ಬ್ರೇಕಿಂಗ್ ನ್ಯೂಸ್
07-02-22 10:17 pm HK Desk news ಕರ್ನಾಟಕ
ರಾಮನಗರ, ಫೆ.7 : ಹಿಜಾಬ್ ಹಾಗೂ ಕೇಸರಿ ಶಾಲು ಹೆಸರಲ್ಲಿ ಶಾಲೆಗೆ ಹೋಗುವ ಸಣ್ಣ ಮಕ್ಕಳಲ್ಲಿ ಸಂಕುಚಿತ ಮನೋಭಾವ ತರಬೇಡಿ. ಅಲ್ಲಿಂದಲೇ ದ್ವೇಷದ ರಾಜಕಾರಣಕ್ಕೆ ಬೆಂಕಿ ಹಚ್ಚಬೇಡಿ ಎಂದು ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ, ಕಾಂಗ್ರೆಸ್, ಬಿಜೆಪಿ ರಾಷ್ಟ್ರೀಯ ಪಕ್ಷಗಳಿಗೆ ಸಲಹೆ ಮಾಡಿದ್ದಾರೆ.
ಚನ್ನಪಟ್ಟಣದಲ್ಲಿ ಈ ಬಗ್ಗೆ ಮಾತನಾಡಿದ ಅವರು, ಬಿಜೆಪಿ ಮತ್ತು ಕಾಂಗ್ರೆಸ್ ಸಮಾಜ ಒಡೆದು ಮತ ಪಡೆಯಲು ಹೊರಟಿದೆ. ಈ ವಿಷಯವಾಗಿ ಎರಡು ರಾಷ್ಟ್ರೀಯ ಪಕ್ಷಗಳು ಪ್ರಾಮುಖ್ಯತೆ ನೀಡುತ್ತಿವೆ. ಬಿಜೆಪಿ ಹಾಗೂ ಕಾಂಗ್ರೆಸ್ ಕರಾವಳಿಯಲ್ಲಿ ದ್ವೇಷದ ರಾಜಕಾರಣ ಬಿತ್ತುತ್ತಿದೆ ಎಂದು ಆರೋಪಿಸಿದರು.
ಶಾಲೆಗಳಲ್ಲಿ ದ್ವೇಷ, ಅಶಾಂತಿ ವಾತಾವರಣ ಮೂಡಿಸಬೇಡಿ. ಮಕ್ಕಳಲ್ಲಿ ಪರಿಶುದ್ಧ ಮನಸ್ಸು ಇರುತ್ತದೆ. ಮಕ್ಕಳನ್ನು ಇಂತಹ ಸ್ಥಿತಿಗೆ ತಂದರೆ ಸಮಾಜದ ಪರಿಸ್ಥಿತಿ ಏನು ? ಸಂಘಟನೆಗಳ ಚಿತಾವಣೆಗೆ ಮಕ್ಕಳು ಬಲಿಯಾಗುತ್ತಿದ್ದಾರೆ. ಮಕ್ಕಳು ಸಹ ಇಂತಹ ಚಿತಾವಣೆಗೆ ಬಲಿಯಾಗಬಾರದು. ಅವರಿಗೂ ನಾನು ತಿಳಿ ಹೇಳುತ್ತೇನೆ, ಇವರ ಚಿತಾವಣೆಗೆ ಬಲಿಯಾಗಬೇಡಿ ಎಂದು. ನಮ್ಮ ಧಾರ್ಮಿಕ ಸಂಸ್ಕೃತಿಯನ್ನ ಯಾರು ಅಲುಗಾಡಿಸಲು ಸಾಧ್ಯವಿಲ್ಲ. ಒಬ್ಬರು ಕೇಸರಿ ಮತ್ತೊಬ್ಬರು ಹಿಜಾಬ್ ಧರಿಸುತ್ತಿದ್ದು ರೈತರ ಮಕ್ಕಳು ಹಸಿರು ಶಾಲು ಹಾಕಿಕೊಂಡು ತೆರಳಬೇಕೆ ಎಂದು ಪ್ರಶ್ನೆ ಮಾಡಿದರು.

ನಾಡಿನಲ್ಲಿ ನೂರಾರು ಸಮಸ್ಯೆ ಇದೆ. ಹೀಗಾಗಿ ಈ ಸಮಸ್ಯೆಗಳ ಬಗ್ಗೆ ಗಮನ ಹರಿಸಿ. ಕೇಸರಿ ಅಥವಾ ಹಿಜಾಬ್ ಧರಿಸಿದ ಕೂಡಲೇ ಸಮಾಜ ಉದ್ಧಾರವಾಗುತ್ತದೋ ? ಇದರಿಂದ ಸಮಾಜದ ಉದ್ದಾರ ಸಾಧ್ಯವಿಲ್ಲ. ಇಂತಹ ಕ್ಷುಲ್ಲಕ ವಿಷಯ ಇಟ್ಟುಕೊಂಡು ಸಮಾಜದ ಉದ್ದಾರ ಸಾಧ್ಯವಿಲ್ಲ. ಬದುಕು ನಮಗೆ ಮುಖ್ಯ, ರಾಷ್ಟ್ರೀಯ ಪಕ್ಷಗಳು ತಮ್ಮ ಜವಾಬ್ದಾರಿ ನಿರ್ವಹಣೆ ಮಾಡಲಿ. ಈ ಬಗ್ಗೆ ನೋವಿನಿಂದಲೇ ಎರಡೂ ಪಕ್ಷಗಳಿಗೆ ಹೇಳುತ್ತೇನೆ, ಸಮಾಜ ಹಾಗೂ ಧಾರ್ಮಿಕ ಸಂಸ್ಕೃತಿಯನ್ನು ಜನ ಕಾಪಾಡಿಕೊಳ್ಳುತ್ತಾರೆ. ಇದನ್ನು ಈ ಪಕ್ಷಗಳು ಅಥವಾ ಸಂಘಟನೆಯಿಂದ ಕಲಿಯಬೇಕಿಲ್ಲ ಎಂದು ಕಿಡಿಕಾರಿದರು.
Bengaluru, As students across Karnataka were coming to colleges wearing hijabs and saffron shawls, Chief Minister Basavaraj Bommai and Education Minister B.C. Nagesh on Monday urged them not to get provoked and follow government orders regarding the ongoing row.
20-06-26 01:33 pm
HK News Staffer
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 09:05 pm
HK News Staffer
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
19-06-26 09:07 pm
HK News Staffer
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm