ಬ್ರೇಕಿಂಗ್ ನ್ಯೂಸ್
17-09-20 09:59 pm Headline Karnataka News Network ಕರ್ನಾಟಕ
ಬೆಂಗಳೂರು, ಸೆ.17: ರಾಜ್ಯದಲ್ಲಿ ಮತ್ತೆ 9,366 ಮಂದಿ ಪೀಡಿತರಾಗಿರುವುದು ಗುರುವಾರ ದೃಢಪಟ್ಟಿದೆ. ಇದರಿಂದಾಗಿ ಸೋಂಕಿತರ ಸಂಖ್ಯೆ 5 ಲಕ್ಷದತ್ತ (4.94 ಲಕ್ಷ)ದಾಪುಗಾಲು ಇರಿಸಿದೆ.
ರಾಜ್ಯದಲ್ಲಿ ಮೊದಲ ಕೋವಿಡ್ ಪ್ರಕರಣ ಮಾ.8 ರಂದು ವರದಿಯಾಗಿತ್ತು. ಬಳಿಕ ಪ್ರಕರಣಗಳ ಸಂಖ್ಯೆ 1 ಲಕ್ಷದ ಗಡಿ ತಲುಪಲು 108 ದಿನ ಹಿಡಿದಿತ್ತು. ನಂತರದ ದಿನಗಳಲ್ಲಿ ಸೋಂಕಿತರ ಸಂಖ್ಯೆ ಏರುಗತಿ ಪಡೆದಿದ್ದರಿಂದ ಕೇವಲ 20 ದಿನಗಳಲ್ಲಿಯೇ ಮತ್ತೊಂದು ಲಕ್ಷ ಪ್ರಕರಣಗಳು ವರದಿಯಾಗಿದ್ದವು. ಅಂದರೆ, ಜುಲೈ 13ಕ್ಕೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 2 ಲಕ್ಷದ ಗಡಿ ದಾಟಿತ್ತು. ಆ.26ಕ್ಕೆ ಸೋಂಕಿತರ ಸಂಖ್ಯೆ 3 ಲಕ್ಷ ತಲುಪಿತ್ತು. ಬಳಿಕ 12 ದಿನಗಳಲ್ಲಿ ಮತ್ತೆ ಒಂದು ಲಕ್ಷ ಪ್ರಕರಣ ವರದಿಯಾಗಿ, ಸೋಂಕಿತರ ಸಂಖ್ಯೆ 4 ಲಕ್ಷಕ್ಕೆ (ಸೆ.7) ಏರಿಕೆಯಾಗಿತ್ತು.

7 ದಿನಗಳಲ್ಲಿ 1.51 ಲಕ್ಷ ಮಂದಿ ಸೋಂಕಿತರಾಗಿದ್ದಾರೆ
ಮುಂದಿನ 94 ಸಾವಿರ ಪ್ರಕರಣಗಳು 10 ದಿನಗಳಲ್ಲಿ ವರದಿಯಾಗಿವೆ. ಈ ತಿಂಗಳ 17 ದಿನಗಳಲ್ಲಿ 1.51 ಲಕ್ಷ ಮಂದಿ ಸೋಂಕಿತರಾಗಿದ್ದಾರೆ. ಈ ಅವಧಿಯಲ್ಲಿ ಪ್ರತಿನಿತ್ಯ ಸರಾಸರಿ 8,903 ಮಂದಿ ಕೋವಿಡ್ ಪೀಡಿತರಾಗಿರುವುದು ದೃಢಪಟ್ಟಿದೆ. ಕೊರೊನಾ ಸೋಂಕಿತರಲ್ಲಿ ಮತ್ತೆ 93 ಮಂದಿ ಮೃತಪಟ್ಟಿದ್ದು, ಈವರೆಗೆ ಕೋವಿಡ್ಗೆ ಸಾವಿಗೀಡಾದವರ ಸಂಖ್ಯೆ 7,629ಕ್ಕೆ ಏರಿಕೆಯಾಗಿದೆ. ಒಂದೇ ದಿನ 72,030 ಮಂದಿಗೆ ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗಿದೆ. ಈವರೆಗೆ ಕೋವಿಡ್ ಪರೀಕ್ಷೆ ಮಾಡಿಸಿಕೊಂಡವರ ಸಂಖ್ಯೆ 40 ಲಕ್ಷದ ಗಡಿ ದಾಟಿದೆ. ಸೋಂಕಿತರಲ್ಲಿ ಬೆಂಗಳೂರಿನಲ್ಲಿ 2,184 ಮಂದಿ ಸೇರಿದಂತೆ ರಾಜ್ಯದಲ್ಲಿ 7,268 ಮಂದಿಗೆ ಕಾಯಿಲೆ ವಾಸಿಯಾಗಿದೆ. ರಾಜ್ಯದಲ್ಲಿ ಈವರೆಗೆ ಗುಣಮುಖರಾದವರ ಸಂಖ್ಯೆ 3.83 ಲಕ್ಷಕ್ಕೆ ಮುಟ್ಟಿದೆ.
ಬೆಂಗಳೂರಿನಲ್ಲಿ ಹೊಸದಾಗಿ 3,799 ಕೋವಿಡ್ ಪ್ರಕರಣಗಳು ವರದಿ ಯಾಗಿದ್ದು, ಸೋಂಕಿತರ ಸಂಖ್ಯೆ 1.84ಲಕ್ಷ ದಾಟಿದೆ. ಬಳ್ಳಾರಿಯಲ್ಲಿ ಹೊಸದಾಗಿ 677 ಪ್ರಕರಣಗಳು ವರದಿಯಾಗಿವೆ. ಮೈಸೂರಿನಲ್ಲಿ ಮತ್ತೆ 591 ಮಂದಿ ಕೋವಿಡ್ ಪೀಡಿತರಾಗಿದ್ದಾರೆ. ಅಲ್ಲಿಒಟ್ಟು ಸೋಂಕಿತರ ಸಂಖ್ಯೆ 28 ಸಾವಿರ ದಾಟಿದೆ. ತುಮಕೂರು (381), ದಕ್ಷಿಣ ಕನ್ನಡ (308), ಬೆಳಗಾವಿ (295) ಜಿಲ್ಲೆ ಯಲ್ಲಿಯೂ ಅಧಿಕ ಪ್ರಕರಣಗಳು ಹೊಸದಾಗಿ ವರದಿಯಾಗಿವೆ.
16-01-26 09:38 pm
Bangalore Correspondent
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
16-01-26 06:33 pm
HK News Desk
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
16-01-26 10:28 pm
Mangalore Correspondent
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
ಡಿಮಾರ್ಟ್ ಶಾಪಿಂಗ್ ಮಾಲ್ ನಲ್ಲಿ ಉದ್ಯೋಗಾವಕಾಶ ಜಾಹಿರ...
16-01-26 12:31 pm
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm