ಬ್ರೇಕಿಂಗ್ ನ್ಯೂಸ್
04-02-22 07:26 pm HK Desk news ಕರ್ನಾಟಕ
ಬೆಂಗಳೂರು, ಫೆ.4 : ರಾಜ್ಯದಲ್ಲಿ ಕೊರೊನಾ ಸೋಂಕಿನ ತೀವ್ರತೆ ಕಡಿಮೆಯಾಗಿರುವುದರಿಂದ ಕೆಲವು ನಿರ್ಬಂಧಗಳನ್ನು ತೆರವುಗೊಳಿಸಲಾಗಿದೆ. ಇಂದು ಸಿಎಂ ಬಸವರಾಜ್ ಬೊಮ್ಮಾಯಿ, ತಜ್ಞರು ಮತ್ತು ಹಿರಿಯ ಸಚಿವರ ಜೊತೆ ಸಭೆ ನಡೆಸಿ ಈ ನಿರ್ಧಾರಕ್ಕೆ ಬಂದಿದ್ದಾರೆ.
ಜಿಮ್, ಸಿನಿಮಾ, ಯೋಗ, ಸ್ವಿಮ್ಮಿಂಗ್ ಪೂಲ್ ಗಳಿಗೆ ನೀಡಲಾಗಿದ್ದ 50 ಶೇಕಡಾ ಸಾಮರ್ಥ್ಯ ಆದೇಶವನ್ನು ಹಿಂಪಡೆದಿದ್ದು, ಪೂರ್ಣಕಾಲಿಕವಾಗಿ ತೆರೆಯಲು ಅವಕಾಶ ನೀಡಲಾಗಿದೆ. ಜನವರಿ 15ರಿಂದ ಕೆಲವು ನಿರ್ಬಂಧಗಳನ್ನು ತೆರವುಗೊಳಿಸಲಾಗಿತ್ತು. ಇದೀಗ ಮತ್ತಷ್ಟು ನಿರ್ಬಂಧ ತೆರವುಗೊಳಿಸಿ, ಮುಕ್ತ ಅವಕಾಶ ನೀಡಲಾಗಿದೆ ಎಂದು ಸಭೆಯ ಬಳಿಕ ಆರೋಗ್ಯ ಸಚಿವ ಸುಧಾಕರ್ ಮಾಹಿತಿ ನೀಡಿದ್ದಾರೆ.

ಡಿಸೆಂಬರ್ ಕೊನೆ ವಾರದಲ್ಲಿ ಓಮಿಕ್ರಾನ್ ಸೋಂಕು ಹೆಚ್ಚಿತ್ತು. ಹಾಗಾಗಿ ಕೆಲವು ಕ್ಷೇತ್ರಗಳಲ್ಲಿ ಕಠಿಣ ನಿರ್ಬಂಧಗಳನ್ನು ಹಾಕಲಾಗಿತ್ತು. ಜನವರಿ ಕೊನೆಯ ವೇಳೆಗೆ ಸೋಂಕಿನ ತೀವ್ರತೆ ಕಡಿಮೆಯಾಗಿದೆ. ಜನವರಿಯಲ್ಲಿ 5ರಿಂದ 6 ಪರ್ಸೆಂಟ್ ಜನ ಅಷ್ಟೇ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದೀಗ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಎರಡು ಶೇಕಡಾಕ್ಕೆ ಇಳಿದಿದೆ. ಕೋವಿಡ್ ನಿರ್ಬಂಧದಿಂದ ಸಿನಿಮಾ ರಂಗಕ್ಕೆ ದೊಡ್ಡ ನಷ್ಟವಾಗಿತ್ತು. ಹೀಗಾಗಿ ಅವರಿಗೆ ಪೂರಕವಾಗಿ ಕ್ರಮ ತೆಗೆದುಕೊಂಡಿದ್ದೇವೆ. ನಾಳೆಯಿಂದಲೇ 100 ಶೇಕಡಾ ಭರ್ತಿ ಮಾಡಲು ಅವಕಾಶ ನೀಡಲಾಗಿದೆ ಎಂದು ಸುಧಾಕರ್ ಹೇಳಿದ್ದಾರೆ.

ಹಾಗೆಂದು ಯಾರು ಕೂಡ ಮೈಮರೆಯುವುದಲ್ಲ. ಮಾಸ್ಕ್, ಸಾಮಾಜಿಕ ಅಂತರ ಕಡ್ಡಾಯ ಇರುತ್ತದೆ. ಥಿಯೇಟರ್ ಒಳಗೆ ತಿಂಡಿ, ಪದಾರ್ಥ ಒಯ್ಯುವುದಕ್ಕೆ ಅವಕಾಶ ಇಲ್ಲ. ಎರಡು ಡೋಸ್ ಲಸಿಕೆ ಪಡೆದವರಿಗಷ್ಟೇ ಜಿಮ್, ಥಿಯೇಟರ್, ಸ್ವಿಮ್ಮಿಂಗ್ ಪೂಲ್ ಗಳಲ್ಲಿ ಅವಕಾಶ ನೀಡಲು ಮಾರ್ಗಸೂಚಿ ನೀಡಲಾಗುವುದು ಎಂದು ಹೇಳಿದ ಸುಧಾಕರ್, ಕೊರೊನಾ ಜೊತೆಗೆ ನಾವು ಬದುಕ ಬೇಕಾಗಿದೆ. ಅದಕ್ಕಾಗಿ ಕಠಿಣ ಕ್ರಮಗಳನ್ನು ಮುಂದುವರಿಸುತ್ತಿದ್ದೇವೆ. ಆದರೆ ಮದುವೆ, ಸಮಾರಂಭ, ಪ್ರತಿಭಟನೆಗಳಿಗೆ ಇರುವ ನಿಯಮ ಮುಂದುವರಿಯುತ್ತದೆ. ಮೂರನೇ ಅಲೆಯ ತೀವ್ರ ಕಡಿಮೆಯಾಗಿರುವುದರಿಂದ ಸಡಿಲಿಕೆ ಮಾಡಲಾಗಿದೆ ಎಂದು ಹೇಳಿದರು.
Further relaxing COVID-19 curbs, the Karnataka government on Friday decided to allow theatres, gyms, yoga centres and swimming pools in the state to operate at full capacity. The decision was taken at a meeting chaired by Chief Minister Basavaraj Bommai with the Health Minister, senior officials and technical advisory committee representatives.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm