸ್ವಾಮೀಜಿ, ವಿ.ಶ್ರೀನಿವಾಸ ಪ್ರಸಾದ್, ಅಡಗೂರು ಎಚ್.ವಿಶ್ವನಾಥ್ ಅವರನ್ನು ಭೇಟಿ ಆಗುತ್ತೇನೆ ಎಂದು ಸಿಎಂ ಇಬ್ರಾಹಿಂ ಹೇಳಿದ್ದಾರೆ.
ಅಲ್ಪಸಂಖ್ಯಾತರ ಕಣ್ಣಿಗೆ ಮಣ್ಣೆರಚಲು ಖಾದರ್ ಸ್ಥಾನ
ವಿಧಾನ ಪರಿಷತ್ತಿನ ಸದಸ್ಯರು ಸೇರಿ ಸಭಾ ನಾಯಕರನ್ನು ಆಯ್ಕೆ ಮಾಡಬೇಕಿತ್ತು. 22 ಕಾಂಗ್ರೆಸ್ ಸದಸ್ಯರ ಪೈಕಿ 19 ಎಂಎಲ್ಸಿಗಳು ನನ್ನ ಪರ ಇದ್ದಾರೆ. ಹೀಗಿದ್ದರೂ ನನ್ನನ್ನು ಆಯ್ಕೆ ಮಾಡಲಿಲ್ಲ ಎಂದು ಬೇಸರ ತೋಡಿಕೊಂಡ ಎಂಎಲ್ಸಿ ಸಿ.ಎಂ.ಇಬ್ರಾಹಿಂ, ದೆಹಲಿಯಿಂದ ವೇಣುಗೋಪಾಲ್ ಮಾತನಾಡಿದ್ದರು. ಆದರೆ ಏಕಾಏಕಿ ಬದಲಾವಣೆ ಆಯ್ತು. ಚಾಮುಂಡೇಶ್ವರಿ ಉಪ ಚುನಾವಣೆಯಲ್ಲಿ ನಾನು ಪ್ರಾಣ ಒತ್ತೆ ಇಟ್ಟಿದ್ದೆ. 260 ವೋಟಲ್ಲಿ ಗೆದ್ರು. ನಾವು ಕೈಬಿಟ್ಟಿದ್ದರೆ ಮುಗಿದೇ ಹೋಗಿತ್ತು 2018ರಲ್ಲೂ ನಾನು ಚಾಮುಂಡೇಶ್ವರಿಯಲ್ಲಿ ನಿಲ್ಲಬೇಡಿ ಅಂದೆ. ಬಂದ ಜನ ಅಲ್ಲ, ತಂದ ಜನ. ಅವರಿಗೆ ಭಾಷಣ ಮಾಡಿ ಪ್ರಯೋಜನ ಇಲ್ಲ ಅಂದೆ. ನನ್ನ ಮಾತಿನಂತೆ ಚಾಮುಂಡೇಶ್ವರಿಯಲ್ಲಿ ಸೋತರು. ನಿಮಗಾಗಿ ದೇವೇಗೌಡರನ್ನು ಬಿಟ್ಟು ಬಂದೆ ಎಂದು ಹಳೆಯದನ್ನು ಮೆಲುಕು ಹಾಕಿದರು. ಇದಲ್ಲದೆ, ಅಲ್ಪಸಂಖ್ಯಾತರ ಕಣ್ಣಿಗೆ ಮಣ್ಣು ಎರಚಲು ಯು.ಟಿ.ಖಾದರ್ನನ್ನು ಉಪನಾಯಕ ಮಾಡಿದ್ದೀರಿ ಎಂದು ಸಿದ್ದರಾಮಯ್ಯ ವಿರುದ್ಧ ಇಬ್ರಾಹಿಂ ಆಕ್ರೋಶ ವ್ಯಕ್ತಪಡಿಸಿದರು.
Mysuru Resignation from party on Feb 14th Valentines day says CM Ibrahim. People will know which party I am going to join on lovers day he added.
13-05-24 09:17 pm
Bangalore Correspondent
parishad elections, JDS, BJP: ಪರಿಷತ್ ಚುನಾವಣೆ...
13-05-24 05:57 pm
Prajwal Revanna, Ticket Cancelled: ಪ್ರಜ್ವಲ್ ರ...
13-05-24 04:34 pm
Bangalore accident, Minor, Boy killed: ರಸ್ತೆಯ...
13-05-24 03:02 pm
Shivamogga Accident: ಶಿವಮೊಗ್ಗ ; ಆಟೋಗೆ ಡಿಕ್ಕಿ...
13-05-24 01:04 pm
14-05-24 11:47 am
HK News Desk
ವಾರಾಣಸಿಯಲ್ಲಿ 6 ಕಿಲೋ ಮೀಟರ್ ದೂರದವರೆಗೂ ಮೋದಿ ಅದ್...
13-05-24 07:56 pm
ಬುರ್ಖಾ ಹಾಕೊಂಡು ಬಂದಿದ್ದ ಮುಸ್ಲಿಂ ಮತದಾರರಿಗೆ ನಿಮ...
13-05-24 03:53 pm
ಮದುವೆ ಆದ್ರು ಡಾಕ್ಟರ್ ಲೇಡಿಗೆ ತೀರದ ದಾಹ ; ಇಬ್ಬರು...
11-05-24 09:43 pm
Kareena Kapoor, Bible Book, court: “ಪ್ರೆಗ್ನೆನ...
11-05-24 03:13 pm
13-05-24 10:15 pm
Mangalore Correspondent
Udupi former MLA Raghupati bhat quits BJP: ಬಂ...
13-05-24 07:27 pm
Ashok Rai, Puttur: ಚುನಾವಣೆ ನೀತಿ ಸಂಹಿತೆ ಉಲ್ಲಂಘ...
13-05-24 02:27 pm
Tv Serial Helmet Fine Police: ಟಿವಿ ಸೀರಿಯಲ್ನಲ್...
12-05-24 06:30 pm
ಕುಂದಾಪುರದ ಫೈನಾನ್ಶಿಯರ್ ಹತ್ಯೆ ಆರೋಪಿಗೆ ಹಿರಿಯಡ್ಕ...
12-05-24 05:41 pm
13-05-24 07:15 pm
Giridhar, Mangaluru Correspondent
Part time job, crime, online fraud: ಆನ್ಲೈನ್...
13-05-24 04:10 pm
Fake Currency Notes, Mangalore, Crime: ಕಾಸರಗೋ...
12-05-24 01:53 pm
Mangalore Crime, Sexual Assult: ಅನ್ಯಕೋಮಿನ ಬಾಲ...
11-05-24 10:18 pm
Bangalore Crime, Cyber, Roopa Iyer: ಸೆಲೆಬ್ರಿಟ...
10-05-24 05:04 pm