ಬ್ರೇಕಿಂಗ್ ನ್ಯೂಸ್
17-09-20 09:59 pm Headline Karnataka News Network ಕರ್ನಾಟಕ
ಬೆಂಗಳೂರು, ಸೆ.17: ರಾಜ್ಯದಲ್ಲಿ ಮತ್ತೆ 9,366 ಮಂದಿ ಪೀಡಿತರಾಗಿರುವುದು ಗುರುವಾರ ದೃಢಪಟ್ಟಿದೆ. ಇದರಿಂದಾಗಿ ಸೋಂಕಿತರ ಸಂಖ್ಯೆ 5 ಲಕ್ಷದತ್ತ (4.94 ಲಕ್ಷ)ದಾಪುಗಾಲು ಇರಿಸಿದೆ.
ರಾಜ್ಯದಲ್ಲಿ ಮೊದಲ ಕೋವಿಡ್ ಪ್ರಕರಣ ಮಾ.8 ರಂದು ವರದಿಯಾಗಿತ್ತು. ಬಳಿಕ ಪ್ರಕರಣಗಳ ಸಂಖ್ಯೆ 1 ಲಕ್ಷದ ಗಡಿ ತಲುಪಲು 108 ದಿನ ಹಿಡಿದಿತ್ತು. ನಂತರದ ದಿನಗಳಲ್ಲಿ ಸೋಂಕಿತರ ಸಂಖ್ಯೆ ಏರುಗತಿ ಪಡೆದಿದ್ದರಿಂದ ಕೇವಲ 20 ದಿನಗಳಲ್ಲಿಯೇ ಮತ್ತೊಂದು ಲಕ್ಷ ಪ್ರಕರಣಗಳು ವರದಿಯಾಗಿದ್ದವು. ಅಂದರೆ, ಜುಲೈ 13ಕ್ಕೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 2 ಲಕ್ಷದ ಗಡಿ ದಾಟಿತ್ತು. ಆ.26ಕ್ಕೆ ಸೋಂಕಿತರ ಸಂಖ್ಯೆ 3 ಲಕ್ಷ ತಲುಪಿತ್ತು. ಬಳಿಕ 12 ದಿನಗಳಲ್ಲಿ ಮತ್ತೆ ಒಂದು ಲಕ್ಷ ಪ್ರಕರಣ ವರದಿಯಾಗಿ, ಸೋಂಕಿತರ ಸಂಖ್ಯೆ 4 ಲಕ್ಷಕ್ಕೆ (ಸೆ.7) ಏರಿಕೆಯಾಗಿತ್ತು.

7 ದಿನಗಳಲ್ಲಿ 1.51 ಲಕ್ಷ ಮಂದಿ ಸೋಂಕಿತರಾಗಿದ್ದಾರೆ
ಮುಂದಿನ 94 ಸಾವಿರ ಪ್ರಕರಣಗಳು 10 ದಿನಗಳಲ್ಲಿ ವರದಿಯಾಗಿವೆ. ಈ ತಿಂಗಳ 17 ದಿನಗಳಲ್ಲಿ 1.51 ಲಕ್ಷ ಮಂದಿ ಸೋಂಕಿತರಾಗಿದ್ದಾರೆ. ಈ ಅವಧಿಯಲ್ಲಿ ಪ್ರತಿನಿತ್ಯ ಸರಾಸರಿ 8,903 ಮಂದಿ ಕೋವಿಡ್ ಪೀಡಿತರಾಗಿರುವುದು ದೃಢಪಟ್ಟಿದೆ. ಕೊರೊನಾ ಸೋಂಕಿತರಲ್ಲಿ ಮತ್ತೆ 93 ಮಂದಿ ಮೃತಪಟ್ಟಿದ್ದು, ಈವರೆಗೆ ಕೋವಿಡ್ಗೆ ಸಾವಿಗೀಡಾದವರ ಸಂಖ್ಯೆ 7,629ಕ್ಕೆ ಏರಿಕೆಯಾಗಿದೆ. ಒಂದೇ ದಿನ 72,030 ಮಂದಿಗೆ ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗಿದೆ. ಈವರೆಗೆ ಕೋವಿಡ್ ಪರೀಕ್ಷೆ ಮಾಡಿಸಿಕೊಂಡವರ ಸಂಖ್ಯೆ 40 ಲಕ್ಷದ ಗಡಿ ದಾಟಿದೆ. ಸೋಂಕಿತರಲ್ಲಿ ಬೆಂಗಳೂರಿನಲ್ಲಿ 2,184 ಮಂದಿ ಸೇರಿದಂತೆ ರಾಜ್ಯದಲ್ಲಿ 7,268 ಮಂದಿಗೆ ಕಾಯಿಲೆ ವಾಸಿಯಾಗಿದೆ. ರಾಜ್ಯದಲ್ಲಿ ಈವರೆಗೆ ಗುಣಮುಖರಾದವರ ಸಂಖ್ಯೆ 3.83 ಲಕ್ಷಕ್ಕೆ ಮುಟ್ಟಿದೆ.
ಬೆಂಗಳೂರಿನಲ್ಲಿ ಹೊಸದಾಗಿ 3,799 ಕೋವಿಡ್ ಪ್ರಕರಣಗಳು ವರದಿ ಯಾಗಿದ್ದು, ಸೋಂಕಿತರ ಸಂಖ್ಯೆ 1.84ಲಕ್ಷ ದಾಟಿದೆ. ಬಳ್ಳಾರಿಯಲ್ಲಿ ಹೊಸದಾಗಿ 677 ಪ್ರಕರಣಗಳು ವರದಿಯಾಗಿವೆ. ಮೈಸೂರಿನಲ್ಲಿ ಮತ್ತೆ 591 ಮಂದಿ ಕೋವಿಡ್ ಪೀಡಿತರಾಗಿದ್ದಾರೆ. ಅಲ್ಲಿಒಟ್ಟು ಸೋಂಕಿತರ ಸಂಖ್ಯೆ 28 ಸಾವಿರ ದಾಟಿದೆ. ತುಮಕೂರು (381), ದಕ್ಷಿಣ ಕನ್ನಡ (308), ಬೆಳಗಾವಿ (295) ಜಿಲ್ಲೆ ಯಲ್ಲಿಯೂ ಅಧಿಕ ಪ್ರಕರಣಗಳು ಹೊಸದಾಗಿ ವರದಿಯಾಗಿವೆ.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm