ಬ್ರೇಕಿಂಗ್ ನ್ಯೂಸ್
05-02-22 09:56 pm HK Desk news ಕರ್ನಾಟಕ
ಬೆಂಗಳೂರು, ಫೆ.5 : ಹಿಜಾಬ್- ಕೇಸರಿ ಶಾಲು ಹಿಡಿದು ಜಗ್ಗಾಟದಲ್ಲಿ ತೊಡಗಿರುವ ಮಂದಿಗೆ ರಾಜ್ಯ ಸರಕಾರ ಕೊನೆಗೂ ದಂಡ ಬೀಸಿದೆ. ರಾಜ್ಯದ ಎಲ್ಲ ಸರಕಾರಿ ಶಾಲೆಗಳಲ್ಲಿ ಕೇಸರಿಯಾಗಲೀ, ಹಿಜಾಬ್ ಆಗಲೀ ಯಾವುದೇ ಧಾರ್ಮಿಕ ಸಂಕೇತಗಳ ಬಟ್ಟೆಗಳನ್ನು ಹಾಕುವುದನ್ನು ನಿಷೇಧಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಅಲ್ಲದೆ, ಖಾಸಗಿ ಕಾಲೇಜುಗಳಲ್ಲಿ ಆಯಾ ಆಡಳಿತ ಮಂಡಳಿಗಳೇ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಬೇಕು. ಸಮವಸ್ತ್ರ ಕಡ್ಡಾಯ ಮಾಡುವುದು ಅಥವಾ ಇನ್ನಿತರ ಬಟ್ಟೆಗಳನ್ನು ಧರಿಸುವುದಕ್ಕೆ ಅವಕಾಶ ನೀಡುವುದು ಆಯಾ ಕಾಲೇಜಿಗೆ ಬಿಟ್ಟ ವಿಚಾರ. ಆದರೆ ಸಾಮರಸ್ಯ ಕದಡುವ ರೀತಿಯ ಯಾವುದೇ ಆಚರಣೆಗೂ ಅವಕಾಶ ನೀಡಬಾರದು ಎಂದು ರಾಜ್ಯ ಸರಕಾರ ಆದೇಶದಲ್ಲಿ ತಿಳಿಸಿದೆ.
1983ರ ಶಿಕ್ಷಣ ಕಾಯ್ದೆ ಉಪ ಕಲಂ 133-2 ಆಧರಿಸಿ ರಾಜ್ಯ ಸರಕಾರದ ಅಧೀನ ಕಾರ್ಯದರ್ಶಿ ಆ ಬಗ್ಗೆ ಆದೇಶ ಮಾಡಿದ್ದಾರೆ. ಇದರಂತೆ, ಶಾಲೆ, ಕಾಲೇಜುಗಳಲ್ಲಿ ಸಮವಸ್ತ್ರ ಕಡ್ಡಾಯ ಮಾಡಲು ಅವಕಾಶ ಇದೆ. ಅಲ್ಲದೆ, ಖಾಸಗಿ ಕಾಲೇಜುಗಳಲ್ಲಿ ತಮ್ಮದೇ ಸಮವಸ್ತ್ರ ಅಳವಡಿಸಲು ಈ ಕಾಯ್ದೆಯಲ್ಲಿ ಅವಕಾಶ ಇದೆ ಎಂದು ತಿಳಿಸಿದ್ದಾರೆ. ಕಾಲೇಜಿನ ಆಡಳಿತ ಮಂಡಳಿಗಳು ಸಮವಸ್ತ್ರದ ಬಗ್ಗೆ ನಿರ್ಧಾರಕ್ಕೆ ಬರದೇ ಇದ್ದರೆ, ಅಲ್ಲಿ ಯಾವುದೇ ರೀತಿಯ ಕಾನೂನು ಸುವ್ಯವಸ್ಥೆ ಮತ್ತು ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆ ಬರದಂತೆ ನೋಡಿಕೊಳ್ಳಬೇಕು. ಯಾವುದೇ ಬಟ್ಟೆಯ ಧಾರಣೆಯಿಂದ ಕಾಲೇಜಿನಲ್ಲಿ ಸಾಮರಸ್ಯಕ್ಕೆ ಸಮಸ್ಯೆ ಆಗಬಾರದು ಎಂದು ಆದೇಶದಲ್ಲಿ ತಿಳಿಸಿದ್ದಾರೆ.
ಕಳೆದ ಜನವರಿಯಿಂದ ಉಡುಪಿಯ ಸರಕಾರಿ ಪಿಯು ಕಾಲೇಜಿನಲ್ಲಿ ಹಿಜಾಬ್ ವಿಚಾರದ ಕಿಡಿ ಹೊತ್ತಿಕೊಂಡಿತ್ತು. ಸಮವಸ್ತ್ರದ ಮೇಲ್ಗಡೆ ಹಿಜಾಬ್ ಧರಿಸಿ ಬಂದಿದ್ದ ವಿದ್ಯಾರ್ಥಿನಿಯರು ತಮಗೆ ಅವಕಾಶ ನೀಡಬೇಕೆಂದು ವಿವಾದ ಎಬ್ಬಿಸಿದ್ದರು. ಆದರೆ, ಅಲ್ಲಿನ ಕಾಲೇಜಿನ ಆಡಳಿತ ಮಂಡಳಿ ಅದಕ್ಕೆ ಅವಕಾಶ ನೀಡಿರಲಿಲ್ಲ. ಆನಂತರ, ಉಡುಪಿಯ ಬಳಿಕ ಕುಂದಾಪುರದಲ್ಲೂ ಕಿಡಿ ಹೊತ್ತಿಕೊಂಡಿತ್ತು.
ಹಿಂದು ಯುವಕರು ಕೇಸರಿ ಶಾಲು ಧರಿಸಿ ಹಿಜಾಬ್ ಆಚರಣೆಗೆ ಕೌಂಟರ್ ನೀಡಿದ್ದರು. ಇದೀಗ ರಾಜ್ಯದ ಹಲವೆಡೆ ಇದೇ ರೀತಿಯ ವಿವಾದ ಹೊತ್ತಿಕೊಂಡಿದೆ. ರಾಜ್ಯ ಸರಕಾರ ಈ ಬಗ್ಗೆ ಖಚಿತ ಆದೇಶ ನೀಡಿರುವುದರಿಂದ ಸೋಮವಾರದ ಬಳಿಕ ಹಿಜಾಬ್ ಮತ್ತು ಕೇಸರಿ ಶಾಲಿನ ವಿವಾದಕ್ಕೆ ಬ್ರೇಕ್ ಬೀಳುವ ಸಾಧ್ಯತೆಯಿದೆ.
Amid the ongoing hijab row, the Karnataka government on Saturday banned clothes that disturb harmony, public order. Karnataka high court will hear the plea filed by the five girls of the Udupi College on February 8.
17-07-25 07:45 pm
Bangalore Correspondent
Dharmasthala News, SIT: ಧರ್ಮಸ್ಥಳ ಪ್ರಕರಣದಲ್ಲಿ...
17-07-25 04:50 pm
CM Siddaramaiah, Janardhan Reddy; ನವೆಂಬರ್ ಒಳಗ...
16-07-25 09:36 pm
ಕೋವಿಡ್ ಮುಗಿದರೂ, ಅದರ ಪರಿಣಾಮ ನಿಂತಿಲ್ಲ..! ನರಮಂಡಲ...
16-07-25 07:05 pm
BESCOM, Cybercrime, Digital Arrest: ಡಿಜಿಟಲ್ ಅ...
16-07-25 03:58 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
17-07-25 06:30 pm
Mangalore Correspondent
Wild Elephant Attack, Dharmasthala: ಧರ್ಮಸ್ಥಳ...
17-07-25 04:14 pm
Minister Priyank Kharge, Drug Trafficking: ಡ್...
17-07-25 01:51 pm
Mangalore Rain, Landslide, Maryhill: ಭಾರೀ ಮಳೆ...
17-07-25 01:34 pm
Wizdom Education, Guruvandana, Mangalore: ಮಂಗ...
17-07-25 01:26 pm
17-07-25 10:42 pm
Mangalore Correspondent
Uppinangady Murder: ಕೌಟುಂಬಿಕ ಕಲಹ ; ಮಾತಿಗೆ ಮಾತ...
17-07-25 02:30 pm
Cyber Crime Tumkur, Facebook, Mangalore Polic...
16-07-25 11:04 pm
Mangalore Crime, Konaje Murder: ಒಂಟಿ ಮಹಿಳೆಯ ಅ...
16-07-25 09:48 pm
Sexual Harassment Odisha News; ಪ್ರಾಧ್ಯಾಪಕನಿಂದ...
16-07-25 04:37 pm