ಬ್ರೇಕಿಂಗ್ ನ್ಯೂಸ್
17-09-20 09:59 pm Headline Karnataka News Network ಕರ್ನಾಟಕ
ಬೆಂಗಳೂರು, ಸೆ.17: ರಾಜ್ಯದಲ್ಲಿ ಮತ್ತೆ 9,366 ಮಂದಿ ಪೀಡಿತರಾಗಿರುವುದು ಗುರುವಾರ ದೃಢಪಟ್ಟಿದೆ. ಇದರಿಂದಾಗಿ ಸೋಂಕಿತರ ಸಂಖ್ಯೆ 5 ಲಕ್ಷದತ್ತ (4.94 ಲಕ್ಷ)ದಾಪುಗಾಲು ಇರಿಸಿದೆ.
ರಾಜ್ಯದಲ್ಲಿ ಮೊದಲ ಕೋವಿಡ್ ಪ್ರಕರಣ ಮಾ.8 ರಂದು ವರದಿಯಾಗಿತ್ತು. ಬಳಿಕ ಪ್ರಕರಣಗಳ ಸಂಖ್ಯೆ 1 ಲಕ್ಷದ ಗಡಿ ತಲುಪಲು 108 ದಿನ ಹಿಡಿದಿತ್ತು. ನಂತರದ ದಿನಗಳಲ್ಲಿ ಸೋಂಕಿತರ ಸಂಖ್ಯೆ ಏರುಗತಿ ಪಡೆದಿದ್ದರಿಂದ ಕೇವಲ 20 ದಿನಗಳಲ್ಲಿಯೇ ಮತ್ತೊಂದು ಲಕ್ಷ ಪ್ರಕರಣಗಳು ವರದಿಯಾಗಿದ್ದವು. ಅಂದರೆ, ಜುಲೈ 13ಕ್ಕೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 2 ಲಕ್ಷದ ಗಡಿ ದಾಟಿತ್ತು. ಆ.26ಕ್ಕೆ ಸೋಂಕಿತರ ಸಂಖ್ಯೆ 3 ಲಕ್ಷ ತಲುಪಿತ್ತು. ಬಳಿಕ 12 ದಿನಗಳಲ್ಲಿ ಮತ್ತೆ ಒಂದು ಲಕ್ಷ ಪ್ರಕರಣ ವರದಿಯಾಗಿ, ಸೋಂಕಿತರ ಸಂಖ್ಯೆ 4 ಲಕ್ಷಕ್ಕೆ (ಸೆ.7) ಏರಿಕೆಯಾಗಿತ್ತು.
7 ದಿನಗಳಲ್ಲಿ 1.51 ಲಕ್ಷ ಮಂದಿ ಸೋಂಕಿತರಾಗಿದ್ದಾರೆ
ಮುಂದಿನ 94 ಸಾವಿರ ಪ್ರಕರಣಗಳು 10 ದಿನಗಳಲ್ಲಿ ವರದಿಯಾಗಿವೆ. ಈ ತಿಂಗಳ 17 ದಿನಗಳಲ್ಲಿ 1.51 ಲಕ್ಷ ಮಂದಿ ಸೋಂಕಿತರಾಗಿದ್ದಾರೆ. ಈ ಅವಧಿಯಲ್ಲಿ ಪ್ರತಿನಿತ್ಯ ಸರಾಸರಿ 8,903 ಮಂದಿ ಕೋವಿಡ್ ಪೀಡಿತರಾಗಿರುವುದು ದೃಢಪಟ್ಟಿದೆ. ಕೊರೊನಾ ಸೋಂಕಿತರಲ್ಲಿ ಮತ್ತೆ 93 ಮಂದಿ ಮೃತಪಟ್ಟಿದ್ದು, ಈವರೆಗೆ ಕೋವಿಡ್ಗೆ ಸಾವಿಗೀಡಾದವರ ಸಂಖ್ಯೆ 7,629ಕ್ಕೆ ಏರಿಕೆಯಾಗಿದೆ. ಒಂದೇ ದಿನ 72,030 ಮಂದಿಗೆ ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗಿದೆ. ಈವರೆಗೆ ಕೋವಿಡ್ ಪರೀಕ್ಷೆ ಮಾಡಿಸಿಕೊಂಡವರ ಸಂಖ್ಯೆ 40 ಲಕ್ಷದ ಗಡಿ ದಾಟಿದೆ. ಸೋಂಕಿತರಲ್ಲಿ ಬೆಂಗಳೂರಿನಲ್ಲಿ 2,184 ಮಂದಿ ಸೇರಿದಂತೆ ರಾಜ್ಯದಲ್ಲಿ 7,268 ಮಂದಿಗೆ ಕಾಯಿಲೆ ವಾಸಿಯಾಗಿದೆ. ರಾಜ್ಯದಲ್ಲಿ ಈವರೆಗೆ ಗುಣಮುಖರಾದವರ ಸಂಖ್ಯೆ 3.83 ಲಕ್ಷಕ್ಕೆ ಮುಟ್ಟಿದೆ.
ಬೆಂಗಳೂರಿನಲ್ಲಿ ಹೊಸದಾಗಿ 3,799 ಕೋವಿಡ್ ಪ್ರಕರಣಗಳು ವರದಿ ಯಾಗಿದ್ದು, ಸೋಂಕಿತರ ಸಂಖ್ಯೆ 1.84ಲಕ್ಷ ದಾಟಿದೆ. ಬಳ್ಳಾರಿಯಲ್ಲಿ ಹೊಸದಾಗಿ 677 ಪ್ರಕರಣಗಳು ವರದಿಯಾಗಿವೆ. ಮೈಸೂರಿನಲ್ಲಿ ಮತ್ತೆ 591 ಮಂದಿ ಕೋವಿಡ್ ಪೀಡಿತರಾಗಿದ್ದಾರೆ. ಅಲ್ಲಿಒಟ್ಟು ಸೋಂಕಿತರ ಸಂಖ್ಯೆ 28 ಸಾವಿರ ದಾಟಿದೆ. ತುಮಕೂರು (381), ದಕ್ಷಿಣ ಕನ್ನಡ (308), ಬೆಳಗಾವಿ (295) ಜಿಲ್ಲೆ ಯಲ್ಲಿಯೂ ಅಧಿಕ ಪ್ರಕರಣಗಳು ಹೊಸದಾಗಿ ವರದಿಯಾಗಿವೆ.
13-04-25 10:58 pm
HK News Desk
ಜಾತಿ ಸಮೀಕ್ಷೆ ದೋಷಪೂರಿತ, ರಾಜ್ಯಕ್ಕೆ ಜಾತಿಗಣತಿ ಮಾಡ...
12-04-25 11:09 pm
Annapoorneshwari Nagar Police Inspector, A.V....
11-04-25 11:10 pm
Sameer MD, Vidoe Deleted, Dharmasthala: ಸೌಜನ್...
11-04-25 10:27 pm
Bangalore High court, Birthday, suspend: ಬೆಂಗ...
11-04-25 03:45 pm
13-04-25 06:15 pm
HK News Desk
Waqf clashes: ವಕ್ಫ್ ವಿರುದ್ಧ ಬೀದಿಗಿಳಿದ ಜನರು ;...
12-04-25 09:01 pm
Indian Mujahideen, Yasin Bhatkal: ಹೈದರಾಬಾದ್ ಬ...
10-04-25 09:10 pm
ಪಂಬನ್ ಸೇತುವೆ ಬೆನ್ನಲ್ಲೇ ಲಂಕಾ- ಭಾರತ ರೈಲ್ವೇ ಯಾನ...
10-04-25 01:25 pm
ಪಿಯುಸಿ ಹುಡುಗನ ವರಿಸಿದ ಮೂರು ಮಕ್ಕಳ ತಾಯಿ ; ಇಸ್ಲಾಂ...
10-04-25 11:30 am
13-04-25 05:20 pm
Mangalore Correspondent
ಮಂಗಳೂರಿಗೆ ಮತ್ತೊಂದು ವಂದೇ ಭಾರತ್ ರೈಲು ; ಪ್ರತ್ಯೇಕ...
13-04-25 01:27 pm
Siddaramaiah, caste census, Somanna: ಜಾತಿಗಣತಿ...
12-04-25 10:13 pm
Mangalore Kambala, Dk Shivakumar: ಮುಂದಿನ ವರ್ಷ...
12-04-25 09:43 pm
Dinesh Gundurao, Mangalore: ಸರಕಾರಿ ಆಸ್ಪತ್ರೆಗಳ...
12-04-25 05:30 pm
12-04-25 10:52 pm
Mangalore Correspondent
ಸರ್ಕಾರಿ ಅಧಿಕಾರಿ ಸೋಗಿನಲ್ಲಿ ನಕಲಿ ಕೋರ್ಟ್ ಆದೇಶ ಸೃ...
12-04-25 01:53 pm
Cyber Command Centre, Bangalore: ದೇಶದ ಮೊದಲ ಸೈ...
11-04-25 04:38 pm
Davanagere Murder, Suicide, Crime: ಪ್ರೀತಿಸಿ ಮ...
11-04-25 01:52 pm
Mangalore Auto Driver, Kunjathbail, Body, Cri...
11-04-25 11:42 am