ಬ್ರೇಕಿಂಗ್ ನ್ಯೂಸ್
05-02-22 02:21 pm HK Desk news ಕರ್ನಾಟಕ
ಮೈಸೂರು, ಫೆ.5 : ಕರಾವಳಿ ಭಾಗದಲ್ಲಿ ಹಿಜಾಬ್ ವಿವಾದ ಕಿಡಿ ಹೊತ್ತಿಸಿರುವ ಹಿನ್ನೆಲೆಯಲ್ಲಿ ಹಿರಿಯ ಕಾಂಗ್ರೆಸ್ ಮುಖಂಡ ತನ್ವೀರ್ ಸೇಠ್, ಮುಖ್ಯಮಂತ್ರಿ ಮತ್ತು ಶಿಕ್ಷಣ ಸಚಿವರಿಗೆ ಪತ್ರ ಬರೆದಿದ್ದು ಪರಿಸ್ಥಿತಿ ಕೈಮೀರುವ ಮುನ್ನ ಎಚ್ಚತ್ತುಕೊಳ್ಳಿ ಎಂದು ಹೇಳಿದ್ದಾರೆ.
ಹಿಜಾಬ್ ಧರಿಸಿದ ವಿದ್ಯಾರ್ಥಿಗಳಿಗೆ ನಿರ್ಬಂಧ ವಿಧಿಸಿರುವ ಪ್ರಾಂಶುಪಾಲರ ನಡೆ ಆಕ್ಷೇಪಾರ್ಹ. ಇಸ್ಲಾಂನಲ್ಲಿ ಹೆಣ್ಣು ಮಕ್ಕಳು ಹಿಜಾಬ್ ಧರಿಸುವುದು, ಸಿಖ್ ಸಮುದಾಯದಲ್ಲಿ ಪೇಟ ಧರಿಸುವುದು, ಕ್ರೈಸ್ತರಲ್ಲಿ ದೀಕ್ಷೆ ಪಡೆದು ಸ್ಕರ್ಟ್ ಧರಿಸುವುದು ಅನಾದಿ ಕಾಲದ ಸಂಪ್ರದಾಯ. ಇದಕ್ಕೆ ಇಲ್ಲಿಯವರೆಗೂ ಯಾವುದೇ ತಡೆ, ನಿಷೇಧ ಹೇರಿಲ್ಲ. ನಾನು ಶಿಕ್ಷಣ ಸಚಿವನಾಗಿದ್ದಾಗ ಹೆಣ್ಣು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆಯಲು ಸ್ಕರ್ಟ್ & ಶರ್ಟ್ ಸಮವಸ್ತ್ರದ ಬದಲಿಗೆ ಚೂಡಿದಾರ್ ಸಮವಸ್ತ್ರವನ್ನ ಜಾರಿಗೊಳಿಸಿದ್ದೆ.

ಪ್ರತಿಯೊಂದು ಧರ್ಮದಲ್ಲೂ ವಯಸ್ಸಿಗನುಗುಣವಾಗಿ ವಸ್ತ್ರ ಧರಿಸುವುದು ಸರ್ವೇ ಸಾಮಾನ್ಯ. ಹೆಣ್ಣು ಮಕ್ಕಳ ರಕ್ಷಣೆ ಮತ್ತು ಶಿಕ್ಷಣ ಸರ್ಕಾರದ ಕರ್ತವ್ಯ. ಉಡುಪಿ ಕಾಲೇಜಿನ ಪ್ರಾಂಶುಪಾಲರ ನಡೆ ಮಕ್ಕಳಲ್ಲಿ ಜಾತಿ ಭೇ಼ದ ಹುಟ್ಟು ಹಾಕುತ್ತಿದೆ. ಇದು ಆತಂಕಕಾರಿ, ಸಮಾಜಕ್ಕೆ ಮಾರಕ. ಪರಿಸ್ಥಿತಿ ಕೈ ಮೀರುವ ಮುನ್ನ ಸರ್ಕಾರ ಆ ಪ್ರಾಂಶುಪಾಲರಿಗೆ ಸೂಕ್ತ ನಿರ್ದೇಶನ ನೀಡಿ ವಿವಾದಕ್ಕೆ ತೆರೆ ಎಳೆಯಬೇಕು ಎಂದು ಪತ್ರದಲ್ಲಿ ಆಗ್ರಹಿಸಿದ್ದಾರೆ. ಹಿಜಾಬ್ ವಿವಾದ ಇಡೀ ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಕ್ಕೆ ಈ ಬಗ್ಗೆ ಪತ್ರ ಬರೆದು ಕಾಂಗ್ರೆಸ್ ಶಾಸಕ ತನ್ವೀರ್ಸೇಠ್ ಎಚ್ಚರಿಕೆ ನೀಡಿದ್ದಾರೆ.
Tanveer Sait writes letter to State Government to awake before things get worse on Hijab row in Karnataka.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm