ಬ್ರೇಕಿಂಗ್ ನ್ಯೂಸ್
06-02-22 10:59 pm HK Desk news ಕರ್ನಾಟಕ
ಬೆಂಗಳೂರು, ಫೆ.6 : ಪಬ್ ನಲ್ಲಿ ಕನ್ನಡ ಹಾಡು ಪ್ಲೇ ಮಾಡಿ ಎಂದಿದ್ದಕ್ಕೆ ಯುವತಿ ಹಾಗೂ ಆಕೆಯ ಸೋದರನ ಮೇಲೆ ಬೌನ್ಸರ್ ಮತ್ತು ಡಿಜೆಗಳು ಹಲ್ಲೆಗೆ ಮುಂದಾಗಿ ಆವಾಜ್ ಹಾಕಿದ ಘಟನೆ ಕೋರಮಂಗಲ 80 ಫೀಟ್ ರಸ್ತೆಯಲ್ಲಿರುವ ಬದ್ಮಾಷ್ ಪಬ್ ನಲ್ಲಿ ನಡೆದಿದೆ.
ಯುವತಿ ಸುಮಿತಾ ಹಾಗೂ ಸಹೋದರ ನಂದಕಿಶೋರ್ ಮೇಲೆ ಡಿಜೆ ಹಲ್ಲೆಗೆ ಮುಂದಾದ ಆರೋಪದಲ್ಲಿ ಬದ್ಮಾಷ್ ಪಬ್ ಡಿಜೆ ಸಿದ್ಧಾರ್ಥ್ ವಿರುದ್ಧ ಪ್ರಕರಣ ದಾಖಲಾಗಿದೆ. ಶನಿವಾರ ರಾತ್ರಿ ಸುಮಿತಾ ಎಂಬಾಕೆಯ ಹುಟ್ಟುಹಬ್ಬ ಇತ್ತು. ಬದ್ಮಾಷ್ ಪಬ್ ನಲ್ಲಿ ಹುಟ್ಟುಹಬ್ಬ ಆಚರಣೆಗೆಂದು ಆಕೆಯ ಸಹೋದರು ಹಾಗೂ ಸ್ನೇಹಿತರ 15 ಜನರ ತಂಡ ತೆರಳಿತ್ತು. ರಾತ್ರಿ 9 ಗಂಟೆಗೆ ಇವರು ಹೋಗಿದ್ದರು. ಈ ನಡುವೆ, ಕನ್ನಡ ಹಾಡು ಪ್ಲೇ ಮಾಡಿ ಎಂದು ಮನವಿ ಮಾಡಿದ್ದಾರೆ. 9.30 ರಿಂದ ರಾತ್ರಿ 12.30ರ ವರೆಗೂ ಡಿಜೆ ಸಿದ್ದಾರ್ಥ್ ಬಳಿ ಮನವಿ ಮಾಡಿದ್ದಾರೆ.

ಸ್ವತಃ ಯುವತಿ ಸುಮಿತಾ ಡಿಜೆ ಬಳಿ ತೆರಳಿ ಒಂದೇ ಒಂದು ಕನ್ನಡ ಹಾಡು ಹಾಕಿ ಎಂದು ನಾಲ್ಕೈದು ಬಾರಿ ಮನವಿ ಮಾಡಿದ್ದರು. ಅಲ್ಲದೆ, ಸುಮಿತಾಳ ಸಹೋದರ ಡಾ.ದೀಪಕ್ ಕೂಡ ಕನ್ನಡ ಹಾಡಿಗೆ ಮನವಿ ಮಾಡಿದ್ದರು. ಆದರೆ ಕನ್ನಡ ಸಾಂಗ್ ಹಾಕಲಿಕ್ಕೆ ಆಗಲ್ಲ, ಕನ್ನಡ ಸಾಂಗ್ ಕೇಳೋದಾದ್ರೆ ಹೊರಗ್ ಹೋಗಿ ಅಂತ ಡಿಜೆ ಅವಾಜ್ ಹಾಕಿದ್ದಾನೆಂದು ಸುಮಿತಾ ಆರೋಪಿಸಿದ್ದಾರೆ. ಪದೇ ಪದೇ ಕೇಳ್ತಿದ್ದಾಗ ಇವರಿದ್ದ ಟೇಬಲ್ ಬಳಿ ಬಂದ ಡಿಜೆ, ಸುಮಿತಾ ಸಹೋದರ ನಂದಕಿಶೋರ್ ಕಾಲರ್ ಹಿಡಿದು ಆವಾಜ್ ಹಾಕಿದ್ದಾನೆ. ಈ ವೇಳೆ ಪಬ್ ನಲ್ಲಿ ವಾಗ್ವಾದ ನಡೆದಿದ್ದು ಡಿಜೆ ಸಿದ್ದಾರ್ಥ ಕನ್ನಡದ ಬಗ್ಗೆ ಕೇವಲವಾಗಿ ಆಡಿಕೊಂಡಿದ್ದಾನೆ.

ಕನ್ನಡ ಸಾಂಗ್ ಹಾಕದೇ ತೆಲುಗು, ತಮಿಳು, ಹಿಂದಿ ಹಾಡುಗಳನ್ನ ಪ್ಲೇ ಮಾಡಿದ್ದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದ್ದ. ಈ ಬಗ್ಗೆ ಸುಮಿತಾ ಅಂಡ್ ಟೀಮ್, ಕೋರಮಂಗಲ ಪೊಲೀಸರಿಗೆ ಮಾಹಿತಿ ನೀಡಿದ್ರೂ ಅವರು ಸ್ಥಳಕ್ಕೆ ಬರದೆ ನಿರ್ಲಕ್ಷ್ಯ ವಹಿಸಿದ್ದಾರೆ. ನಸುಕಿನ ಎರಡು ಗಂಟೆ ವರೆಗೂ ಪಬ್ ಬಾಗಿಲು ಓಪನ್ ಇದ್ರೂ ಪೊಲೀಸರು ಕ್ಯಾರೆ ಮಾಡಿಲ್ಲ ಎಂದು ಆರೋಪಿಸಲಾಗಿದೆ.
Fight erupts in Badmaash Pub Bangalore over not playing Kannada song. It is also alleged that DJ Siddarth tried to assault girl and his brother who demanded to play Kannada song. The pub is said to be open till midnight two in the morning and the police aren't taking any action she added.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am