ಬ್ರೇಕಿಂಗ್ ನ್ಯೂಸ್
17-09-20 09:59 pm Headline Karnataka News Network ಕರ್ನಾಟಕ
ಬೆಂಗಳೂರು, ಸೆ.17: ರಾಜ್ಯದಲ್ಲಿ ಮತ್ತೆ 9,366 ಮಂದಿ ಪೀಡಿತರಾಗಿರುವುದು ಗುರುವಾರ ದೃಢಪಟ್ಟಿದೆ. ಇದರಿಂದಾಗಿ ಸೋಂಕಿತರ ಸಂಖ್ಯೆ 5 ಲಕ್ಷದತ್ತ (4.94 ಲಕ್ಷ)ದಾಪುಗಾಲು ಇರಿಸಿದೆ.
ರಾಜ್ಯದಲ್ಲಿ ಮೊದಲ ಕೋವಿಡ್ ಪ್ರಕರಣ ಮಾ.8 ರಂದು ವರದಿಯಾಗಿತ್ತು. ಬಳಿಕ ಪ್ರಕರಣಗಳ ಸಂಖ್ಯೆ 1 ಲಕ್ಷದ ಗಡಿ ತಲುಪಲು 108 ದಿನ ಹಿಡಿದಿತ್ತು. ನಂತರದ ದಿನಗಳಲ್ಲಿ ಸೋಂಕಿತರ ಸಂಖ್ಯೆ ಏರುಗತಿ ಪಡೆದಿದ್ದರಿಂದ ಕೇವಲ 20 ದಿನಗಳಲ್ಲಿಯೇ ಮತ್ತೊಂದು ಲಕ್ಷ ಪ್ರಕರಣಗಳು ವರದಿಯಾಗಿದ್ದವು. ಅಂದರೆ, ಜುಲೈ 13ಕ್ಕೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 2 ಲಕ್ಷದ ಗಡಿ ದಾಟಿತ್ತು. ಆ.26ಕ್ಕೆ ಸೋಂಕಿತರ ಸಂಖ್ಯೆ 3 ಲಕ್ಷ ತಲುಪಿತ್ತು. ಬಳಿಕ 12 ದಿನಗಳಲ್ಲಿ ಮತ್ತೆ ಒಂದು ಲಕ್ಷ ಪ್ರಕರಣ ವರದಿಯಾಗಿ, ಸೋಂಕಿತರ ಸಂಖ್ಯೆ 4 ಲಕ್ಷಕ್ಕೆ (ಸೆ.7) ಏರಿಕೆಯಾಗಿತ್ತು.

7 ದಿನಗಳಲ್ಲಿ 1.51 ಲಕ್ಷ ಮಂದಿ ಸೋಂಕಿತರಾಗಿದ್ದಾರೆ
ಮುಂದಿನ 94 ಸಾವಿರ ಪ್ರಕರಣಗಳು 10 ದಿನಗಳಲ್ಲಿ ವರದಿಯಾಗಿವೆ. ಈ ತಿಂಗಳ 17 ದಿನಗಳಲ್ಲಿ 1.51 ಲಕ್ಷ ಮಂದಿ ಸೋಂಕಿತರಾಗಿದ್ದಾರೆ. ಈ ಅವಧಿಯಲ್ಲಿ ಪ್ರತಿನಿತ್ಯ ಸರಾಸರಿ 8,903 ಮಂದಿ ಕೋವಿಡ್ ಪೀಡಿತರಾಗಿರುವುದು ದೃಢಪಟ್ಟಿದೆ. ಕೊರೊನಾ ಸೋಂಕಿತರಲ್ಲಿ ಮತ್ತೆ 93 ಮಂದಿ ಮೃತಪಟ್ಟಿದ್ದು, ಈವರೆಗೆ ಕೋವಿಡ್ಗೆ ಸಾವಿಗೀಡಾದವರ ಸಂಖ್ಯೆ 7,629ಕ್ಕೆ ಏರಿಕೆಯಾಗಿದೆ. ಒಂದೇ ದಿನ 72,030 ಮಂದಿಗೆ ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗಿದೆ. ಈವರೆಗೆ ಕೋವಿಡ್ ಪರೀಕ್ಷೆ ಮಾಡಿಸಿಕೊಂಡವರ ಸಂಖ್ಯೆ 40 ಲಕ್ಷದ ಗಡಿ ದಾಟಿದೆ. ಸೋಂಕಿತರಲ್ಲಿ ಬೆಂಗಳೂರಿನಲ್ಲಿ 2,184 ಮಂದಿ ಸೇರಿದಂತೆ ರಾಜ್ಯದಲ್ಲಿ 7,268 ಮಂದಿಗೆ ಕಾಯಿಲೆ ವಾಸಿಯಾಗಿದೆ. ರಾಜ್ಯದಲ್ಲಿ ಈವರೆಗೆ ಗುಣಮುಖರಾದವರ ಸಂಖ್ಯೆ 3.83 ಲಕ್ಷಕ್ಕೆ ಮುಟ್ಟಿದೆ.
ಬೆಂಗಳೂರಿನಲ್ಲಿ ಹೊಸದಾಗಿ 3,799 ಕೋವಿಡ್ ಪ್ರಕರಣಗಳು ವರದಿ ಯಾಗಿದ್ದು, ಸೋಂಕಿತರ ಸಂಖ್ಯೆ 1.84ಲಕ್ಷ ದಾಟಿದೆ. ಬಳ್ಳಾರಿಯಲ್ಲಿ ಹೊಸದಾಗಿ 677 ಪ್ರಕರಣಗಳು ವರದಿಯಾಗಿವೆ. ಮೈಸೂರಿನಲ್ಲಿ ಮತ್ತೆ 591 ಮಂದಿ ಕೋವಿಡ್ ಪೀಡಿತರಾಗಿದ್ದಾರೆ. ಅಲ್ಲಿಒಟ್ಟು ಸೋಂಕಿತರ ಸಂಖ್ಯೆ 28 ಸಾವಿರ ದಾಟಿದೆ. ತುಮಕೂರು (381), ದಕ್ಷಿಣ ಕನ್ನಡ (308), ಬೆಳಗಾವಿ (295) ಜಿಲ್ಲೆ ಯಲ್ಲಿಯೂ ಅಧಿಕ ಪ್ರಕರಣಗಳು ಹೊಸದಾಗಿ ವರದಿಯಾಗಿವೆ.
07-11-25 09:59 pm
HK News Desk
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm