ಬ್ರೇಕಿಂಗ್ ನ್ಯೂಸ್
17-09-20 09:59 pm Headline Karnataka News Network ಕರ್ನಾಟಕ
ಬೆಂಗಳೂರು, ಸೆ.17: ರಾಜ್ಯದಲ್ಲಿ ಮತ್ತೆ 9,366 ಮಂದಿ ಪೀಡಿತರಾಗಿರುವುದು ಗುರುವಾರ ದೃಢಪಟ್ಟಿದೆ. ಇದರಿಂದಾಗಿ ಸೋಂಕಿತರ ಸಂಖ್ಯೆ 5 ಲಕ್ಷದತ್ತ (4.94 ಲಕ್ಷ)ದಾಪುಗಾಲು ಇರಿಸಿದೆ.
ರಾಜ್ಯದಲ್ಲಿ ಮೊದಲ ಕೋವಿಡ್ ಪ್ರಕರಣ ಮಾ.8 ರಂದು ವರದಿಯಾಗಿತ್ತು. ಬಳಿಕ ಪ್ರಕರಣಗಳ ಸಂಖ್ಯೆ 1 ಲಕ್ಷದ ಗಡಿ ತಲುಪಲು 108 ದಿನ ಹಿಡಿದಿತ್ತು. ನಂತರದ ದಿನಗಳಲ್ಲಿ ಸೋಂಕಿತರ ಸಂಖ್ಯೆ ಏರುಗತಿ ಪಡೆದಿದ್ದರಿಂದ ಕೇವಲ 20 ದಿನಗಳಲ್ಲಿಯೇ ಮತ್ತೊಂದು ಲಕ್ಷ ಪ್ರಕರಣಗಳು ವರದಿಯಾಗಿದ್ದವು. ಅಂದರೆ, ಜುಲೈ 13ಕ್ಕೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 2 ಲಕ್ಷದ ಗಡಿ ದಾಟಿತ್ತು. ಆ.26ಕ್ಕೆ ಸೋಂಕಿತರ ಸಂಖ್ಯೆ 3 ಲಕ್ಷ ತಲುಪಿತ್ತು. ಬಳಿಕ 12 ದಿನಗಳಲ್ಲಿ ಮತ್ತೆ ಒಂದು ಲಕ್ಷ ಪ್ರಕರಣ ವರದಿಯಾಗಿ, ಸೋಂಕಿತರ ಸಂಖ್ಯೆ 4 ಲಕ್ಷಕ್ಕೆ (ಸೆ.7) ಏರಿಕೆಯಾಗಿತ್ತು.

7 ದಿನಗಳಲ್ಲಿ 1.51 ಲಕ್ಷ ಮಂದಿ ಸೋಂಕಿತರಾಗಿದ್ದಾರೆ
ಮುಂದಿನ 94 ಸಾವಿರ ಪ್ರಕರಣಗಳು 10 ದಿನಗಳಲ್ಲಿ ವರದಿಯಾಗಿವೆ. ಈ ತಿಂಗಳ 17 ದಿನಗಳಲ್ಲಿ 1.51 ಲಕ್ಷ ಮಂದಿ ಸೋಂಕಿತರಾಗಿದ್ದಾರೆ. ಈ ಅವಧಿಯಲ್ಲಿ ಪ್ರತಿನಿತ್ಯ ಸರಾಸರಿ 8,903 ಮಂದಿ ಕೋವಿಡ್ ಪೀಡಿತರಾಗಿರುವುದು ದೃಢಪಟ್ಟಿದೆ. ಕೊರೊನಾ ಸೋಂಕಿತರಲ್ಲಿ ಮತ್ತೆ 93 ಮಂದಿ ಮೃತಪಟ್ಟಿದ್ದು, ಈವರೆಗೆ ಕೋವಿಡ್ಗೆ ಸಾವಿಗೀಡಾದವರ ಸಂಖ್ಯೆ 7,629ಕ್ಕೆ ಏರಿಕೆಯಾಗಿದೆ. ಒಂದೇ ದಿನ 72,030 ಮಂದಿಗೆ ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗಿದೆ. ಈವರೆಗೆ ಕೋವಿಡ್ ಪರೀಕ್ಷೆ ಮಾಡಿಸಿಕೊಂಡವರ ಸಂಖ್ಯೆ 40 ಲಕ್ಷದ ಗಡಿ ದಾಟಿದೆ. ಸೋಂಕಿತರಲ್ಲಿ ಬೆಂಗಳೂರಿನಲ್ಲಿ 2,184 ಮಂದಿ ಸೇರಿದಂತೆ ರಾಜ್ಯದಲ್ಲಿ 7,268 ಮಂದಿಗೆ ಕಾಯಿಲೆ ವಾಸಿಯಾಗಿದೆ. ರಾಜ್ಯದಲ್ಲಿ ಈವರೆಗೆ ಗುಣಮುಖರಾದವರ ಸಂಖ್ಯೆ 3.83 ಲಕ್ಷಕ್ಕೆ ಮುಟ್ಟಿದೆ.
ಬೆಂಗಳೂರಿನಲ್ಲಿ ಹೊಸದಾಗಿ 3,799 ಕೋವಿಡ್ ಪ್ರಕರಣಗಳು ವರದಿ ಯಾಗಿದ್ದು, ಸೋಂಕಿತರ ಸಂಖ್ಯೆ 1.84ಲಕ್ಷ ದಾಟಿದೆ. ಬಳ್ಳಾರಿಯಲ್ಲಿ ಹೊಸದಾಗಿ 677 ಪ್ರಕರಣಗಳು ವರದಿಯಾಗಿವೆ. ಮೈಸೂರಿನಲ್ಲಿ ಮತ್ತೆ 591 ಮಂದಿ ಕೋವಿಡ್ ಪೀಡಿತರಾಗಿದ್ದಾರೆ. ಅಲ್ಲಿಒಟ್ಟು ಸೋಂಕಿತರ ಸಂಖ್ಯೆ 28 ಸಾವಿರ ದಾಟಿದೆ. ತುಮಕೂರು (381), ದಕ್ಷಿಣ ಕನ್ನಡ (308), ಬೆಳಗಾವಿ (295) ಜಿಲ್ಲೆ ಯಲ್ಲಿಯೂ ಅಧಿಕ ಪ್ರಕರಣಗಳು ಹೊಸದಾಗಿ ವರದಿಯಾಗಿವೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm