ಬ್ರೇಕಿಂಗ್ ನ್ಯೂಸ್
04-02-22 07:26 pm HK Desk news ಕರ್ನಾಟಕ
ಬೆಂಗಳೂರು, ಫೆ.4 : ರಾಜ್ಯದಲ್ಲಿ ಕೊರೊನಾ ಸೋಂಕಿನ ತೀವ್ರತೆ ಕಡಿಮೆಯಾಗಿರುವುದರಿಂದ ಕೆಲವು ನಿರ್ಬಂಧಗಳನ್ನು ತೆರವುಗೊಳಿಸಲಾಗಿದೆ. ಇಂದು ಸಿಎಂ ಬಸವರಾಜ್ ಬೊಮ್ಮಾಯಿ, ತಜ್ಞರು ಮತ್ತು ಹಿರಿಯ ಸಚಿವರ ಜೊತೆ ಸಭೆ ನಡೆಸಿ ಈ ನಿರ್ಧಾರಕ್ಕೆ ಬಂದಿದ್ದಾರೆ.
ಜಿಮ್, ಸಿನಿಮಾ, ಯೋಗ, ಸ್ವಿಮ್ಮಿಂಗ್ ಪೂಲ್ ಗಳಿಗೆ ನೀಡಲಾಗಿದ್ದ 50 ಶೇಕಡಾ ಸಾಮರ್ಥ್ಯ ಆದೇಶವನ್ನು ಹಿಂಪಡೆದಿದ್ದು, ಪೂರ್ಣಕಾಲಿಕವಾಗಿ ತೆರೆಯಲು ಅವಕಾಶ ನೀಡಲಾಗಿದೆ. ಜನವರಿ 15ರಿಂದ ಕೆಲವು ನಿರ್ಬಂಧಗಳನ್ನು ತೆರವುಗೊಳಿಸಲಾಗಿತ್ತು. ಇದೀಗ ಮತ್ತಷ್ಟು ನಿರ್ಬಂಧ ತೆರವುಗೊಳಿಸಿ, ಮುಕ್ತ ಅವಕಾಶ ನೀಡಲಾಗಿದೆ ಎಂದು ಸಭೆಯ ಬಳಿಕ ಆರೋಗ್ಯ ಸಚಿವ ಸುಧಾಕರ್ ಮಾಹಿತಿ ನೀಡಿದ್ದಾರೆ.

ಡಿಸೆಂಬರ್ ಕೊನೆ ವಾರದಲ್ಲಿ ಓಮಿಕ್ರಾನ್ ಸೋಂಕು ಹೆಚ್ಚಿತ್ತು. ಹಾಗಾಗಿ ಕೆಲವು ಕ್ಷೇತ್ರಗಳಲ್ಲಿ ಕಠಿಣ ನಿರ್ಬಂಧಗಳನ್ನು ಹಾಕಲಾಗಿತ್ತು. ಜನವರಿ ಕೊನೆಯ ವೇಳೆಗೆ ಸೋಂಕಿನ ತೀವ್ರತೆ ಕಡಿಮೆಯಾಗಿದೆ. ಜನವರಿಯಲ್ಲಿ 5ರಿಂದ 6 ಪರ್ಸೆಂಟ್ ಜನ ಅಷ್ಟೇ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದೀಗ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಎರಡು ಶೇಕಡಾಕ್ಕೆ ಇಳಿದಿದೆ. ಕೋವಿಡ್ ನಿರ್ಬಂಧದಿಂದ ಸಿನಿಮಾ ರಂಗಕ್ಕೆ ದೊಡ್ಡ ನಷ್ಟವಾಗಿತ್ತು. ಹೀಗಾಗಿ ಅವರಿಗೆ ಪೂರಕವಾಗಿ ಕ್ರಮ ತೆಗೆದುಕೊಂಡಿದ್ದೇವೆ. ನಾಳೆಯಿಂದಲೇ 100 ಶೇಕಡಾ ಭರ್ತಿ ಮಾಡಲು ಅವಕಾಶ ನೀಡಲಾಗಿದೆ ಎಂದು ಸುಧಾಕರ್ ಹೇಳಿದ್ದಾರೆ.

ಹಾಗೆಂದು ಯಾರು ಕೂಡ ಮೈಮರೆಯುವುದಲ್ಲ. ಮಾಸ್ಕ್, ಸಾಮಾಜಿಕ ಅಂತರ ಕಡ್ಡಾಯ ಇರುತ್ತದೆ. ಥಿಯೇಟರ್ ಒಳಗೆ ತಿಂಡಿ, ಪದಾರ್ಥ ಒಯ್ಯುವುದಕ್ಕೆ ಅವಕಾಶ ಇಲ್ಲ. ಎರಡು ಡೋಸ್ ಲಸಿಕೆ ಪಡೆದವರಿಗಷ್ಟೇ ಜಿಮ್, ಥಿಯೇಟರ್, ಸ್ವಿಮ್ಮಿಂಗ್ ಪೂಲ್ ಗಳಲ್ಲಿ ಅವಕಾಶ ನೀಡಲು ಮಾರ್ಗಸೂಚಿ ನೀಡಲಾಗುವುದು ಎಂದು ಹೇಳಿದ ಸುಧಾಕರ್, ಕೊರೊನಾ ಜೊತೆಗೆ ನಾವು ಬದುಕ ಬೇಕಾಗಿದೆ. ಅದಕ್ಕಾಗಿ ಕಠಿಣ ಕ್ರಮಗಳನ್ನು ಮುಂದುವರಿಸುತ್ತಿದ್ದೇವೆ. ಆದರೆ ಮದುವೆ, ಸಮಾರಂಭ, ಪ್ರತಿಭಟನೆಗಳಿಗೆ ಇರುವ ನಿಯಮ ಮುಂದುವರಿಯುತ್ತದೆ. ಮೂರನೇ ಅಲೆಯ ತೀವ್ರ ಕಡಿಮೆಯಾಗಿರುವುದರಿಂದ ಸಡಿಲಿಕೆ ಮಾಡಲಾಗಿದೆ ಎಂದು ಹೇಳಿದರು.
Further relaxing COVID-19 curbs, the Karnataka government on Friday decided to allow theatres, gyms, yoga centres and swimming pools in the state to operate at full capacity. The decision was taken at a meeting chaired by Chief Minister Basavaraj Bommai with the Health Minister, senior officials and technical advisory committee representatives.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am